Homeಅಂತರಾಷ್ಟ್ರೀಯಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ 'ವಿದಾಯ ಚಿತ್ರ' ಬಿಡುಗಡೆ

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

- Advertisement -
- Advertisement -

ಗಾಝಾ ನಗರದಲ್ಲಿ ಇಸ್ರೇಲ್ ಆಕ್ರಮಣ ತೀವ್ರಗೊಳಿಸಿರುವ ನಡುವೆ, ಹಮಾಸ್‌ನ ಸಶಸ್ತ್ರ ವಿಭಾಗವು 48 ಇಸ್ರೇಲಿ ಒತ್ತೆಯಾಳುಗಳ ‘ವಿದಾಯ’ ಚಿತ್ರವನ್ನು ಬಿಡುಗಡೆ ಮಾಡಿದೆ.

1986ರಲ್ಲಿ ಲೆಬನಾನ್‌ನಲ್ಲಿ ಕಾಣೆಯಾದ ಇಸ್ರೇಲಿ ವಾಯುಪಡೆಯ ನಾಯಕನನ್ನು ಉಲ್ಲೇಖಿಸಿ, ‘ರಾನ್ ಅರಾದ್’ ಎಂಬ ಶೀರ್ಷಿಕೆಯೊಂದಿಗೆ, ಎಲ್ಲಾ ಜೀವಂತ ಮತ್ತು ಸತ್ತ ಒತ್ತೆಯಾಳುಗಳ ಮುಖಗಳನ್ನು ತೋರಿಸುವ ಕೊಲಾಜ್ ಫೋಟೋವನ್ನು ಕಸ್ಸಮ್ ಬ್ರಿಗೇಡ್ಸ್ ಶನಿವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದೆ.

ದಕ್ಷಿಣ ಲೆಬನಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಇಸ್ರೇಲಿ ವಾಯುಪಡೆಯ ನಾಯಕ ಅರಾದ್ ಇದ್ದ ಎಫ್-4 ಫ್ಯಾಂಟಮ್ ವಿಮಾನವು ಬಾಂಬ್ ದಾಳಿಯಿಂದ ಪತನವಾದ ಬಳಿಕ, ಅರಾದ್ ನನ್ನು ಅಮಲ್ ಮೂವ್‌ಮೆಂಟ್ ಕೈಗೆ ಸಿಕ್ಕು ಹಿಜ್ಬುಲ್ಲಾ ಗೆ ಹಸ್ತಾಂತರ ಮಾಡಲಾಗಿತ್ತು. ಅರಾದ್ ಜೀವಿತದ ಬಗ್ಗೆ ನಿರ್ಣಾಯಕ ಪುರಾವೆ ಸಿಕ್ಕಿಲ್ಲದಿದ್ದರೂ, ಆತ ಮೃತಪಟ್ಟಿದ್ದಾರೆ ಎಂದು ನಂಬಲಾಗಿದೆ. ಹಮಾಸ್ ಇದೀಗ ಅದೇ ನಾಮಧೇಯವನ್ನು ಬಳಸಿ ಇಸ್ರೇಲಿ ಒತ್ತೆಯಾಳುಗಳ ಭವಿಷ್ಯದ ಬಗ್ಗೆ ಗಂಭೀರ ಸಂದೇಶ ಕಳುಹಿಸಿದೆ.

“ನೆತನ್ಯಾಹು ಅವರ ನಿರಾಕರಣೆ ಮತ್ತು ಝಮೀರ್ ಅವರ ಶರಣಾಗತಿಯಿಂದಾಗಿ, ಗಾಝಾ ನಗರದಲ್ಲಿ ಸೈನಿಕ ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ವಿದಾಯ ಚಿತ್ರ” ಎಂದು ಫೋಟೋದೊಂದಿಗೆ ಹಮಾಸ್ ಪ್ರಕಟಣೆ ನೀಡಿದೆ.

ಈ ಮೂಲಕ ಹಮಾಸ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಲ್ಲಾ ಒಪ್ಪಂದಗಳನ್ನು ತಿರಸ್ಕರಿಸಿರುವುದನ್ನು ಹಾಗೂ ಸೇನಾ ಮುಖ್ಯಸ್ಥ ಇಯಾಲ್ ಝಮೀರ್ ನೇತೃತ್ವದಲ್ಲಿ ದಾಳಿಗಳು ತೀವ್ರಗೊಂಡಿರುವುದನ್ನು ಉಲ್ಲೇಖಿಸಿದೆ.

ಇಸ್ರೇಲ್ ಅಧಿಕಾರಿಗಳ ಪ್ರಕಾರ ಗಾಝಾದಲ್ಲಿ ಒತ್ತೆಯಾಳಾಗಿರುವವರಲ್ಲಿ ಸುಮಾರು 20 ಮಂದಿ ಜೀವಂತವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸಂಖ್ಯೆ 20ಕ್ಕಿಂತ ಕಡಿಮೆಯಾಗಿರಬಹುದು ಎಂದು ಹೇಳಿದ್ದಾರೆ.

ನೆತನ್ಯಾಹು ಮತ್ತು ಟ್ರಂಪ್ ಇಬ್ಬರೂ, ಎಲ್ಲಾ ಜೀವಂತ ಮತ್ತು ಮೃತಪಟ್ಟ ಒತ್ತೆಯಾಳುಗಳನ್ನು ಮರಳಿ ತರಲಾಗುವುದು ಹಾಗೂ ಹಮಾಸ್ ಅನ್ನು ಸಂಪೂರ್ಣವಾಗಿ ನಾಶಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ವಾಯು ಹಾಗೂ ಪದಾತಿ ದಳದ ದಾಳಿಗಳು ಬಂಧಿತರ ಜೀವಕ್ಕೆ ನೇರ ಅಪಾಯವಾಗುತ್ತದೆ ಎಂದು ಹಮಾಸ್ ಪುನಃ ಎಚ್ಚರಿಸಿದೆ. ಅವರ ಪ್ರಕಾರ, ಕೆಲ ಒತ್ತೆಯಾಳುಗಳು ಈಗಾಗಲೇ ಇಸ್ರೇಲಿನ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ‘ಒತ್ತೆಯಾಳುಗಳು ಗಾಝಾ ನಗರದ ವಿವಿಧ ಪ್ರದೇಶಗಳಲ್ಲಿದ್ದಾರೆ’ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರಕಟಣೆಯ ನಂತರ ಇಸ್ರೇಲ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ಜನರು ಮತ್ತೆ ಟೆಲ್ ಅವೀವ್ ಮತ್ತು ಇತರ ಪ್ರಮುಖ ನಗರಗಳಲ್ಲಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ಯುದ್ಧವನ್ನು ಕೊನೆಗೊಳಿಸಿ, ಒತ್ತೆಯಾಳುಗಳನ್ನು ತಕ್ಷಣ ಮತ್ತು ಸುರಕ್ಷಿತವಾಗಿ ಹಿಂತಿರುಗಿಸುವಂತೆ ಒತ್ತಾಯಿಸಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ, ಹಮಾಸ್ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಆ ದೃಶ್ಯಗಳಲ್ಲಿ ದುರ್ಬಲ ಸ್ಥಿತಿಯಲ್ಲಿದ್ದ ಬಂಧಿತರಲ್ಲಿ ಒಬ್ಬನು ತನ್ನದೇ ಸಮಾಧಿಯನ್ನು ತೋಡುತ್ತಿರುವುದಾಗಿ ತೋರಿಸಲಾಗಿತ್ತು. ಈ ದೃಶ್ಯಗಳು ಬಂಧಿತರ ಕುಟುಂಬಗಳಲ್ಲಿಯೂ, ಇಸ್ರೇಲಿ ಸರ್ಕಾರದಲ್ಲಿಯೂ ಹಾಗೂ ಅಮೆರಿಕ ಸೇರಿದಂತೆ ಇಸ್ರೇಲ್ ಮಿತ್ರ ರಾಷ್ಟ್ರಗಳಲ್ಲಿಯೂ ಆಕ್ರೋಶ ಹುಟ್ಟಿಸಿತ್ತು.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದ ನಂತರದಿಂದ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕನಿಷ್ಠ 65,208 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ ಮತ್ತು 1,66,271 ಮಂದಿ ಗಾಯಗೊಂಡಿದ್ದಾರೆ. ಮಾರ್ಚ್ 18ರಂದು ಇಸ್ರೇಲ್ ಹಮಾಸ್ ಜೊತೆಗಿನ ಕದನ ವಿರಾಮವನ್ನು ಮುರಿದ ನಂತರದಿಂದಲೇ 12,653 ಜನರು ಮೃತಪಟ್ಟು, 54,230 ಮಂದಿ ಗಾಯಗೊಂಡಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...