Homeಅಂತರಾಷ್ಟ್ರೀಯಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ 'ವಿದಾಯ ಚಿತ್ರ' ಬಿಡುಗಡೆ

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

- Advertisement -
- Advertisement -

ಗಾಝಾ ನಗರದಲ್ಲಿ ಇಸ್ರೇಲ್ ಆಕ್ರಮಣ ತೀವ್ರಗೊಳಿಸಿರುವ ನಡುವೆ, ಹಮಾಸ್‌ನ ಸಶಸ್ತ್ರ ವಿಭಾಗವು 48 ಇಸ್ರೇಲಿ ಒತ್ತೆಯಾಳುಗಳ ‘ವಿದಾಯ’ ಚಿತ್ರವನ್ನು ಬಿಡುಗಡೆ ಮಾಡಿದೆ.

1986ರಲ್ಲಿ ಲೆಬನಾನ್‌ನಲ್ಲಿ ಕಾಣೆಯಾದ ಇಸ್ರೇಲಿ ವಾಯುಪಡೆಯ ನಾಯಕನನ್ನು ಉಲ್ಲೇಖಿಸಿ, ‘ರಾನ್ ಅರಾದ್’ ಎಂಬ ಶೀರ್ಷಿಕೆಯೊಂದಿಗೆ, ಎಲ್ಲಾ ಜೀವಂತ ಮತ್ತು ಸತ್ತ ಒತ್ತೆಯಾಳುಗಳ ಮುಖಗಳನ್ನು ತೋರಿಸುವ ಕೊಲಾಜ್ ಫೋಟೋವನ್ನು ಕಸ್ಸಮ್ ಬ್ರಿಗೇಡ್ಸ್ ಶನಿವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದೆ.

ದಕ್ಷಿಣ ಲೆಬನಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಇಸ್ರೇಲಿ ವಾಯುಪಡೆಯ ನಾಯಕ ಅರಾದ್ ಇದ್ದ ಎಫ್-4 ಫ್ಯಾಂಟಮ್ ವಿಮಾನವು ಬಾಂಬ್ ದಾಳಿಯಿಂದ ಪತನವಾದ ಬಳಿಕ, ಅರಾದ್ ನನ್ನು ಅಮಲ್ ಮೂವ್‌ಮೆಂಟ್ ಕೈಗೆ ಸಿಕ್ಕು ಹಿಜ್ಬುಲ್ಲಾ ಗೆ ಹಸ್ತಾಂತರ ಮಾಡಲಾಗಿತ್ತು. ಅರಾದ್ ಜೀವಿತದ ಬಗ್ಗೆ ನಿರ್ಣಾಯಕ ಪುರಾವೆ ಸಿಕ್ಕಿಲ್ಲದಿದ್ದರೂ, ಆತ ಮೃತಪಟ್ಟಿದ್ದಾರೆ ಎಂದು ನಂಬಲಾಗಿದೆ. ಹಮಾಸ್ ಇದೀಗ ಅದೇ ನಾಮಧೇಯವನ್ನು ಬಳಸಿ ಇಸ್ರೇಲಿ ಒತ್ತೆಯಾಳುಗಳ ಭವಿಷ್ಯದ ಬಗ್ಗೆ ಗಂಭೀರ ಸಂದೇಶ ಕಳುಹಿಸಿದೆ.

“ನೆತನ್ಯಾಹು ಅವರ ನಿರಾಕರಣೆ ಮತ್ತು ಝಮೀರ್ ಅವರ ಶರಣಾಗತಿಯಿಂದಾಗಿ, ಗಾಝಾ ನಗರದಲ್ಲಿ ಸೈನಿಕ ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ವಿದಾಯ ಚಿತ್ರ” ಎಂದು ಫೋಟೋದೊಂದಿಗೆ ಹಮಾಸ್ ಪ್ರಕಟಣೆ ನೀಡಿದೆ.

ಈ ಮೂಲಕ ಹಮಾಸ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಲ್ಲಾ ಒಪ್ಪಂದಗಳನ್ನು ತಿರಸ್ಕರಿಸಿರುವುದನ್ನು ಹಾಗೂ ಸೇನಾ ಮುಖ್ಯಸ್ಥ ಇಯಾಲ್ ಝಮೀರ್ ನೇತೃತ್ವದಲ್ಲಿ ದಾಳಿಗಳು ತೀವ್ರಗೊಂಡಿರುವುದನ್ನು ಉಲ್ಲೇಖಿಸಿದೆ.

ಇಸ್ರೇಲ್ ಅಧಿಕಾರಿಗಳ ಪ್ರಕಾರ ಗಾಝಾದಲ್ಲಿ ಒತ್ತೆಯಾಳಾಗಿರುವವರಲ್ಲಿ ಸುಮಾರು 20 ಮಂದಿ ಜೀವಂತವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸಂಖ್ಯೆ 20ಕ್ಕಿಂತ ಕಡಿಮೆಯಾಗಿರಬಹುದು ಎಂದು ಹೇಳಿದ್ದಾರೆ.

ನೆತನ್ಯಾಹು ಮತ್ತು ಟ್ರಂಪ್ ಇಬ್ಬರೂ, ಎಲ್ಲಾ ಜೀವಂತ ಮತ್ತು ಮೃತಪಟ್ಟ ಒತ್ತೆಯಾಳುಗಳನ್ನು ಮರಳಿ ತರಲಾಗುವುದು ಹಾಗೂ ಹಮಾಸ್ ಅನ್ನು ಸಂಪೂರ್ಣವಾಗಿ ನಾಶಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ವಾಯು ಹಾಗೂ ಪದಾತಿ ದಳದ ದಾಳಿಗಳು ಬಂಧಿತರ ಜೀವಕ್ಕೆ ನೇರ ಅಪಾಯವಾಗುತ್ತದೆ ಎಂದು ಹಮಾಸ್ ಪುನಃ ಎಚ್ಚರಿಸಿದೆ. ಅವರ ಪ್ರಕಾರ, ಕೆಲ ಒತ್ತೆಯಾಳುಗಳು ಈಗಾಗಲೇ ಇಸ್ರೇಲಿನ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ‘ಒತ್ತೆಯಾಳುಗಳು ಗಾಝಾ ನಗರದ ವಿವಿಧ ಪ್ರದೇಶಗಳಲ್ಲಿದ್ದಾರೆ’ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರಕಟಣೆಯ ನಂತರ ಇಸ್ರೇಲ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ಜನರು ಮತ್ತೆ ಟೆಲ್ ಅವೀವ್ ಮತ್ತು ಇತರ ಪ್ರಮುಖ ನಗರಗಳಲ್ಲಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ಯುದ್ಧವನ್ನು ಕೊನೆಗೊಳಿಸಿ, ಒತ್ತೆಯಾಳುಗಳನ್ನು ತಕ್ಷಣ ಮತ್ತು ಸುರಕ್ಷಿತವಾಗಿ ಹಿಂತಿರುಗಿಸುವಂತೆ ಒತ್ತಾಯಿಸಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ, ಹಮಾಸ್ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಆ ದೃಶ್ಯಗಳಲ್ಲಿ ದುರ್ಬಲ ಸ್ಥಿತಿಯಲ್ಲಿದ್ದ ಬಂಧಿತರಲ್ಲಿ ಒಬ್ಬನು ತನ್ನದೇ ಸಮಾಧಿಯನ್ನು ತೋಡುತ್ತಿರುವುದಾಗಿ ತೋರಿಸಲಾಗಿತ್ತು. ಈ ದೃಶ್ಯಗಳು ಬಂಧಿತರ ಕುಟುಂಬಗಳಲ್ಲಿಯೂ, ಇಸ್ರೇಲಿ ಸರ್ಕಾರದಲ್ಲಿಯೂ ಹಾಗೂ ಅಮೆರಿಕ ಸೇರಿದಂತೆ ಇಸ್ರೇಲ್ ಮಿತ್ರ ರಾಷ್ಟ್ರಗಳಲ್ಲಿಯೂ ಆಕ್ರೋಶ ಹುಟ್ಟಿಸಿತ್ತು.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದ ನಂತರದಿಂದ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕನಿಷ್ಠ 65,208 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ ಮತ್ತು 1,66,271 ಮಂದಿ ಗಾಯಗೊಂಡಿದ್ದಾರೆ. ಮಾರ್ಚ್ 18ರಂದು ಇಸ್ರೇಲ್ ಹಮಾಸ್ ಜೊತೆಗಿನ ಕದನ ವಿರಾಮವನ್ನು ಮುರಿದ ನಂತರದಿಂದಲೇ 12,653 ಜನರು ಮೃತಪಟ್ಟು, 54,230 ಮಂದಿ ಗಾಯಗೊಂಡಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...