Homeಅಂತರಾಷ್ಟ್ರೀಯಯುದ್ಧ ಕೊನೆಗೊಳಿಸುವ ಒಪ್ಪಂದಕ್ಕೆ ಸಿದ್ದ, ಕದನ ವಿರಾಮದ ಒಪ್ಪಂದಕ್ಕೆ ಸಿದ್ಧವಿಲ್ಲ: ಹಮಾಸ್ 

ಯುದ್ಧ ಕೊನೆಗೊಳಿಸುವ ಒಪ್ಪಂದಕ್ಕೆ ಸಿದ್ದ, ಕದನ ವಿರಾಮದ ಒಪ್ಪಂದಕ್ಕೆ ಸಿದ್ಧವಿಲ್ಲ: ಹಮಾಸ್ 

- Advertisement -
- Advertisement -

ಕೈರೋ: ನಾವು ಗಾಜಾ ಪಟ್ಟಿಯಲ್ಲಿ ಯುದ್ದ ಕೊನೆಗೊಳಿಸುವ ಒಪ್ಪಂದಕ್ಕೆ ಸಿದ್ಧವಿದ್ದೆವೇ ಹೊರತು, ಕದನ ವಿರಾಮದಂತ ಅರೆಕಾಲಿಕ  ಒಪ್ಪಂದಕ್ಕೆ ಸಿದ್ದವಿಲ್ಲ. ಅಂದರೆ ಹಮಾಸ್ ಸಮಗ್ರ ಒಪ್ಪಂದವನ್ನು ಬಯಸುತ್ತದೆ ಎಂದು ಹಮಾಸ್ ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೂರದರ್ಶನದ ಭಾಷಣದಲ್ಲಿ, ಅದರ ಮಾತುಕತೆ ತಂಡದ ನೇತೃತ್ವ ವಹಿಸಿರುವ ಹಮಾಸ್ ಮುಖ್ಯಸ್ಥ ಖಲೀಲ್ ಅಲ್-ಹಯಾ ಅವರು, ನಾವು ಇನ್ನು ಮುಂದೆ ಇಸ್ರೇಲಿನ ಮಧ್ಯಂತರ ಒಪ್ಪಂದಗಳಿಗೆ ಒಪ್ಪುವುದಿಲ್ಲ. ಸಮಗ್ರ ಒಪ್ಪಂದವನ್ನು ಬಯಸುತ್ತೇವೆ. ಸಂಪೂರ್ಣ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕೆ ಸಿದ್ದವಿದ್ದವೇ ಹೊರತು ಅರೆಕಾಲಿಕ ಕದನ ವಿರಾಮದ ಒಪ್ಪಂದಕ್ಕೆ ನಾವು ಸಿದ್ಧವಿಲ್ಲ ಎಂದು ಹೇಳಿದರು.

ಗಾಜಾ ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್‌ನ ಜೈಲಿನಲ್ಲಿರುವ ಪ್ಯಾಲೆಸ್ಟೀನಿಯನ್ನರ ಬಿಡುಗಡೆ ಮತ್ತು ಗಾಜಾದ ಪುನರ್ನಿರ್ಮಾಣಕ್ಕೆ ಪ್ರತಿಯಾಗಿ ಹಮಾಸ್ ತನ್ನ ಕಸ್ಟಡಿಯಲ್ಲಿರುವ ಉಳಿದ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು “ಸಮಗ್ರ ಪ್ಯಾಕೇಜ್ ಮಾತುಕತೆಗಳಲ್ಲಿ” ತಕ್ಷಣ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಹಯಾ ಹೇಳಿದರು.

“ನೆತನ್ಯಾಹು ಮತ್ತು ಅವರ ಸರ್ಕಾರವು ತಮ್ಮ ರಾಜಕೀಯ ಕಾರ್ಯಸೂಚಿಗೆ ಭಾಗಶಃ ಒಪ್ಪಂದಗಳನ್ನು ಮರೆಮಾಚಲು ಬಳಸುತ್ತದೆ, ಇದು ನಿರ್ನಾಮ ಮತ್ತು ಹಸಿವಿನ ಯುದ್ಧವನ್ನು ಮುಂದುವರಿಸುವುದನ್ನು ಆಧರಿಸಿದೆ” ಎಂದು ಹಯ್ಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಉಲ್ಲೇಖಿಸಿ ಹೇಳಿದರು.

ಕಳೆದ ತಿಂಗಳು ಗಾಜಾದಲ್ಲಿ ಹೋರಾಟವನ್ನು ನಿಲ್ಲಿಸಿದ ಜನವರಿಯ ಕದನ ವಿರಾಮ ಒಪ್ಪಂದವನ್ನು ಪುನರುಜ್ಜೀವನಗೊಳಿಸಲು ಈಜಿಪ್ಟ್ ಮಧ್ಯವರ್ತಿಗಳು ಕೆಲಸ ಮಾಡುತ್ತಿದ್ದಾರೆ, ಆದರೆ ಇಸ್ರೇಲ್ ಮತ್ತು ಹಮಾಸ್ ಎರಡೂ ಪರಸ್ಪರ ದೂಷಿಸುತ್ತಿವೆ, ಪ್ರಗತಿಯ ಯಾವುದೇ ಲಕ್ಷಣಗಳಿಲ್ಲ ಎಂದು ವರದಿಯಾಗಿದೆ.

ಹಮಾಸ್ ಹೇಳಿಕೆಗಳು ಅವರು ಶಾಂತಿಯಲ್ಲಿ ಆಸಕ್ತಿ ಹೊಂದಿಲ್ಲ. ಆದರೆ ಶಾಶ್ವತ ಹಿಂಸಾಚಾರದಲ್ಲಿ ಆಸಕ್ತಿ ಹೊಂದಿದ್ದಾರೆಂದು ತೋರಿಸುತ್ತವೆ. ಟ್ರಂಪ್ ಆಡಳಿತವು ಮಾಡಿದ ನಿಯಮಗಳು ಬದಲಾಗಿಲ್ಲ. ಒತ್ತೆಯಾಳುಗಳನ್ನು ಬಿಡುಗಡೆ ಮಾಡಿ ಅಥವಾ ನರಕವನ್ನು ಎದುರಿಸಿ ಎಂದು ಹಮಾಸ್ ಗೆ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜೇಮ್ಸ್ ಹೆವಿಟ್ ಹೇಳಿದ್ದಾರೆ.

ಕದನ ವಿರಾಮವನ್ನು ಪುನಃಸ್ಥಾಪಿಸಲು ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ಸೋಮವಾರ ಕೈರೋದಲ್ಲಿ ನಡೆದ ಇತ್ತೀಚಿನ ಹಲವು ಸುತ್ತಿನ ಮಾತುಕತೆಗಳು ಯಾವುದೇ ಸ್ಪಷ್ಟ ಪ್ರಗತಿಯಿಲ್ಲದೆ ಕೊನೆಗೊಂಡಿವೆ ಎಂದು ಪ್ಯಾಲೆಸ್ಟೀನಿಯನ್ ಮತ್ತು ಈಜಿಪ್ಟ್ ಮೂಲಗಳು ತಿಳಿಸಿವೆ.

ಒತ್ತೆಯಾಳುಗಳ ಬಿಡುಗಡೆಗೆ ಅವಕಾಶ ನೀಡಲು ಮತ್ತು ಯುದ್ಧವನ್ನು ಕೊನೆಗೊಳಿಸಲು ಪರೋಕ್ಷ ಮಾತುಕತೆಗಳನ್ನು ಪ್ರಾರಂಭಿಸಲು ಇಸ್ರೇಲ್ ದೇಶವು ಗಾಜಾದಲ್ಲಿ 45 ದಿನಗಳ ಕದನ ವಿರಾಮವನ್ನು ಪ್ರಸ್ತಾಪಿಸಿತ್ತು. ಹಮಾಸ್ ಅದರ ಒಂದು ಷರತ್ತಾದ ಶಸ್ತ್ರ ತ್ಯಜಿಸಬೇಕೆಂಬುದನ್ನು ತಿರಸ್ಕರಿಸಿದೆ. ತನ್ನ ಭಾಷಣದಲ್ಲಿ ಹಯ್ಯ ಅವರು, ಇಸ್ರೇಲ್ “ಅಸಾಧ್ಯ ಷರತ್ತುಗಳೊಂದಿಗೆ” ಪ್ರತಿ ಪ್ರಸ್ತಾಪವನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಜನವರಿ 19ರಂದು ಪ್ರಾರಂಭವಾದ ಕದನ ವಿರಾಮದ ಅಡಿಯಲ್ಲಿ ಹಮಾಸ್ 38 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಮಾರ್ಚ್‌ನಲ್ಲಿ ಇಸ್ರೇಲ್ ಸೇನೆಯು ಗಾಜಾದ ಮೇಲೆ ತನ್ನ ಭೂ ಮತ್ತು ವೈಮಾನಿಕ ದಾಳಿಯನ್ನು ಪುನರಾರಂಭಿಸಿದೆ. ಯುದ್ಧವನ್ನು ಕೊನೆಗೊಳಿಸದೆ ಕದನ ವಿರಾಮವನ್ನು ವಿಸ್ತರಿಸುವ ಪ್ರಸ್ತಾಪಗಳನ್ನು ಹಮಾಸ್ ತಿರಸ್ಕರಿಸಿದ ನಂತರ ಕದನ ವಿರಾಮವನ್ನು ಕೈಬಿಡಲಾಗಿದೆ.

ಉಳಿದ 59 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಮತ್ತು ಗಾಜಾವನ್ನು ಸೇನಾಮುಕ್ತಗೊಳಿಸುವವರೆಗೆ ದಾಳಿ ಮುಂದುವರಿಯುತ್ತದೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳುತ್ತಾರೆ. ಯುದ್ಧವನ್ನು ಕೊನೆಗೊಳಿಸುವ ಒಪ್ಪಂದದ ಭಾಗವಾಗಿ ಮಾತ್ರ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಒತ್ತಾಯಿಸುತ್ತದೆ ಮತ್ತು ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸುವ ಬೇಡಿಕೆಗಳನ್ನು ತಿರಸ್ಕರಿಸಿದೆ.

ಇದೇ ವೇಳೆ ಗುರುವಾರ ಗಾಜಾ ಪಟ್ಟಿಯಾದ್ಯಂತ ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 32 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಗಾಜಾ ಪಟ್ಟಿಯ ಜಬಾಲಿಯಾದಲ್ಲಿರುವ ವಿಶ್ವಸಂಸ್ಥೆ ನಡೆಸುತ್ತಿರುವ ಶಾಲೆಯಲ್ಲಿ ನಡೆದ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಹಮಾಸ್ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ತಿಳಿಸಿದೆ.

2023ರ ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಿಂದ ಯುದ್ಧ ಪ್ರಾರಂಭವಾಯಿತು. ಇದರಲ್ಲಿ 1,200 ಜನರು ಸಾವನ್ನಪ್ಪಿದರು ಮತ್ತು 251 ಜನರನ್ನು ಗಾಜಾಗೆ ಒತ್ತೆಯಾಳಾಗಿ ಇರಿಸಲಾಯಿತು ಎಂದು ಇಸ್ರೇಲಿ ಅಂಕಿಅಂಶಗಳು ತಿಳಿಸಿವೆ.

ಸ್ಥಳೀಯ ಆರೋಗ್ಯ ಅಧಿಕಾರಿಗಳ ಪ್ರಕಾರ, ಅಂದಿನಿಂದ ಇಸ್ರೇಲ್ ದಾಳಿಯಲ್ಲಿ 51,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ.

ಸಂಭಾಲ್‌: 250 ವರ್ಷದ ಜನೇತಾ ದರ್ಗಾ ಸರ್ಕಾರಿ ಭೂಮಿ ಎಂದು ಘೋಷಣೆ: ತನಿಖೆಗೆ ಸೂಚಿಸಿದ ಯೋಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...