Homeಮುಖಪುಟಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

- Advertisement -
- Advertisement -

ಇಸ್ರೇಲ್‌ನಿಂದ ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಮಾಸ್‌ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಲು ವಿಳಂಬ ಮಾಡಿತ್ತು. ಈ ವೇಳೆ ಯುದ್ಧ ಯಾವುದೇ ಕ್ಷಣದಲ್ಲಿ ಮರು ಆರಂಭಿಸುವುದಾಗಿ ಇಸ್ರೇಲ್‌ ಬೆದರಿಕೆ ಹಾಕಿತ್ತು. ಈ ಬೆಳವಣಿಗೆ ಮಧ್ಯೆಯೇ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆಗೆ ಬದಲಾಗಿ ಹಮಾಸ್ ಶನಿವಾರ ರಾತ್ರಿ ಇಸ್ರೇಲ್‌ ಮತ್ತು ವಿದೇಶಿ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಆದರೆ ಯಾವುದೇ ಕ್ಷಣದಲ್ಲಿ ಯುದ್ಧ ಮರು ಆರಂಭದ ಭೀತಿ ಪ್ರಾರಂಭವಾಗಿದೆ.

ಹಮಾಸ್ 8 ಮಕ್ಕಳು ಮತ್ತು ಐದು ಮಹಿಳೆಯರು ಸೇರಿ 13 ಇಸ್ರೇಲ್‌ ಒತ್ತೆಯಾಳುಗಳನ್ನು ಗಾಝಾದಲ್ಲಿನ ರೆಡ್‌ಕ್ರಾಸ್‌ನ ಅಂತರಾಷ್ಟ್ರೀಯ ಸಮಿತಿಗೆ ಹಸ್ತಾಂತರಿಸಿರುವ ಬಗ್ಗೆ ಇಸ್ರೇಲ್ ದೃಢಪಡಿಸಿದೆ. ಅವರನ್ನು ಈಜಿಪ್ಟ್‌ನ ರಫಾ ಕ್ರಾಸಿಂಗ್‌ನಾದ್ಯಂತ ಭದ್ರತೆಯಲ್ಲಿ ಇಸ್ರೇಲ್‌ಗೆ ಕರೆ ತರಲಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲ್ ಮಿಲಿಟರಿ ಪಡೆಗಳು ತಿಳಿಸಿದೆ. ಇದಲ್ಲದೆ ನಾಲ್ವರು ಥಾಯ್ಲೆಂಡ್‌ ಪ್ರಜೆಗಳನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

ಇದಾದ ಕೆಲವೇ ಗಂಟೆಗಳಲ್ಲಿ 39 ಪ್ಯಾಲೆಸ್ತೀನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಿದೆ ಎಂದು ಇಸ್ರೇಲ್‌ ಅಧಿಕಾರಿಗಳು ಮುಂಜಾನೆ ತಿಳಿಸಿದ್ದಾರೆ.

ಹಮಾಸ್ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆಗೆ ತಡ ಮಾಡಿತ್ತು. ಇಸ್ರೇಲ್ ಒಪ್ಪಂದದ ಪ್ರಮುಖ ಅಂಶಗಳನ್ನು ತಿರಸ್ಕರಿಸಿದೆ ಎಂದು ಹೇಳಿಕೊಂಡಿತ್ತು. ಉತ್ತರ ಗಾಝಾಕ್ಕೆ ಪರಿಹಾರ ಸಾಮಾಗ್ರಿ ತಲುಪಲು ಇಸ್ರೇಲ್‌ ಬೇಕಾದ ರೀತಿಯ ಸಹಾಯವನ್ನು ಮಾಡುತ್ತಿಲ್ಲ. ಒಪ್ಪಿಗೆಯಂತೆ ಪ್ಯಾಲೆಸ್ತೀನ್‌ ಕೈದಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿತ್ತು.

ಶನಿವಾರ ಸಂಜೆ ಲೆಬನಾನ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಮಾಸ್ ಅಧಿಕಾರಿ ಒಸಾಮಾ ಹಮ್ದಾನ್, ಬಿಡುಗಡೆ ಮಾಡಬೇಕಾದ ಕೈದಿಗಳ ಜೊತೆ ಇಸ್ರೇಲ್‌ ಚೆಲ್ಲಾಟವಾಡುತ್ತಿದೆ. ಮನೆಗೆ ಹಿಂದಿರುಗಲು ಪ್ರಯತ್ನಿಸಿದ ಗಾಝಾ ನಿವಾಸಿಗಳ ಮೇಲೆ ಇಸ್ರೇಲ್‌ ಸೈನಿಕರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಇಸ್ರೇಲ್ ನಿರಾಕರಿಸಿದೆ ಮತ್ತು ಹಮಾಸ್ ಎರಡನೇ ಗುಂಪಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ 4 ದಿನಗಳ ಕದನ ವಿರಾಮವು ಬೇಗನೆ ಕೊನೆಗೊಳ್ಳುತ್ತದೆ ಎಂದು ಬೆದರಿಕೆ ಹಾಕಿತ್ತು. ಇಸ್ರೇಲ್‌ ಮಿಲಿಟರಿಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಕ್ಟ್ ಈ ಬಗ್ಗೆ ಪ್ರತಿಕ್ರಿಯಿಸಿ ನಾವು ನಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಶನಿವಾರ ರಾತ್ರಿ ಹಮಾಸ್ ತನ್ನ ಅಧಿಕೃತ ಟೆಲಿಗ್ರಾಮ್ ಚಾನೆಲ್‌ನಲ್ಲಿ ಕತಾರ್ ಮತ್ತು ಈಜಿಪ್ಟ್ ನಡೆಸಿದ ಮಾತುಕತೆಯಂತೆ ಒತ್ತೆಯಾಳುಗಳ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಒತ್ತೆಯಾಳು ಒಪ್ಪಂದದ ಬಗ್ಗೆ ಕತಾರ್ ಪ್ರಧಾನಿಯೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಮಾತುಕೆತೆಯನ್ನು ನಡೆಸಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ಹೇಳಿದ್ದಾರೆ.

ಸಂಕ್ಷಿಪ್ತ ಕದನ ವಿರಾಮ ಶುಕ್ರವಾರ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಜಾರಿಗೆ ಬಂದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ 50 ದಿನಗಳ ಸಂಘರ್ಷದಲ್ಲಿ ಇದೇ ಮೊದಲ ಬಾರಿಗೆ 4 ದಿನಗಳ ಕದನ ವಿರಾವನ್ನು ಘೋಷಿಸಲಾಗಿದೆ.

ಒಪ್ಪಂದದ ಭಾಗವಾಗಿ ಗಾಝಾದಲ್ಲಿ ಒತ್ತೆಯಾಳಾಗಿದ್ದ 50 ಇಸ್ರೇಲ್‌ ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಕೊಂಡಿದೆ. ಇದಕ್ಕೆ ಬದಲಾಗಿ ಇಸ್ರೇಲ್ ಜೈಲುಗಳಲ್ಲಿದ್ದ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು ಸೇರಿ 150 ಪ್ಯಾಲೆಸ್ತೀನ್‌ ಜನರನ್ನು ಬಿಡುಗಡೆ ಬಗ್ಗೆ ಒಪ್ಪಂದ ಮಾಡಲಾಗಿತ್ತು.

ಇನ್ನು ತಾತ್ಕಾಲಿಕ ಕದನ ವಿರಾಮವಿದ್ದರೂ ಹಮಾಸ್ ನಿಯಂತ್ರಿಸುತ್ತಿರುವ ದಕ್ಷಿಣ ಗಾಝಾ ಮತ್ತು ಉತ್ತರ ಗಾಝಾವನ್ನು ಇಸ್ರೇಲ್ ಹೆಚ್ಚಾಗಿ ವಶಪಡಿಸಿಕೊಂಡಿದೆ ಮತ್ತು ಅಲ್ಲಿನ ಹಮಾಸ್ ಹೋರಾಟಗಾರರು ಸಾಕಷ್ಟು ಭೀತಿಯಿಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...