Homeಮುಖಪುಟಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

- Advertisement -
- Advertisement -

ಇಸ್ರೇಲ್‌ನಿಂದ ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಮಾಸ್‌ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಲು ವಿಳಂಬ ಮಾಡಿತ್ತು. ಈ ವೇಳೆ ಯುದ್ಧ ಯಾವುದೇ ಕ್ಷಣದಲ್ಲಿ ಮರು ಆರಂಭಿಸುವುದಾಗಿ ಇಸ್ರೇಲ್‌ ಬೆದರಿಕೆ ಹಾಕಿತ್ತು. ಈ ಬೆಳವಣಿಗೆ ಮಧ್ಯೆಯೇ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆಗೆ ಬದಲಾಗಿ ಹಮಾಸ್ ಶನಿವಾರ ರಾತ್ರಿ ಇಸ್ರೇಲ್‌ ಮತ್ತು ವಿದೇಶಿ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಆದರೆ ಯಾವುದೇ ಕ್ಷಣದಲ್ಲಿ ಯುದ್ಧ ಮರು ಆರಂಭದ ಭೀತಿ ಪ್ರಾರಂಭವಾಗಿದೆ.

ಹಮಾಸ್ 8 ಮಕ್ಕಳು ಮತ್ತು ಐದು ಮಹಿಳೆಯರು ಸೇರಿ 13 ಇಸ್ರೇಲ್‌ ಒತ್ತೆಯಾಳುಗಳನ್ನು ಗಾಝಾದಲ್ಲಿನ ರೆಡ್‌ಕ್ರಾಸ್‌ನ ಅಂತರಾಷ್ಟ್ರೀಯ ಸಮಿತಿಗೆ ಹಸ್ತಾಂತರಿಸಿರುವ ಬಗ್ಗೆ ಇಸ್ರೇಲ್ ದೃಢಪಡಿಸಿದೆ. ಅವರನ್ನು ಈಜಿಪ್ಟ್‌ನ ರಫಾ ಕ್ರಾಸಿಂಗ್‌ನಾದ್ಯಂತ ಭದ್ರತೆಯಲ್ಲಿ ಇಸ್ರೇಲ್‌ಗೆ ಕರೆ ತರಲಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲ್ ಮಿಲಿಟರಿ ಪಡೆಗಳು ತಿಳಿಸಿದೆ. ಇದಲ್ಲದೆ ನಾಲ್ವರು ಥಾಯ್ಲೆಂಡ್‌ ಪ್ರಜೆಗಳನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

ಇದಾದ ಕೆಲವೇ ಗಂಟೆಗಳಲ್ಲಿ 39 ಪ್ಯಾಲೆಸ್ತೀನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಿದೆ ಎಂದು ಇಸ್ರೇಲ್‌ ಅಧಿಕಾರಿಗಳು ಮುಂಜಾನೆ ತಿಳಿಸಿದ್ದಾರೆ.

ಹಮಾಸ್ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆಗೆ ತಡ ಮಾಡಿತ್ತು. ಇಸ್ರೇಲ್ ಒಪ್ಪಂದದ ಪ್ರಮುಖ ಅಂಶಗಳನ್ನು ತಿರಸ್ಕರಿಸಿದೆ ಎಂದು ಹೇಳಿಕೊಂಡಿತ್ತು. ಉತ್ತರ ಗಾಝಾಕ್ಕೆ ಪರಿಹಾರ ಸಾಮಾಗ್ರಿ ತಲುಪಲು ಇಸ್ರೇಲ್‌ ಬೇಕಾದ ರೀತಿಯ ಸಹಾಯವನ್ನು ಮಾಡುತ್ತಿಲ್ಲ. ಒಪ್ಪಿಗೆಯಂತೆ ಪ್ಯಾಲೆಸ್ತೀನ್‌ ಕೈದಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿತ್ತು.

ಶನಿವಾರ ಸಂಜೆ ಲೆಬನಾನ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಮಾಸ್ ಅಧಿಕಾರಿ ಒಸಾಮಾ ಹಮ್ದಾನ್, ಬಿಡುಗಡೆ ಮಾಡಬೇಕಾದ ಕೈದಿಗಳ ಜೊತೆ ಇಸ್ರೇಲ್‌ ಚೆಲ್ಲಾಟವಾಡುತ್ತಿದೆ. ಮನೆಗೆ ಹಿಂದಿರುಗಲು ಪ್ರಯತ್ನಿಸಿದ ಗಾಝಾ ನಿವಾಸಿಗಳ ಮೇಲೆ ಇಸ್ರೇಲ್‌ ಸೈನಿಕರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಇಸ್ರೇಲ್ ನಿರಾಕರಿಸಿದೆ ಮತ್ತು ಹಮಾಸ್ ಎರಡನೇ ಗುಂಪಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ 4 ದಿನಗಳ ಕದನ ವಿರಾಮವು ಬೇಗನೆ ಕೊನೆಗೊಳ್ಳುತ್ತದೆ ಎಂದು ಬೆದರಿಕೆ ಹಾಕಿತ್ತು. ಇಸ್ರೇಲ್‌ ಮಿಲಿಟರಿಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಕ್ಟ್ ಈ ಬಗ್ಗೆ ಪ್ರತಿಕ್ರಿಯಿಸಿ ನಾವು ನಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಶನಿವಾರ ರಾತ್ರಿ ಹಮಾಸ್ ತನ್ನ ಅಧಿಕೃತ ಟೆಲಿಗ್ರಾಮ್ ಚಾನೆಲ್‌ನಲ್ಲಿ ಕತಾರ್ ಮತ್ತು ಈಜಿಪ್ಟ್ ನಡೆಸಿದ ಮಾತುಕತೆಯಂತೆ ಒತ್ತೆಯಾಳುಗಳ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಒತ್ತೆಯಾಳು ಒಪ್ಪಂದದ ಬಗ್ಗೆ ಕತಾರ್ ಪ್ರಧಾನಿಯೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಮಾತುಕೆತೆಯನ್ನು ನಡೆಸಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ಹೇಳಿದ್ದಾರೆ.

ಸಂಕ್ಷಿಪ್ತ ಕದನ ವಿರಾಮ ಶುಕ್ರವಾರ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಜಾರಿಗೆ ಬಂದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ 50 ದಿನಗಳ ಸಂಘರ್ಷದಲ್ಲಿ ಇದೇ ಮೊದಲ ಬಾರಿಗೆ 4 ದಿನಗಳ ಕದನ ವಿರಾವನ್ನು ಘೋಷಿಸಲಾಗಿದೆ.

ಒಪ್ಪಂದದ ಭಾಗವಾಗಿ ಗಾಝಾದಲ್ಲಿ ಒತ್ತೆಯಾಳಾಗಿದ್ದ 50 ಇಸ್ರೇಲ್‌ ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಕೊಂಡಿದೆ. ಇದಕ್ಕೆ ಬದಲಾಗಿ ಇಸ್ರೇಲ್ ಜೈಲುಗಳಲ್ಲಿದ್ದ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು ಸೇರಿ 150 ಪ್ಯಾಲೆಸ್ತೀನ್‌ ಜನರನ್ನು ಬಿಡುಗಡೆ ಬಗ್ಗೆ ಒಪ್ಪಂದ ಮಾಡಲಾಗಿತ್ತು.

ಇನ್ನು ತಾತ್ಕಾಲಿಕ ಕದನ ವಿರಾಮವಿದ್ದರೂ ಹಮಾಸ್ ನಿಯಂತ್ರಿಸುತ್ತಿರುವ ದಕ್ಷಿಣ ಗಾಝಾ ಮತ್ತು ಉತ್ತರ ಗಾಝಾವನ್ನು ಇಸ್ರೇಲ್ ಹೆಚ್ಚಾಗಿ ವಶಪಡಿಸಿಕೊಂಡಿದೆ ಮತ್ತು ಅಲ್ಲಿನ ಹಮಾಸ್ ಹೋರಾಟಗಾರರು ಸಾಕಷ್ಟು ಭೀತಿಯಿಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...