Homeಮುಖಪುಟಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

- Advertisement -
- Advertisement -

ಇಸ್ರೇಲ್‌ನಿಂದ ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಮಾಸ್‌ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಲು ವಿಳಂಬ ಮಾಡಿತ್ತು. ಈ ವೇಳೆ ಯುದ್ಧ ಯಾವುದೇ ಕ್ಷಣದಲ್ಲಿ ಮರು ಆರಂಭಿಸುವುದಾಗಿ ಇಸ್ರೇಲ್‌ ಬೆದರಿಕೆ ಹಾಕಿತ್ತು. ಈ ಬೆಳವಣಿಗೆ ಮಧ್ಯೆಯೇ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆಗೆ ಬದಲಾಗಿ ಹಮಾಸ್ ಶನಿವಾರ ರಾತ್ರಿ ಇಸ್ರೇಲ್‌ ಮತ್ತು ವಿದೇಶಿ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಆದರೆ ಯಾವುದೇ ಕ್ಷಣದಲ್ಲಿ ಯುದ್ಧ ಮರು ಆರಂಭದ ಭೀತಿ ಪ್ರಾರಂಭವಾಗಿದೆ.

ಹಮಾಸ್ 8 ಮಕ್ಕಳು ಮತ್ತು ಐದು ಮಹಿಳೆಯರು ಸೇರಿ 13 ಇಸ್ರೇಲ್‌ ಒತ್ತೆಯಾಳುಗಳನ್ನು ಗಾಝಾದಲ್ಲಿನ ರೆಡ್‌ಕ್ರಾಸ್‌ನ ಅಂತರಾಷ್ಟ್ರೀಯ ಸಮಿತಿಗೆ ಹಸ್ತಾಂತರಿಸಿರುವ ಬಗ್ಗೆ ಇಸ್ರೇಲ್ ದೃಢಪಡಿಸಿದೆ. ಅವರನ್ನು ಈಜಿಪ್ಟ್‌ನ ರಫಾ ಕ್ರಾಸಿಂಗ್‌ನಾದ್ಯಂತ ಭದ್ರತೆಯಲ್ಲಿ ಇಸ್ರೇಲ್‌ಗೆ ಕರೆ ತರಲಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲ್ ಮಿಲಿಟರಿ ಪಡೆಗಳು ತಿಳಿಸಿದೆ. ಇದಲ್ಲದೆ ನಾಲ್ವರು ಥಾಯ್ಲೆಂಡ್‌ ಪ್ರಜೆಗಳನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

ಇದಾದ ಕೆಲವೇ ಗಂಟೆಗಳಲ್ಲಿ 39 ಪ್ಯಾಲೆಸ್ತೀನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಿದೆ ಎಂದು ಇಸ್ರೇಲ್‌ ಅಧಿಕಾರಿಗಳು ಮುಂಜಾನೆ ತಿಳಿಸಿದ್ದಾರೆ.

ಹಮಾಸ್ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆಗೆ ತಡ ಮಾಡಿತ್ತು. ಇಸ್ರೇಲ್ ಒಪ್ಪಂದದ ಪ್ರಮುಖ ಅಂಶಗಳನ್ನು ತಿರಸ್ಕರಿಸಿದೆ ಎಂದು ಹೇಳಿಕೊಂಡಿತ್ತು. ಉತ್ತರ ಗಾಝಾಕ್ಕೆ ಪರಿಹಾರ ಸಾಮಾಗ್ರಿ ತಲುಪಲು ಇಸ್ರೇಲ್‌ ಬೇಕಾದ ರೀತಿಯ ಸಹಾಯವನ್ನು ಮಾಡುತ್ತಿಲ್ಲ. ಒಪ್ಪಿಗೆಯಂತೆ ಪ್ಯಾಲೆಸ್ತೀನ್‌ ಕೈದಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿತ್ತು.

ಶನಿವಾರ ಸಂಜೆ ಲೆಬನಾನ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಮಾಸ್ ಅಧಿಕಾರಿ ಒಸಾಮಾ ಹಮ್ದಾನ್, ಬಿಡುಗಡೆ ಮಾಡಬೇಕಾದ ಕೈದಿಗಳ ಜೊತೆ ಇಸ್ರೇಲ್‌ ಚೆಲ್ಲಾಟವಾಡುತ್ತಿದೆ. ಮನೆಗೆ ಹಿಂದಿರುಗಲು ಪ್ರಯತ್ನಿಸಿದ ಗಾಝಾ ನಿವಾಸಿಗಳ ಮೇಲೆ ಇಸ್ರೇಲ್‌ ಸೈನಿಕರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಇಸ್ರೇಲ್ ನಿರಾಕರಿಸಿದೆ ಮತ್ತು ಹಮಾಸ್ ಎರಡನೇ ಗುಂಪಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ 4 ದಿನಗಳ ಕದನ ವಿರಾಮವು ಬೇಗನೆ ಕೊನೆಗೊಳ್ಳುತ್ತದೆ ಎಂದು ಬೆದರಿಕೆ ಹಾಕಿತ್ತು. ಇಸ್ರೇಲ್‌ ಮಿಲಿಟರಿಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಕ್ಟ್ ಈ ಬಗ್ಗೆ ಪ್ರತಿಕ್ರಿಯಿಸಿ ನಾವು ನಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಶನಿವಾರ ರಾತ್ರಿ ಹಮಾಸ್ ತನ್ನ ಅಧಿಕೃತ ಟೆಲಿಗ್ರಾಮ್ ಚಾನೆಲ್‌ನಲ್ಲಿ ಕತಾರ್ ಮತ್ತು ಈಜಿಪ್ಟ್ ನಡೆಸಿದ ಮಾತುಕತೆಯಂತೆ ಒತ್ತೆಯಾಳುಗಳ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಒತ್ತೆಯಾಳು ಒಪ್ಪಂದದ ಬಗ್ಗೆ ಕತಾರ್ ಪ್ರಧಾನಿಯೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಮಾತುಕೆತೆಯನ್ನು ನಡೆಸಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ಹೇಳಿದ್ದಾರೆ.

ಸಂಕ್ಷಿಪ್ತ ಕದನ ವಿರಾಮ ಶುಕ್ರವಾರ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಜಾರಿಗೆ ಬಂದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ 50 ದಿನಗಳ ಸಂಘರ್ಷದಲ್ಲಿ ಇದೇ ಮೊದಲ ಬಾರಿಗೆ 4 ದಿನಗಳ ಕದನ ವಿರಾವನ್ನು ಘೋಷಿಸಲಾಗಿದೆ.

ಒಪ್ಪಂದದ ಭಾಗವಾಗಿ ಗಾಝಾದಲ್ಲಿ ಒತ್ತೆಯಾಳಾಗಿದ್ದ 50 ಇಸ್ರೇಲ್‌ ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಕೊಂಡಿದೆ. ಇದಕ್ಕೆ ಬದಲಾಗಿ ಇಸ್ರೇಲ್ ಜೈಲುಗಳಲ್ಲಿದ್ದ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು ಸೇರಿ 150 ಪ್ಯಾಲೆಸ್ತೀನ್‌ ಜನರನ್ನು ಬಿಡುಗಡೆ ಬಗ್ಗೆ ಒಪ್ಪಂದ ಮಾಡಲಾಗಿತ್ತು.

ಇನ್ನು ತಾತ್ಕಾಲಿಕ ಕದನ ವಿರಾಮವಿದ್ದರೂ ಹಮಾಸ್ ನಿಯಂತ್ರಿಸುತ್ತಿರುವ ದಕ್ಷಿಣ ಗಾಝಾ ಮತ್ತು ಉತ್ತರ ಗಾಝಾವನ್ನು ಇಸ್ರೇಲ್ ಹೆಚ್ಚಾಗಿ ವಶಪಡಿಸಿಕೊಂಡಿದೆ ಮತ್ತು ಅಲ್ಲಿನ ಹಮಾಸ್ ಹೋರಾಟಗಾರರು ಸಾಕಷ್ಟು ಭೀತಿಯಿಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...