Homeಮುಖಪುಟಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

- Advertisement -
- Advertisement -

ಇಸ್ರೇಲ್‌ನಿಂದ ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಮಾಸ್‌ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಲು ವಿಳಂಬ ಮಾಡಿತ್ತು. ಈ ವೇಳೆ ಯುದ್ಧ ಯಾವುದೇ ಕ್ಷಣದಲ್ಲಿ ಮರು ಆರಂಭಿಸುವುದಾಗಿ ಇಸ್ರೇಲ್‌ ಬೆದರಿಕೆ ಹಾಕಿತ್ತು. ಈ ಬೆಳವಣಿಗೆ ಮಧ್ಯೆಯೇ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆಗೆ ಬದಲಾಗಿ ಹಮಾಸ್ ಶನಿವಾರ ರಾತ್ರಿ ಇಸ್ರೇಲ್‌ ಮತ್ತು ವಿದೇಶಿ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಆದರೆ ಯಾವುದೇ ಕ್ಷಣದಲ್ಲಿ ಯುದ್ಧ ಮರು ಆರಂಭದ ಭೀತಿ ಪ್ರಾರಂಭವಾಗಿದೆ.

ಹಮಾಸ್ 8 ಮಕ್ಕಳು ಮತ್ತು ಐದು ಮಹಿಳೆಯರು ಸೇರಿ 13 ಇಸ್ರೇಲ್‌ ಒತ್ತೆಯಾಳುಗಳನ್ನು ಗಾಝಾದಲ್ಲಿನ ರೆಡ್‌ಕ್ರಾಸ್‌ನ ಅಂತರಾಷ್ಟ್ರೀಯ ಸಮಿತಿಗೆ ಹಸ್ತಾಂತರಿಸಿರುವ ಬಗ್ಗೆ ಇಸ್ರೇಲ್ ದೃಢಪಡಿಸಿದೆ. ಅವರನ್ನು ಈಜಿಪ್ಟ್‌ನ ರಫಾ ಕ್ರಾಸಿಂಗ್‌ನಾದ್ಯಂತ ಭದ್ರತೆಯಲ್ಲಿ ಇಸ್ರೇಲ್‌ಗೆ ಕರೆ ತರಲಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲ್ ಮಿಲಿಟರಿ ಪಡೆಗಳು ತಿಳಿಸಿದೆ. ಇದಲ್ಲದೆ ನಾಲ್ವರು ಥಾಯ್ಲೆಂಡ್‌ ಪ್ರಜೆಗಳನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

ಇದಾದ ಕೆಲವೇ ಗಂಟೆಗಳಲ್ಲಿ 39 ಪ್ಯಾಲೆಸ್ತೀನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಿದೆ ಎಂದು ಇಸ್ರೇಲ್‌ ಅಧಿಕಾರಿಗಳು ಮುಂಜಾನೆ ತಿಳಿಸಿದ್ದಾರೆ.

ಹಮಾಸ್ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆಗೆ ತಡ ಮಾಡಿತ್ತು. ಇಸ್ರೇಲ್ ಒಪ್ಪಂದದ ಪ್ರಮುಖ ಅಂಶಗಳನ್ನು ತಿರಸ್ಕರಿಸಿದೆ ಎಂದು ಹೇಳಿಕೊಂಡಿತ್ತು. ಉತ್ತರ ಗಾಝಾಕ್ಕೆ ಪರಿಹಾರ ಸಾಮಾಗ್ರಿ ತಲುಪಲು ಇಸ್ರೇಲ್‌ ಬೇಕಾದ ರೀತಿಯ ಸಹಾಯವನ್ನು ಮಾಡುತ್ತಿಲ್ಲ. ಒಪ್ಪಿಗೆಯಂತೆ ಪ್ಯಾಲೆಸ್ತೀನ್‌ ಕೈದಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿತ್ತು.

ಶನಿವಾರ ಸಂಜೆ ಲೆಬನಾನ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಮಾಸ್ ಅಧಿಕಾರಿ ಒಸಾಮಾ ಹಮ್ದಾನ್, ಬಿಡುಗಡೆ ಮಾಡಬೇಕಾದ ಕೈದಿಗಳ ಜೊತೆ ಇಸ್ರೇಲ್‌ ಚೆಲ್ಲಾಟವಾಡುತ್ತಿದೆ. ಮನೆಗೆ ಹಿಂದಿರುಗಲು ಪ್ರಯತ್ನಿಸಿದ ಗಾಝಾ ನಿವಾಸಿಗಳ ಮೇಲೆ ಇಸ್ರೇಲ್‌ ಸೈನಿಕರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಇಸ್ರೇಲ್ ನಿರಾಕರಿಸಿದೆ ಮತ್ತು ಹಮಾಸ್ ಎರಡನೇ ಗುಂಪಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ 4 ದಿನಗಳ ಕದನ ವಿರಾಮವು ಬೇಗನೆ ಕೊನೆಗೊಳ್ಳುತ್ತದೆ ಎಂದು ಬೆದರಿಕೆ ಹಾಕಿತ್ತು. ಇಸ್ರೇಲ್‌ ಮಿಲಿಟರಿಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಕ್ಟ್ ಈ ಬಗ್ಗೆ ಪ್ರತಿಕ್ರಿಯಿಸಿ ನಾವು ನಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಶನಿವಾರ ರಾತ್ರಿ ಹಮಾಸ್ ತನ್ನ ಅಧಿಕೃತ ಟೆಲಿಗ್ರಾಮ್ ಚಾನೆಲ್‌ನಲ್ಲಿ ಕತಾರ್ ಮತ್ತು ಈಜಿಪ್ಟ್ ನಡೆಸಿದ ಮಾತುಕತೆಯಂತೆ ಒತ್ತೆಯಾಳುಗಳ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಒತ್ತೆಯಾಳು ಒಪ್ಪಂದದ ಬಗ್ಗೆ ಕತಾರ್ ಪ್ರಧಾನಿಯೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಮಾತುಕೆತೆಯನ್ನು ನಡೆಸಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ಹೇಳಿದ್ದಾರೆ.

ಸಂಕ್ಷಿಪ್ತ ಕದನ ವಿರಾಮ ಶುಕ್ರವಾರ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಜಾರಿಗೆ ಬಂದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ 50 ದಿನಗಳ ಸಂಘರ್ಷದಲ್ಲಿ ಇದೇ ಮೊದಲ ಬಾರಿಗೆ 4 ದಿನಗಳ ಕದನ ವಿರಾವನ್ನು ಘೋಷಿಸಲಾಗಿದೆ.

ಒಪ್ಪಂದದ ಭಾಗವಾಗಿ ಗಾಝಾದಲ್ಲಿ ಒತ್ತೆಯಾಳಾಗಿದ್ದ 50 ಇಸ್ರೇಲ್‌ ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಕೊಂಡಿದೆ. ಇದಕ್ಕೆ ಬದಲಾಗಿ ಇಸ್ರೇಲ್ ಜೈಲುಗಳಲ್ಲಿದ್ದ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು ಸೇರಿ 150 ಪ್ಯಾಲೆಸ್ತೀನ್‌ ಜನರನ್ನು ಬಿಡುಗಡೆ ಬಗ್ಗೆ ಒಪ್ಪಂದ ಮಾಡಲಾಗಿತ್ತು.

ಇನ್ನು ತಾತ್ಕಾಲಿಕ ಕದನ ವಿರಾಮವಿದ್ದರೂ ಹಮಾಸ್ ನಿಯಂತ್ರಿಸುತ್ತಿರುವ ದಕ್ಷಿಣ ಗಾಝಾ ಮತ್ತು ಉತ್ತರ ಗಾಝಾವನ್ನು ಇಸ್ರೇಲ್ ಹೆಚ್ಚಾಗಿ ವಶಪಡಿಸಿಕೊಂಡಿದೆ ಮತ್ತು ಅಲ್ಲಿನ ಹಮಾಸ್ ಹೋರಾಟಗಾರರು ಸಾಕಷ್ಟು ಭೀತಿಯಿಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....