Homeಮುಖಪುಟಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

- Advertisement -
- Advertisement -

ಇಸ್ರೇಲ್‌ನಿಂದ ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಮಾಸ್‌ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಲು ವಿಳಂಬ ಮಾಡಿತ್ತು. ಈ ವೇಳೆ ಯುದ್ಧ ಯಾವುದೇ ಕ್ಷಣದಲ್ಲಿ ಮರು ಆರಂಭಿಸುವುದಾಗಿ ಇಸ್ರೇಲ್‌ ಬೆದರಿಕೆ ಹಾಕಿತ್ತು. ಈ ಬೆಳವಣಿಗೆ ಮಧ್ಯೆಯೇ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆಗೆ ಬದಲಾಗಿ ಹಮಾಸ್ ಶನಿವಾರ ರಾತ್ರಿ ಇಸ್ರೇಲ್‌ ಮತ್ತು ವಿದೇಶಿ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಆದರೆ ಯಾವುದೇ ಕ್ಷಣದಲ್ಲಿ ಯುದ್ಧ ಮರು ಆರಂಭದ ಭೀತಿ ಪ್ರಾರಂಭವಾಗಿದೆ.

ಹಮಾಸ್ 8 ಮಕ್ಕಳು ಮತ್ತು ಐದು ಮಹಿಳೆಯರು ಸೇರಿ 13 ಇಸ್ರೇಲ್‌ ಒತ್ತೆಯಾಳುಗಳನ್ನು ಗಾಝಾದಲ್ಲಿನ ರೆಡ್‌ಕ್ರಾಸ್‌ನ ಅಂತರಾಷ್ಟ್ರೀಯ ಸಮಿತಿಗೆ ಹಸ್ತಾಂತರಿಸಿರುವ ಬಗ್ಗೆ ಇಸ್ರೇಲ್ ದೃಢಪಡಿಸಿದೆ. ಅವರನ್ನು ಈಜಿಪ್ಟ್‌ನ ರಫಾ ಕ್ರಾಸಿಂಗ್‌ನಾದ್ಯಂತ ಭದ್ರತೆಯಲ್ಲಿ ಇಸ್ರೇಲ್‌ಗೆ ಕರೆ ತರಲಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲ್ ಮಿಲಿಟರಿ ಪಡೆಗಳು ತಿಳಿಸಿದೆ. ಇದಲ್ಲದೆ ನಾಲ್ವರು ಥಾಯ್ಲೆಂಡ್‌ ಪ್ರಜೆಗಳನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

ಇದಾದ ಕೆಲವೇ ಗಂಟೆಗಳಲ್ಲಿ 39 ಪ್ಯಾಲೆಸ್ತೀನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಿದೆ ಎಂದು ಇಸ್ರೇಲ್‌ ಅಧಿಕಾರಿಗಳು ಮುಂಜಾನೆ ತಿಳಿಸಿದ್ದಾರೆ.

ಹಮಾಸ್ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆಗೆ ತಡ ಮಾಡಿತ್ತು. ಇಸ್ರೇಲ್ ಒಪ್ಪಂದದ ಪ್ರಮುಖ ಅಂಶಗಳನ್ನು ತಿರಸ್ಕರಿಸಿದೆ ಎಂದು ಹೇಳಿಕೊಂಡಿತ್ತು. ಉತ್ತರ ಗಾಝಾಕ್ಕೆ ಪರಿಹಾರ ಸಾಮಾಗ್ರಿ ತಲುಪಲು ಇಸ್ರೇಲ್‌ ಬೇಕಾದ ರೀತಿಯ ಸಹಾಯವನ್ನು ಮಾಡುತ್ತಿಲ್ಲ. ಒಪ್ಪಿಗೆಯಂತೆ ಪ್ಯಾಲೆಸ್ತೀನ್‌ ಕೈದಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿತ್ತು.

ಶನಿವಾರ ಸಂಜೆ ಲೆಬನಾನ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಮಾಸ್ ಅಧಿಕಾರಿ ಒಸಾಮಾ ಹಮ್ದಾನ್, ಬಿಡುಗಡೆ ಮಾಡಬೇಕಾದ ಕೈದಿಗಳ ಜೊತೆ ಇಸ್ರೇಲ್‌ ಚೆಲ್ಲಾಟವಾಡುತ್ತಿದೆ. ಮನೆಗೆ ಹಿಂದಿರುಗಲು ಪ್ರಯತ್ನಿಸಿದ ಗಾಝಾ ನಿವಾಸಿಗಳ ಮೇಲೆ ಇಸ್ರೇಲ್‌ ಸೈನಿಕರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಇಸ್ರೇಲ್ ನಿರಾಕರಿಸಿದೆ ಮತ್ತು ಹಮಾಸ್ ಎರಡನೇ ಗುಂಪಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ 4 ದಿನಗಳ ಕದನ ವಿರಾಮವು ಬೇಗನೆ ಕೊನೆಗೊಳ್ಳುತ್ತದೆ ಎಂದು ಬೆದರಿಕೆ ಹಾಕಿತ್ತು. ಇಸ್ರೇಲ್‌ ಮಿಲಿಟರಿಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಕ್ಟ್ ಈ ಬಗ್ಗೆ ಪ್ರತಿಕ್ರಿಯಿಸಿ ನಾವು ನಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಶನಿವಾರ ರಾತ್ರಿ ಹಮಾಸ್ ತನ್ನ ಅಧಿಕೃತ ಟೆಲಿಗ್ರಾಮ್ ಚಾನೆಲ್‌ನಲ್ಲಿ ಕತಾರ್ ಮತ್ತು ಈಜಿಪ್ಟ್ ನಡೆಸಿದ ಮಾತುಕತೆಯಂತೆ ಒತ್ತೆಯಾಳುಗಳ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಒತ್ತೆಯಾಳು ಒಪ್ಪಂದದ ಬಗ್ಗೆ ಕತಾರ್ ಪ್ರಧಾನಿಯೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಮಾತುಕೆತೆಯನ್ನು ನಡೆಸಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ಹೇಳಿದ್ದಾರೆ.

ಸಂಕ್ಷಿಪ್ತ ಕದನ ವಿರಾಮ ಶುಕ್ರವಾರ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಜಾರಿಗೆ ಬಂದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ 50 ದಿನಗಳ ಸಂಘರ್ಷದಲ್ಲಿ ಇದೇ ಮೊದಲ ಬಾರಿಗೆ 4 ದಿನಗಳ ಕದನ ವಿರಾವನ್ನು ಘೋಷಿಸಲಾಗಿದೆ.

ಒಪ್ಪಂದದ ಭಾಗವಾಗಿ ಗಾಝಾದಲ್ಲಿ ಒತ್ತೆಯಾಳಾಗಿದ್ದ 50 ಇಸ್ರೇಲ್‌ ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಕೊಂಡಿದೆ. ಇದಕ್ಕೆ ಬದಲಾಗಿ ಇಸ್ರೇಲ್ ಜೈಲುಗಳಲ್ಲಿದ್ದ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು ಸೇರಿ 150 ಪ್ಯಾಲೆಸ್ತೀನ್‌ ಜನರನ್ನು ಬಿಡುಗಡೆ ಬಗ್ಗೆ ಒಪ್ಪಂದ ಮಾಡಲಾಗಿತ್ತು.

ಇನ್ನು ತಾತ್ಕಾಲಿಕ ಕದನ ವಿರಾಮವಿದ್ದರೂ ಹಮಾಸ್ ನಿಯಂತ್ರಿಸುತ್ತಿರುವ ದಕ್ಷಿಣ ಗಾಝಾ ಮತ್ತು ಉತ್ತರ ಗಾಝಾವನ್ನು ಇಸ್ರೇಲ್ ಹೆಚ್ಚಾಗಿ ವಶಪಡಿಸಿಕೊಂಡಿದೆ ಮತ್ತು ಅಲ್ಲಿನ ಹಮಾಸ್ ಹೋರಾಟಗಾರರು ಸಾಕಷ್ಟು ಭೀತಿಯಿಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...