Homeಮುಖಪುಟಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

- Advertisement -
- Advertisement -

ಇಸ್ರೇಲ್‌ನಿಂದ ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಮಾಸ್‌ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಲು ವಿಳಂಬ ಮಾಡಿತ್ತು. ಈ ವೇಳೆ ಯುದ್ಧ ಯಾವುದೇ ಕ್ಷಣದಲ್ಲಿ ಮರು ಆರಂಭಿಸುವುದಾಗಿ ಇಸ್ರೇಲ್‌ ಬೆದರಿಕೆ ಹಾಕಿತ್ತು. ಈ ಬೆಳವಣಿಗೆ ಮಧ್ಯೆಯೇ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆಗೆ ಬದಲಾಗಿ ಹಮಾಸ್ ಶನಿವಾರ ರಾತ್ರಿ ಇಸ್ರೇಲ್‌ ಮತ್ತು ವಿದೇಶಿ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಆದರೆ ಯಾವುದೇ ಕ್ಷಣದಲ್ಲಿ ಯುದ್ಧ ಮರು ಆರಂಭದ ಭೀತಿ ಪ್ರಾರಂಭವಾಗಿದೆ.

ಹಮಾಸ್ 8 ಮಕ್ಕಳು ಮತ್ತು ಐದು ಮಹಿಳೆಯರು ಸೇರಿ 13 ಇಸ್ರೇಲ್‌ ಒತ್ತೆಯಾಳುಗಳನ್ನು ಗಾಝಾದಲ್ಲಿನ ರೆಡ್‌ಕ್ರಾಸ್‌ನ ಅಂತರಾಷ್ಟ್ರೀಯ ಸಮಿತಿಗೆ ಹಸ್ತಾಂತರಿಸಿರುವ ಬಗ್ಗೆ ಇಸ್ರೇಲ್ ದೃಢಪಡಿಸಿದೆ. ಅವರನ್ನು ಈಜಿಪ್ಟ್‌ನ ರಫಾ ಕ್ರಾಸಿಂಗ್‌ನಾದ್ಯಂತ ಭದ್ರತೆಯಲ್ಲಿ ಇಸ್ರೇಲ್‌ಗೆ ಕರೆ ತರಲಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲ್ ಮಿಲಿಟರಿ ಪಡೆಗಳು ತಿಳಿಸಿದೆ. ಇದಲ್ಲದೆ ನಾಲ್ವರು ಥಾಯ್ಲೆಂಡ್‌ ಪ್ರಜೆಗಳನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

ಇದಾದ ಕೆಲವೇ ಗಂಟೆಗಳಲ್ಲಿ 39 ಪ್ಯಾಲೆಸ್ತೀನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಿದೆ ಎಂದು ಇಸ್ರೇಲ್‌ ಅಧಿಕಾರಿಗಳು ಮುಂಜಾನೆ ತಿಳಿಸಿದ್ದಾರೆ.

ಹಮಾಸ್ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆಗೆ ತಡ ಮಾಡಿತ್ತು. ಇಸ್ರೇಲ್ ಒಪ್ಪಂದದ ಪ್ರಮುಖ ಅಂಶಗಳನ್ನು ತಿರಸ್ಕರಿಸಿದೆ ಎಂದು ಹೇಳಿಕೊಂಡಿತ್ತು. ಉತ್ತರ ಗಾಝಾಕ್ಕೆ ಪರಿಹಾರ ಸಾಮಾಗ್ರಿ ತಲುಪಲು ಇಸ್ರೇಲ್‌ ಬೇಕಾದ ರೀತಿಯ ಸಹಾಯವನ್ನು ಮಾಡುತ್ತಿಲ್ಲ. ಒಪ್ಪಿಗೆಯಂತೆ ಪ್ಯಾಲೆಸ್ತೀನ್‌ ಕೈದಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿತ್ತು.

ಶನಿವಾರ ಸಂಜೆ ಲೆಬನಾನ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಮಾಸ್ ಅಧಿಕಾರಿ ಒಸಾಮಾ ಹಮ್ದಾನ್, ಬಿಡುಗಡೆ ಮಾಡಬೇಕಾದ ಕೈದಿಗಳ ಜೊತೆ ಇಸ್ರೇಲ್‌ ಚೆಲ್ಲಾಟವಾಡುತ್ತಿದೆ. ಮನೆಗೆ ಹಿಂದಿರುಗಲು ಪ್ರಯತ್ನಿಸಿದ ಗಾಝಾ ನಿವಾಸಿಗಳ ಮೇಲೆ ಇಸ್ರೇಲ್‌ ಸೈನಿಕರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಇಸ್ರೇಲ್ ನಿರಾಕರಿಸಿದೆ ಮತ್ತು ಹಮಾಸ್ ಎರಡನೇ ಗುಂಪಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ 4 ದಿನಗಳ ಕದನ ವಿರಾಮವು ಬೇಗನೆ ಕೊನೆಗೊಳ್ಳುತ್ತದೆ ಎಂದು ಬೆದರಿಕೆ ಹಾಕಿತ್ತು. ಇಸ್ರೇಲ್‌ ಮಿಲಿಟರಿಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಕ್ಟ್ ಈ ಬಗ್ಗೆ ಪ್ರತಿಕ್ರಿಯಿಸಿ ನಾವು ನಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಶನಿವಾರ ರಾತ್ರಿ ಹಮಾಸ್ ತನ್ನ ಅಧಿಕೃತ ಟೆಲಿಗ್ರಾಮ್ ಚಾನೆಲ್‌ನಲ್ಲಿ ಕತಾರ್ ಮತ್ತು ಈಜಿಪ್ಟ್ ನಡೆಸಿದ ಮಾತುಕತೆಯಂತೆ ಒತ್ತೆಯಾಳುಗಳ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಒತ್ತೆಯಾಳು ಒಪ್ಪಂದದ ಬಗ್ಗೆ ಕತಾರ್ ಪ್ರಧಾನಿಯೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಮಾತುಕೆತೆಯನ್ನು ನಡೆಸಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ಹೇಳಿದ್ದಾರೆ.

ಸಂಕ್ಷಿಪ್ತ ಕದನ ವಿರಾಮ ಶುಕ್ರವಾರ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಜಾರಿಗೆ ಬಂದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ 50 ದಿನಗಳ ಸಂಘರ್ಷದಲ್ಲಿ ಇದೇ ಮೊದಲ ಬಾರಿಗೆ 4 ದಿನಗಳ ಕದನ ವಿರಾವನ್ನು ಘೋಷಿಸಲಾಗಿದೆ.

ಒಪ್ಪಂದದ ಭಾಗವಾಗಿ ಗಾಝಾದಲ್ಲಿ ಒತ್ತೆಯಾಳಾಗಿದ್ದ 50 ಇಸ್ರೇಲ್‌ ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಕೊಂಡಿದೆ. ಇದಕ್ಕೆ ಬದಲಾಗಿ ಇಸ್ರೇಲ್ ಜೈಲುಗಳಲ್ಲಿದ್ದ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು ಸೇರಿ 150 ಪ್ಯಾಲೆಸ್ತೀನ್‌ ಜನರನ್ನು ಬಿಡುಗಡೆ ಬಗ್ಗೆ ಒಪ್ಪಂದ ಮಾಡಲಾಗಿತ್ತು.

ಇನ್ನು ತಾತ್ಕಾಲಿಕ ಕದನ ವಿರಾಮವಿದ್ದರೂ ಹಮಾಸ್ ನಿಯಂತ್ರಿಸುತ್ತಿರುವ ದಕ್ಷಿಣ ಗಾಝಾ ಮತ್ತು ಉತ್ತರ ಗಾಝಾವನ್ನು ಇಸ್ರೇಲ್ ಹೆಚ್ಚಾಗಿ ವಶಪಡಿಸಿಕೊಂಡಿದೆ ಮತ್ತು ಅಲ್ಲಿನ ಹಮಾಸ್ ಹೋರಾಟಗಾರರು ಸಾಕಷ್ಟು ಭೀತಿಯಿಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...