Homeಮುಖಪುಟಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

- Advertisement -
- Advertisement -

ಇಸ್ರೇಲ್‌ನಿಂದ ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಮಾಸ್‌ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಲು ವಿಳಂಬ ಮಾಡಿತ್ತು. ಈ ವೇಳೆ ಯುದ್ಧ ಯಾವುದೇ ಕ್ಷಣದಲ್ಲಿ ಮರು ಆರಂಭಿಸುವುದಾಗಿ ಇಸ್ರೇಲ್‌ ಬೆದರಿಕೆ ಹಾಕಿತ್ತು. ಈ ಬೆಳವಣಿಗೆ ಮಧ್ಯೆಯೇ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆಗೆ ಬದಲಾಗಿ ಹಮಾಸ್ ಶನಿವಾರ ರಾತ್ರಿ ಇಸ್ರೇಲ್‌ ಮತ್ತು ವಿದೇಶಿ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಆದರೆ ಯಾವುದೇ ಕ್ಷಣದಲ್ಲಿ ಯುದ್ಧ ಮರು ಆರಂಭದ ಭೀತಿ ಪ್ರಾರಂಭವಾಗಿದೆ.

ಹಮಾಸ್ 8 ಮಕ್ಕಳು ಮತ್ತು ಐದು ಮಹಿಳೆಯರು ಸೇರಿ 13 ಇಸ್ರೇಲ್‌ ಒತ್ತೆಯಾಳುಗಳನ್ನು ಗಾಝಾದಲ್ಲಿನ ರೆಡ್‌ಕ್ರಾಸ್‌ನ ಅಂತರಾಷ್ಟ್ರೀಯ ಸಮಿತಿಗೆ ಹಸ್ತಾಂತರಿಸಿರುವ ಬಗ್ಗೆ ಇಸ್ರೇಲ್ ದೃಢಪಡಿಸಿದೆ. ಅವರನ್ನು ಈಜಿಪ್ಟ್‌ನ ರಫಾ ಕ್ರಾಸಿಂಗ್‌ನಾದ್ಯಂತ ಭದ್ರತೆಯಲ್ಲಿ ಇಸ್ರೇಲ್‌ಗೆ ಕರೆ ತರಲಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲ್ ಮಿಲಿಟರಿ ಪಡೆಗಳು ತಿಳಿಸಿದೆ. ಇದಲ್ಲದೆ ನಾಲ್ವರು ಥಾಯ್ಲೆಂಡ್‌ ಪ್ರಜೆಗಳನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

ಇದಾದ ಕೆಲವೇ ಗಂಟೆಗಳಲ್ಲಿ 39 ಪ್ಯಾಲೆಸ್ತೀನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಿದೆ ಎಂದು ಇಸ್ರೇಲ್‌ ಅಧಿಕಾರಿಗಳು ಮುಂಜಾನೆ ತಿಳಿಸಿದ್ದಾರೆ.

ಹಮಾಸ್ ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆಗೆ ತಡ ಮಾಡಿತ್ತು. ಇಸ್ರೇಲ್ ಒಪ್ಪಂದದ ಪ್ರಮುಖ ಅಂಶಗಳನ್ನು ತಿರಸ್ಕರಿಸಿದೆ ಎಂದು ಹೇಳಿಕೊಂಡಿತ್ತು. ಉತ್ತರ ಗಾಝಾಕ್ಕೆ ಪರಿಹಾರ ಸಾಮಾಗ್ರಿ ತಲುಪಲು ಇಸ್ರೇಲ್‌ ಬೇಕಾದ ರೀತಿಯ ಸಹಾಯವನ್ನು ಮಾಡುತ್ತಿಲ್ಲ. ಒಪ್ಪಿಗೆಯಂತೆ ಪ್ಯಾಲೆಸ್ತೀನ್‌ ಕೈದಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿತ್ತು.

ಶನಿವಾರ ಸಂಜೆ ಲೆಬನಾನ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಮಾಸ್ ಅಧಿಕಾರಿ ಒಸಾಮಾ ಹಮ್ದಾನ್, ಬಿಡುಗಡೆ ಮಾಡಬೇಕಾದ ಕೈದಿಗಳ ಜೊತೆ ಇಸ್ರೇಲ್‌ ಚೆಲ್ಲಾಟವಾಡುತ್ತಿದೆ. ಮನೆಗೆ ಹಿಂದಿರುಗಲು ಪ್ರಯತ್ನಿಸಿದ ಗಾಝಾ ನಿವಾಸಿಗಳ ಮೇಲೆ ಇಸ್ರೇಲ್‌ ಸೈನಿಕರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಇಸ್ರೇಲ್ ನಿರಾಕರಿಸಿದೆ ಮತ್ತು ಹಮಾಸ್ ಎರಡನೇ ಗುಂಪಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ 4 ದಿನಗಳ ಕದನ ವಿರಾಮವು ಬೇಗನೆ ಕೊನೆಗೊಳ್ಳುತ್ತದೆ ಎಂದು ಬೆದರಿಕೆ ಹಾಕಿತ್ತು. ಇಸ್ರೇಲ್‌ ಮಿಲಿಟರಿಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಕ್ಟ್ ಈ ಬಗ್ಗೆ ಪ್ರತಿಕ್ರಿಯಿಸಿ ನಾವು ನಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಶನಿವಾರ ರಾತ್ರಿ ಹಮಾಸ್ ತನ್ನ ಅಧಿಕೃತ ಟೆಲಿಗ್ರಾಮ್ ಚಾನೆಲ್‌ನಲ್ಲಿ ಕತಾರ್ ಮತ್ತು ಈಜಿಪ್ಟ್ ನಡೆಸಿದ ಮಾತುಕತೆಯಂತೆ ಒತ್ತೆಯಾಳುಗಳ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಒತ್ತೆಯಾಳು ಒಪ್ಪಂದದ ಬಗ್ಗೆ ಕತಾರ್ ಪ್ರಧಾನಿಯೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಮಾತುಕೆತೆಯನ್ನು ನಡೆಸಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ಹೇಳಿದ್ದಾರೆ.

ಸಂಕ್ಷಿಪ್ತ ಕದನ ವಿರಾಮ ಶುಕ್ರವಾರ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಜಾರಿಗೆ ಬಂದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ 50 ದಿನಗಳ ಸಂಘರ್ಷದಲ್ಲಿ ಇದೇ ಮೊದಲ ಬಾರಿಗೆ 4 ದಿನಗಳ ಕದನ ವಿರಾವನ್ನು ಘೋಷಿಸಲಾಗಿದೆ.

ಒಪ್ಪಂದದ ಭಾಗವಾಗಿ ಗಾಝಾದಲ್ಲಿ ಒತ್ತೆಯಾಳಾಗಿದ್ದ 50 ಇಸ್ರೇಲ್‌ ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಕೊಂಡಿದೆ. ಇದಕ್ಕೆ ಬದಲಾಗಿ ಇಸ್ರೇಲ್ ಜೈಲುಗಳಲ್ಲಿದ್ದ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು ಸೇರಿ 150 ಪ್ಯಾಲೆಸ್ತೀನ್‌ ಜನರನ್ನು ಬಿಡುಗಡೆ ಬಗ್ಗೆ ಒಪ್ಪಂದ ಮಾಡಲಾಗಿತ್ತು.

ಇನ್ನು ತಾತ್ಕಾಲಿಕ ಕದನ ವಿರಾಮವಿದ್ದರೂ ಹಮಾಸ್ ನಿಯಂತ್ರಿಸುತ್ತಿರುವ ದಕ್ಷಿಣ ಗಾಝಾ ಮತ್ತು ಉತ್ತರ ಗಾಝಾವನ್ನು ಇಸ್ರೇಲ್ ಹೆಚ್ಚಾಗಿ ವಶಪಡಿಸಿಕೊಂಡಿದೆ ಮತ್ತು ಅಲ್ಲಿನ ಹಮಾಸ್ ಹೋರಾಟಗಾರರು ಸಾಕಷ್ಟು ಭೀತಿಯಿಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...