Homeಮುಖಪುಟಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

ಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

- Advertisement -
- Advertisement -

ಇಸ್ರೇಲ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ನಾವೂ ಕದನ ವಿರಾಮಕ್ಕೆ ಸಿದ್ದ ಎಂದು ಗಾಝಾದ ಹಮಾಸ್ ಹೇಳಿರುವುದಾಗಿ ವರದಿಯಾಗಿದೆ.

“ನಾವು ಕದನ ವಿರಾಮಕ್ಕೆ ಮತ್ತು ಒತ್ತೆಯಾಳುಗಳ ಬಿಡುಗಡೆಗೆ ಸಿದ್ದ” ಎಂದು ಮಧ್ಯವರ್ತಿಗಳಾದ ಈಜಿಪ್ಟ್, ಕತಾರ್ ಮತ್ತು ತುರ್ಕಿಗೆ ಹಮಾಸ್ ಹೇಳಿರುವುದಾಗಿ ಅದರ ಮುಖ್ಯಸ್ಥರನ್ನು ಉಲ್ಲೇಖಿಸಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ನಿಲ್ಲಿಸಬೇಕು ಎಂಬುವುದು ಹಮಾಸ್‌ನ ಆಗ್ರವಾದರೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂಬುವುದು ಇಸ್ರೇಲ್‌ನ ಬೇಡಿಕೆಯಾಗಿದೆ. ಈ ವಿಷಯದಲ್ಲಿ ಒಮ್ಮತಕ್ಕೆ ಬಂದು, ಕಳೆದ ಒಂದು ವರ್ಷದ ಅವಧಿಯಲ್ಲಿ ಒಮ್ಮೆ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆಯಾಗಿತ್ತು. ಆದರೆ, ಮತ್ತೆ ಆಕ್ರಮಣ ಮುಂದುವರೆದಿದೆ.

ಕಳೆದ 13 ತಿಂಗಳ ಇಸ್ರೇಲ್‌ ಆಕ್ರಮಣದಲ್ಲಿ ಬಲಿಯಾದ ಗಾಝಾ ನಾಗರಿಕರ ಸಂಖ್ಯೆ ನಿನ್ನೆಗೆ (ನ.26) 44,249ಕ್ಕೆ ತಲುಪಿದೆ. 104,746 ಜನರು ಗಾಯಗೊಂಡಿದ್ದಾರೆ ಎಂದು ಹಮಾಸ್ ಆರೋಗ್ಯ ಇಲಾಖೆ ಹೇಳಿದೆ.

ಲೆಬನಾನ್‌ನಲ್ಲಿ ಸಂಭ್ರಮ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆ ಲೆಬನಾನ್‌ನಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗಳನ್ನು ತೊರೆದು ದೂರ ಹೋಗಿದ್ದ ಜನರು ವಾಹನಗಳಲ್ಲಿ ದಕ್ಷಿಣ ಲೆಬನಾನ್‌ನತ್ತ ಆಗಮಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೈರೂತ್‌ ನಗರದಲ್ಲಿ ಜನರು ಗುಂಪುಗೂಡಿ, ಹಾಡು ಹಾಡಿ ಸಂಭ್ರಮಾಚರಣೆ ಮಾಡಿರುವ ವಿಡಿಯೋಗಳು ಹರಿದಾಡುತ್ತಿವೆ.

ಆದರೆ, ಇಸ್ರೇಲ್ ಸೇನೆ ನಾವಿರುವ ಪ್ರದೇಶಗಳಿಗೆ ಈಗ ಬರಬೇಡಿ ಎಂಬ ಎಚ್ಚರಿಕೆಯನ್ನು ನೀಡಿದೆ. ಮತ್ತೊಂದೆಡೆ ಇಸ್ರೇಲ್ ಸೇನೆ ಹೋದ ಬಳಿಕ, ನಾವು ತಂಡಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿದೆ.

ಕದನ ವಿರಾಮಕ್ಕೆ ಸ್ವಾಗತ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕದನ ವಿರಾಮವನ್ನು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ಇರಾನ್, ಈಜಿಪ್ಟ್‌, ಚೀನಾ, ಬ್ರಿಟನ್ ದೇಶಗಳು ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.

ಕದನ ವಿರಾಮ | ಇಸ್ರೇಲ್-ಹಿಜ್ಬುಲ್ಲಾ ಪ್ರತಿಕ್ರಿಯೆ

ಕದನ ವಿರಾಮದ ಕುರಿತು ಇಸ್ರೇಲ್ ಮತ್ತು ಹಿಜ್ಬುಲ್ಲಾ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.
ಹಿಜ್ಬುಲ್ಲಾ ತಾತ್ವಿಕವಾಗಿ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಂಡಿದ್ದರೂ, ಅದು ಇನ್ನೂ ಅಂತಿಮ ಒಪ್ಪಂದವನ್ನು ಪರಿಶೀಲಿಸಬೇಕಾಗಿದೆ. ಲೆಬನಾನ್‌ನ ಸಾರ್ವಭೌಮತ್ವ ಉಲ್ಲಂಘಿಸುವ ಯಾವುದೇ ಅಂಶ ಒಪ್ಪಂದದಲ್ಲಿ ಇದ್ದರೂ, ನಾವು ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹಿಜ್ಬುಲ್ಲಾದ ಹಿರಿಯ ಅಧಿಕಾರಿ ಮಹಮೂದ್ ಕಮಾತಿ ಹೇಳಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಕದನ ವಿರಾಮ ಘೋಷಣೆಯಾದರೂ, ಹಿಜ್ಬುಲ್ಲಾ ಉತ್ತರ ಇಸ್ರೇಲ್‌ ಮೇಲೆ ರಾಕೆಟ್ ದಾಳಿ ಮುಂದುವರೆಸಿದೆ. ಉತ್ತರ ಇಸ್ರೇಲ್‌ನಲ್ಲಿ ವಾಯುದಾಳಿಯ ಸೈರನ್ ಮೊಳಗುತ್ತಿದೆ. ಕದನ ವಿರಾಮದ ಸುದ್ದಿಯ ನಡುವೆ ಉದ್ವಿಗ್ನತೆ ಉಲ್ಬಣಗೊಂಡಿದೆ.

ಮತ್ತೊಂದಡೆ, ಹಿಜ್ಬುಲ್ಲಾ ಕದನ ವಿರಾಮವನ್ನು ಉಲ್ಲಂಘಿಸಿದರೆ ಮಿಲಿಟರಿ ಕಾರ್ಯಾಚರಣೆ ಪುನರಾರಂಭಿಸಲಾಗುವುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಸಿದ್ದಾರೆ. ಹಿಜ್ಬುಲ್ಲಾ ಶಸ್ತ್ರಾಸ್ತ್ರ, ಮದ್ದುಗುಡ್ಡು, ರಾಕೆಟ್ ಬಳಸಿದರೆ ತಕ್ಕ ಉತ್ತರ ನೀಡುತ್ತೇವೆ ಎಂದಿದ್ದಾರೆ.

ಇತ್ತೀಚಿನ ವರದಿಯ ಪ್ರಕಾರ, ಕದನ ವಿರಾಮದ ನಡುವೆಯೂ ಇಸ್ರೇಲ್ ದಾಳಿ ಮುಂದುವರೆಸಿದೆ. ದಕ್ಷಿಣ ಬೈರುತ್‌ನ ದಹಿಯೆಹ್ ಪ್ರದೇಶ 20 ಹಿಜ್ಬುಲ್ಲಾ ನೆಲೆಗಳನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದೆ.

ಇದನ್ನೂ ಓದಿ : ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...