Homeಮುಖಪುಟಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

ಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

- Advertisement -
- Advertisement -

ಇಸ್ರೇಲ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ನಾವೂ ಕದನ ವಿರಾಮಕ್ಕೆ ಸಿದ್ದ ಎಂದು ಗಾಝಾದ ಹಮಾಸ್ ಹೇಳಿರುವುದಾಗಿ ವರದಿಯಾಗಿದೆ.

“ನಾವು ಕದನ ವಿರಾಮಕ್ಕೆ ಮತ್ತು ಒತ್ತೆಯಾಳುಗಳ ಬಿಡುಗಡೆಗೆ ಸಿದ್ದ” ಎಂದು ಮಧ್ಯವರ್ತಿಗಳಾದ ಈಜಿಪ್ಟ್, ಕತಾರ್ ಮತ್ತು ತುರ್ಕಿಗೆ ಹಮಾಸ್ ಹೇಳಿರುವುದಾಗಿ ಅದರ ಮುಖ್ಯಸ್ಥರನ್ನು ಉಲ್ಲೇಖಿಸಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ನಿಲ್ಲಿಸಬೇಕು ಎಂಬುವುದು ಹಮಾಸ್‌ನ ಆಗ್ರವಾದರೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂಬುವುದು ಇಸ್ರೇಲ್‌ನ ಬೇಡಿಕೆಯಾಗಿದೆ. ಈ ವಿಷಯದಲ್ಲಿ ಒಮ್ಮತಕ್ಕೆ ಬಂದು, ಕಳೆದ ಒಂದು ವರ್ಷದ ಅವಧಿಯಲ್ಲಿ ಒಮ್ಮೆ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆಯಾಗಿತ್ತು. ಆದರೆ, ಮತ್ತೆ ಆಕ್ರಮಣ ಮುಂದುವರೆದಿದೆ.

ಕಳೆದ 13 ತಿಂಗಳ ಇಸ್ರೇಲ್‌ ಆಕ್ರಮಣದಲ್ಲಿ ಬಲಿಯಾದ ಗಾಝಾ ನಾಗರಿಕರ ಸಂಖ್ಯೆ ನಿನ್ನೆಗೆ (ನ.26) 44,249ಕ್ಕೆ ತಲುಪಿದೆ. 104,746 ಜನರು ಗಾಯಗೊಂಡಿದ್ದಾರೆ ಎಂದು ಹಮಾಸ್ ಆರೋಗ್ಯ ಇಲಾಖೆ ಹೇಳಿದೆ.

ಲೆಬನಾನ್‌ನಲ್ಲಿ ಸಂಭ್ರಮ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆ ಲೆಬನಾನ್‌ನಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗಳನ್ನು ತೊರೆದು ದೂರ ಹೋಗಿದ್ದ ಜನರು ವಾಹನಗಳಲ್ಲಿ ದಕ್ಷಿಣ ಲೆಬನಾನ್‌ನತ್ತ ಆಗಮಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೈರೂತ್‌ ನಗರದಲ್ಲಿ ಜನರು ಗುಂಪುಗೂಡಿ, ಹಾಡು ಹಾಡಿ ಸಂಭ್ರಮಾಚರಣೆ ಮಾಡಿರುವ ವಿಡಿಯೋಗಳು ಹರಿದಾಡುತ್ತಿವೆ.

ಆದರೆ, ಇಸ್ರೇಲ್ ಸೇನೆ ನಾವಿರುವ ಪ್ರದೇಶಗಳಿಗೆ ಈಗ ಬರಬೇಡಿ ಎಂಬ ಎಚ್ಚರಿಕೆಯನ್ನು ನೀಡಿದೆ. ಮತ್ತೊಂದೆಡೆ ಇಸ್ರೇಲ್ ಸೇನೆ ಹೋದ ಬಳಿಕ, ನಾವು ತಂಡಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿದೆ.

ಕದನ ವಿರಾಮಕ್ಕೆ ಸ್ವಾಗತ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕದನ ವಿರಾಮವನ್ನು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ಇರಾನ್, ಈಜಿಪ್ಟ್‌, ಚೀನಾ, ಬ್ರಿಟನ್ ದೇಶಗಳು ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.

ಕದನ ವಿರಾಮ | ಇಸ್ರೇಲ್-ಹಿಜ್ಬುಲ್ಲಾ ಪ್ರತಿಕ್ರಿಯೆ

ಕದನ ವಿರಾಮದ ಕುರಿತು ಇಸ್ರೇಲ್ ಮತ್ತು ಹಿಜ್ಬುಲ್ಲಾ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.
ಹಿಜ್ಬುಲ್ಲಾ ತಾತ್ವಿಕವಾಗಿ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಂಡಿದ್ದರೂ, ಅದು ಇನ್ನೂ ಅಂತಿಮ ಒಪ್ಪಂದವನ್ನು ಪರಿಶೀಲಿಸಬೇಕಾಗಿದೆ. ಲೆಬನಾನ್‌ನ ಸಾರ್ವಭೌಮತ್ವ ಉಲ್ಲಂಘಿಸುವ ಯಾವುದೇ ಅಂಶ ಒಪ್ಪಂದದಲ್ಲಿ ಇದ್ದರೂ, ನಾವು ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹಿಜ್ಬುಲ್ಲಾದ ಹಿರಿಯ ಅಧಿಕಾರಿ ಮಹಮೂದ್ ಕಮಾತಿ ಹೇಳಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಕದನ ವಿರಾಮ ಘೋಷಣೆಯಾದರೂ, ಹಿಜ್ಬುಲ್ಲಾ ಉತ್ತರ ಇಸ್ರೇಲ್‌ ಮೇಲೆ ರಾಕೆಟ್ ದಾಳಿ ಮುಂದುವರೆಸಿದೆ. ಉತ್ತರ ಇಸ್ರೇಲ್‌ನಲ್ಲಿ ವಾಯುದಾಳಿಯ ಸೈರನ್ ಮೊಳಗುತ್ತಿದೆ. ಕದನ ವಿರಾಮದ ಸುದ್ದಿಯ ನಡುವೆ ಉದ್ವಿಗ್ನತೆ ಉಲ್ಬಣಗೊಂಡಿದೆ.

ಮತ್ತೊಂದಡೆ, ಹಿಜ್ಬುಲ್ಲಾ ಕದನ ವಿರಾಮವನ್ನು ಉಲ್ಲಂಘಿಸಿದರೆ ಮಿಲಿಟರಿ ಕಾರ್ಯಾಚರಣೆ ಪುನರಾರಂಭಿಸಲಾಗುವುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಸಿದ್ದಾರೆ. ಹಿಜ್ಬುಲ್ಲಾ ಶಸ್ತ್ರಾಸ್ತ್ರ, ಮದ್ದುಗುಡ್ಡು, ರಾಕೆಟ್ ಬಳಸಿದರೆ ತಕ್ಕ ಉತ್ತರ ನೀಡುತ್ತೇವೆ ಎಂದಿದ್ದಾರೆ.

ಇತ್ತೀಚಿನ ವರದಿಯ ಪ್ರಕಾರ, ಕದನ ವಿರಾಮದ ನಡುವೆಯೂ ಇಸ್ರೇಲ್ ದಾಳಿ ಮುಂದುವರೆಸಿದೆ. ದಕ್ಷಿಣ ಬೈರುತ್‌ನ ದಹಿಯೆಹ್ ಪ್ರದೇಶ 20 ಹಿಜ್ಬುಲ್ಲಾ ನೆಲೆಗಳನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದೆ.

ಇದನ್ನೂ ಓದಿ : ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...