Homeಮುಖಪುಟಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

ಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

- Advertisement -
- Advertisement -

ಇಸ್ರೇಲ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ನಾವೂ ಕದನ ವಿರಾಮಕ್ಕೆ ಸಿದ್ದ ಎಂದು ಗಾಝಾದ ಹಮಾಸ್ ಹೇಳಿರುವುದಾಗಿ ವರದಿಯಾಗಿದೆ.

“ನಾವು ಕದನ ವಿರಾಮಕ್ಕೆ ಮತ್ತು ಒತ್ತೆಯಾಳುಗಳ ಬಿಡುಗಡೆಗೆ ಸಿದ್ದ” ಎಂದು ಮಧ್ಯವರ್ತಿಗಳಾದ ಈಜಿಪ್ಟ್, ಕತಾರ್ ಮತ್ತು ತುರ್ಕಿಗೆ ಹಮಾಸ್ ಹೇಳಿರುವುದಾಗಿ ಅದರ ಮುಖ್ಯಸ್ಥರನ್ನು ಉಲ್ಲೇಖಿಸಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ನಿಲ್ಲಿಸಬೇಕು ಎಂಬುವುದು ಹಮಾಸ್‌ನ ಆಗ್ರವಾದರೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂಬುವುದು ಇಸ್ರೇಲ್‌ನ ಬೇಡಿಕೆಯಾಗಿದೆ. ಈ ವಿಷಯದಲ್ಲಿ ಒಮ್ಮತಕ್ಕೆ ಬಂದು, ಕಳೆದ ಒಂದು ವರ್ಷದ ಅವಧಿಯಲ್ಲಿ ಒಮ್ಮೆ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆಯಾಗಿತ್ತು. ಆದರೆ, ಮತ್ತೆ ಆಕ್ರಮಣ ಮುಂದುವರೆದಿದೆ.

ಕಳೆದ 13 ತಿಂಗಳ ಇಸ್ರೇಲ್‌ ಆಕ್ರಮಣದಲ್ಲಿ ಬಲಿಯಾದ ಗಾಝಾ ನಾಗರಿಕರ ಸಂಖ್ಯೆ ನಿನ್ನೆಗೆ (ನ.26) 44,249ಕ್ಕೆ ತಲುಪಿದೆ. 104,746 ಜನರು ಗಾಯಗೊಂಡಿದ್ದಾರೆ ಎಂದು ಹಮಾಸ್ ಆರೋಗ್ಯ ಇಲಾಖೆ ಹೇಳಿದೆ.

ಲೆಬನಾನ್‌ನಲ್ಲಿ ಸಂಭ್ರಮ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆ ಲೆಬನಾನ್‌ನಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗಳನ್ನು ತೊರೆದು ದೂರ ಹೋಗಿದ್ದ ಜನರು ವಾಹನಗಳಲ್ಲಿ ದಕ್ಷಿಣ ಲೆಬನಾನ್‌ನತ್ತ ಆಗಮಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೈರೂತ್‌ ನಗರದಲ್ಲಿ ಜನರು ಗುಂಪುಗೂಡಿ, ಹಾಡು ಹಾಡಿ ಸಂಭ್ರಮಾಚರಣೆ ಮಾಡಿರುವ ವಿಡಿಯೋಗಳು ಹರಿದಾಡುತ್ತಿವೆ.

ಆದರೆ, ಇಸ್ರೇಲ್ ಸೇನೆ ನಾವಿರುವ ಪ್ರದೇಶಗಳಿಗೆ ಈಗ ಬರಬೇಡಿ ಎಂಬ ಎಚ್ಚರಿಕೆಯನ್ನು ನೀಡಿದೆ. ಮತ್ತೊಂದೆಡೆ ಇಸ್ರೇಲ್ ಸೇನೆ ಹೋದ ಬಳಿಕ, ನಾವು ತಂಡಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿದೆ.

ಕದನ ವಿರಾಮಕ್ಕೆ ಸ್ವಾಗತ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕದನ ವಿರಾಮವನ್ನು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ಇರಾನ್, ಈಜಿಪ್ಟ್‌, ಚೀನಾ, ಬ್ರಿಟನ್ ದೇಶಗಳು ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.

ಕದನ ವಿರಾಮ | ಇಸ್ರೇಲ್-ಹಿಜ್ಬುಲ್ಲಾ ಪ್ರತಿಕ್ರಿಯೆ

ಕದನ ವಿರಾಮದ ಕುರಿತು ಇಸ್ರೇಲ್ ಮತ್ತು ಹಿಜ್ಬುಲ್ಲಾ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.
ಹಿಜ್ಬುಲ್ಲಾ ತಾತ್ವಿಕವಾಗಿ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಂಡಿದ್ದರೂ, ಅದು ಇನ್ನೂ ಅಂತಿಮ ಒಪ್ಪಂದವನ್ನು ಪರಿಶೀಲಿಸಬೇಕಾಗಿದೆ. ಲೆಬನಾನ್‌ನ ಸಾರ್ವಭೌಮತ್ವ ಉಲ್ಲಂಘಿಸುವ ಯಾವುದೇ ಅಂಶ ಒಪ್ಪಂದದಲ್ಲಿ ಇದ್ದರೂ, ನಾವು ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹಿಜ್ಬುಲ್ಲಾದ ಹಿರಿಯ ಅಧಿಕಾರಿ ಮಹಮೂದ್ ಕಮಾತಿ ಹೇಳಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಕದನ ವಿರಾಮ ಘೋಷಣೆಯಾದರೂ, ಹಿಜ್ಬುಲ್ಲಾ ಉತ್ತರ ಇಸ್ರೇಲ್‌ ಮೇಲೆ ರಾಕೆಟ್ ದಾಳಿ ಮುಂದುವರೆಸಿದೆ. ಉತ್ತರ ಇಸ್ರೇಲ್‌ನಲ್ಲಿ ವಾಯುದಾಳಿಯ ಸೈರನ್ ಮೊಳಗುತ್ತಿದೆ. ಕದನ ವಿರಾಮದ ಸುದ್ದಿಯ ನಡುವೆ ಉದ್ವಿಗ್ನತೆ ಉಲ್ಬಣಗೊಂಡಿದೆ.

ಮತ್ತೊಂದಡೆ, ಹಿಜ್ಬುಲ್ಲಾ ಕದನ ವಿರಾಮವನ್ನು ಉಲ್ಲಂಘಿಸಿದರೆ ಮಿಲಿಟರಿ ಕಾರ್ಯಾಚರಣೆ ಪುನರಾರಂಭಿಸಲಾಗುವುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಸಿದ್ದಾರೆ. ಹಿಜ್ಬುಲ್ಲಾ ಶಸ್ತ್ರಾಸ್ತ್ರ, ಮದ್ದುಗುಡ್ಡು, ರಾಕೆಟ್ ಬಳಸಿದರೆ ತಕ್ಕ ಉತ್ತರ ನೀಡುತ್ತೇವೆ ಎಂದಿದ್ದಾರೆ.

ಇತ್ತೀಚಿನ ವರದಿಯ ಪ್ರಕಾರ, ಕದನ ವಿರಾಮದ ನಡುವೆಯೂ ಇಸ್ರೇಲ್ ದಾಳಿ ಮುಂದುವರೆಸಿದೆ. ದಕ್ಷಿಣ ಬೈರುತ್‌ನ ದಹಿಯೆಹ್ ಪ್ರದೇಶ 20 ಹಿಜ್ಬುಲ್ಲಾ ನೆಲೆಗಳನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದೆ.

ಇದನ್ನೂ ಓದಿ : ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...