Homeಮುಖಪುಟಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

ಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

- Advertisement -
- Advertisement -

ಇಸ್ರೇಲ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ನಾವೂ ಕದನ ವಿರಾಮಕ್ಕೆ ಸಿದ್ದ ಎಂದು ಗಾಝಾದ ಹಮಾಸ್ ಹೇಳಿರುವುದಾಗಿ ವರದಿಯಾಗಿದೆ.

“ನಾವು ಕದನ ವಿರಾಮಕ್ಕೆ ಮತ್ತು ಒತ್ತೆಯಾಳುಗಳ ಬಿಡುಗಡೆಗೆ ಸಿದ್ದ” ಎಂದು ಮಧ್ಯವರ್ತಿಗಳಾದ ಈಜಿಪ್ಟ್, ಕತಾರ್ ಮತ್ತು ತುರ್ಕಿಗೆ ಹಮಾಸ್ ಹೇಳಿರುವುದಾಗಿ ಅದರ ಮುಖ್ಯಸ್ಥರನ್ನು ಉಲ್ಲೇಖಿಸಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ನಿಲ್ಲಿಸಬೇಕು ಎಂಬುವುದು ಹಮಾಸ್‌ನ ಆಗ್ರವಾದರೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂಬುವುದು ಇಸ್ರೇಲ್‌ನ ಬೇಡಿಕೆಯಾಗಿದೆ. ಈ ವಿಷಯದಲ್ಲಿ ಒಮ್ಮತಕ್ಕೆ ಬಂದು, ಕಳೆದ ಒಂದು ವರ್ಷದ ಅವಧಿಯಲ್ಲಿ ಒಮ್ಮೆ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆಯಾಗಿತ್ತು. ಆದರೆ, ಮತ್ತೆ ಆಕ್ರಮಣ ಮುಂದುವರೆದಿದೆ.

ಕಳೆದ 13 ತಿಂಗಳ ಇಸ್ರೇಲ್‌ ಆಕ್ರಮಣದಲ್ಲಿ ಬಲಿಯಾದ ಗಾಝಾ ನಾಗರಿಕರ ಸಂಖ್ಯೆ ನಿನ್ನೆಗೆ (ನ.26) 44,249ಕ್ಕೆ ತಲುಪಿದೆ. 104,746 ಜನರು ಗಾಯಗೊಂಡಿದ್ದಾರೆ ಎಂದು ಹಮಾಸ್ ಆರೋಗ್ಯ ಇಲಾಖೆ ಹೇಳಿದೆ.

ಲೆಬನಾನ್‌ನಲ್ಲಿ ಸಂಭ್ರಮ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆ ಲೆಬನಾನ್‌ನಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗಳನ್ನು ತೊರೆದು ದೂರ ಹೋಗಿದ್ದ ಜನರು ವಾಹನಗಳಲ್ಲಿ ದಕ್ಷಿಣ ಲೆಬನಾನ್‌ನತ್ತ ಆಗಮಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೈರೂತ್‌ ನಗರದಲ್ಲಿ ಜನರು ಗುಂಪುಗೂಡಿ, ಹಾಡು ಹಾಡಿ ಸಂಭ್ರಮಾಚರಣೆ ಮಾಡಿರುವ ವಿಡಿಯೋಗಳು ಹರಿದಾಡುತ್ತಿವೆ.

ಆದರೆ, ಇಸ್ರೇಲ್ ಸೇನೆ ನಾವಿರುವ ಪ್ರದೇಶಗಳಿಗೆ ಈಗ ಬರಬೇಡಿ ಎಂಬ ಎಚ್ಚರಿಕೆಯನ್ನು ನೀಡಿದೆ. ಮತ್ತೊಂದೆಡೆ ಇಸ್ರೇಲ್ ಸೇನೆ ಹೋದ ಬಳಿಕ, ನಾವು ತಂಡಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿದೆ.

ಕದನ ವಿರಾಮಕ್ಕೆ ಸ್ವಾಗತ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕದನ ವಿರಾಮವನ್ನು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ಇರಾನ್, ಈಜಿಪ್ಟ್‌, ಚೀನಾ, ಬ್ರಿಟನ್ ದೇಶಗಳು ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.

ಕದನ ವಿರಾಮ | ಇಸ್ರೇಲ್-ಹಿಜ್ಬುಲ್ಲಾ ಪ್ರತಿಕ್ರಿಯೆ

ಕದನ ವಿರಾಮದ ಕುರಿತು ಇಸ್ರೇಲ್ ಮತ್ತು ಹಿಜ್ಬುಲ್ಲಾ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.
ಹಿಜ್ಬುಲ್ಲಾ ತಾತ್ವಿಕವಾಗಿ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಂಡಿದ್ದರೂ, ಅದು ಇನ್ನೂ ಅಂತಿಮ ಒಪ್ಪಂದವನ್ನು ಪರಿಶೀಲಿಸಬೇಕಾಗಿದೆ. ಲೆಬನಾನ್‌ನ ಸಾರ್ವಭೌಮತ್ವ ಉಲ್ಲಂಘಿಸುವ ಯಾವುದೇ ಅಂಶ ಒಪ್ಪಂದದಲ್ಲಿ ಇದ್ದರೂ, ನಾವು ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹಿಜ್ಬುಲ್ಲಾದ ಹಿರಿಯ ಅಧಿಕಾರಿ ಮಹಮೂದ್ ಕಮಾತಿ ಹೇಳಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಕದನ ವಿರಾಮ ಘೋಷಣೆಯಾದರೂ, ಹಿಜ್ಬುಲ್ಲಾ ಉತ್ತರ ಇಸ್ರೇಲ್‌ ಮೇಲೆ ರಾಕೆಟ್ ದಾಳಿ ಮುಂದುವರೆಸಿದೆ. ಉತ್ತರ ಇಸ್ರೇಲ್‌ನಲ್ಲಿ ವಾಯುದಾಳಿಯ ಸೈರನ್ ಮೊಳಗುತ್ತಿದೆ. ಕದನ ವಿರಾಮದ ಸುದ್ದಿಯ ನಡುವೆ ಉದ್ವಿಗ್ನತೆ ಉಲ್ಬಣಗೊಂಡಿದೆ.

ಮತ್ತೊಂದಡೆ, ಹಿಜ್ಬುಲ್ಲಾ ಕದನ ವಿರಾಮವನ್ನು ಉಲ್ಲಂಘಿಸಿದರೆ ಮಿಲಿಟರಿ ಕಾರ್ಯಾಚರಣೆ ಪುನರಾರಂಭಿಸಲಾಗುವುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಸಿದ್ದಾರೆ. ಹಿಜ್ಬುಲ್ಲಾ ಶಸ್ತ್ರಾಸ್ತ್ರ, ಮದ್ದುಗುಡ್ಡು, ರಾಕೆಟ್ ಬಳಸಿದರೆ ತಕ್ಕ ಉತ್ತರ ನೀಡುತ್ತೇವೆ ಎಂದಿದ್ದಾರೆ.

ಇತ್ತೀಚಿನ ವರದಿಯ ಪ್ರಕಾರ, ಕದನ ವಿರಾಮದ ನಡುವೆಯೂ ಇಸ್ರೇಲ್ ದಾಳಿ ಮುಂದುವರೆಸಿದೆ. ದಕ್ಷಿಣ ಬೈರುತ್‌ನ ದಹಿಯೆಹ್ ಪ್ರದೇಶ 20 ಹಿಜ್ಬುಲ್ಲಾ ನೆಲೆಗಳನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದೆ.

ಇದನ್ನೂ ಓದಿ : ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...