Homeಮುಖಪುಟಹಮ್ದರ್ದ್ ರೂಹ್ ಅಫ್ಜಾ ಗುರಿಯಾಗಿಸಿ ಹೇಳಿಕೆ ನೀಡಲ್ಲ: ದೆಹಲಿ ಹೈಕೋರ್ಟ್‌ಗೆ ರಾಮದೇವ್ ಭರವಸೆ

ಹಮ್ದರ್ದ್ ರೂಹ್ ಅಫ್ಜಾ ಗುರಿಯಾಗಿಸಿ ಹೇಳಿಕೆ ನೀಡಲ್ಲ: ದೆಹಲಿ ಹೈಕೋರ್ಟ್‌ಗೆ ರಾಮದೇವ್ ಭರವಸೆ

- Advertisement -
- Advertisement -

ಆಹಾರ ಕಂಪನಿ ಹಮ್ದರ್ದ್‌ನ ಪಾನೀಯ ‘ರೂಹ್ ಅಫ್ಜಾ’ವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವುದಿಲ್ಲ ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಪ್ರಕಟಿಸುವುದಿಲ್ಲ ಎಂದು ಪತಂಜಲಿ ಆಯುರ್ವೇದ ಸಹ-ಸಂಸ್ಥಾಪಕ ರಾಮದೇವ್ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಹೇಳಿಕೆ ನೀಡಿದ್ದಾರೆ. ಹಮ್ದರ್ದ್ ರೂಹ್ ಅಫ್ಜಾ

ರಾಮದೇವ್ ತಮ್ಮ ಭರವಸೆಯನ್ನು ದಾಖಲಿಸಲು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಗುರುವಾರ, ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಪೀಠಕ್ಕೆ ಹಮ್ದರ್ದ್ ಬಗ್ಗೆ ಕೋಮುವಾದಿ ಹೇಳಿಕೆ ನೀಡಿ ಮತ್ತೊಂದು ವೀಡಿಯೊವನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಲಾಗಿತ್ತು.

ಹಮ್ದರ್ದ್‌ ಕಂಪನಿಯನ್ನು ಗುರಿಯಾಗಿಸಿಕೊಂಡು ಹೊಸ ವೀಡಿಯೊವನ್ನು ಪ್ರಕಟಿಸಿದ್ದಕ್ಕಾಗಿ ನ್ಯಾಯಾಲಯವು ರಾಮದೇವ್‌ಗೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ದಿನದ ಹಿಂದೆಯಷ್ಟೆ ಎಚ್ಚರಿಕೆ ನೀಡಿತ್ತು. ಅದಾಗಿ ಒಂದು ದಿನದ ನಂತರ ಕೋರ್ಟ್‌ನಲ್ಲಿ ರಾಮ್‌ದೇವ್ ಮೇಲಿನ ಹೇಳಿಕೆ ನೀಡಿದ್ದಾರೆ.

ಹಮ್ದರ್ದ್‌ನ ಪಾನೀಯ ‘ರೂಹ್ ಅಫ್ಜಾ’ವನ್ನು “ಶರಬತ್ ಜಿಹಾದ್” ಅನ್ನು ಸಂಘಟಿಸಲು ಬಳಸಲಾಗುತ್ತಿದೆ ಎಂದು ರಾಮದೇವ್ ಹೇಳಿಕೊಂಡ ಜಾಹೀರಾತುಗಳನ್ನು ತೆಗೆದುಹಾಕುವಂತೆ ಹೈಕೋರ್ಟ್ ಏಪ್ರಿಲ್ 22 ರಂದು ಆದೇಶಿಸಿತ್ತು.

ಗುರುವಾರದಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಪೀಠಕ್ಕೆ ಹಮ್ದರ್ದ್ ಬಗ್ಗೆ ಕೋಮುವಾದಿ ಹೇಳಿಕೆ ನೀಡಿ ಮತ್ತೊಂದು ವೀಡಿಯೊವನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಲಾಯಿತು. ಈ ವೇಳೆ ನ್ಯಾಯಾಲಯವು ರಾಮದೇವ್‌ಗೆ ನ್ಯಾಯಾಂಗ ನಿಂದನೆಯ ನೋಟಿಸ್ ಜಾರಿ ಮಾಡಿ ಅವರನ್ನು ಸಮನ್ಸ್ ಮಾಡುವುದಾಗಿ ಪೀಠ ಹೇಳಿದೆ.

“ರಾಮ್‌ ದೇವ್‌ ತನ್ನದೇ ಆದ ಜಗತ್ತಿನಲ್ಲಿ ಇದ್ದು, ಅವರು ಯಾರ ಮಾತನ್ನೂ ಕೇಳುತ್ತಿಲ್ಲ” ಎಂದು ನ್ಯಾಯಮೂರ್ತಿ ಬನ್ಸಾಲ್ ಕಿಡಿಕಾರಿದ್ದಾರೆ ಎಂದು ಲೈವ್ ಲಾ ಉಲ್ಲೇಖಿಸಿದೆ. ಹೊಸ ವೀಡಿಯೊದ ಆಕ್ಷೇಪಾರ್ಹ ಭಾಗಗಳನ್ನು 24 ಗಂಟೆಗಳ ಒಳಗೆ ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕಲು ರಾಮದೇವ್ ಅವರ ವಕೀಲರು ಒಪ್ಪಿಕೊಂಡಿದ್ದರು.

ಏಪ್ರಿಲ್ 22 ರಂದು, ಹಮ್ದರ್ದ್ ಬಗ್ಗೆ ರಾಮದೇವ್ ಅವರ ಹೇಳಿಕೆ “ಸಮರ್ಥನೀಯವಲ್ಲ” ಎಂದು ಹೈಕೋರ್ಟ್ ಹೇಳಿತ್ತು.

ಏಪ್ರಿಲ್ 3 ರಂದು ಪತಂಜಲಿ ಉತ್ಪನ್ನದ ಜಾಹೀರಾತು ನೀಡುತ್ತಿದ್ದಾಗ, ರಾಮದೇವ್, ಹಮ್ದರ್ದ್ ಅವರ ಹೆಸರನ್ನು ಉಲ್ಲೇಖಿಸದೆ, ಕಂಪನಿಯು ಪಾನೀಯ ಮಾರಾಟದಿಂದ ಬಂದ ಹಣವನ್ನು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ಹೇಳಿಕೊಂಡಿದ್ದರು. ಅವರು ಇದನ್ನು “ಶರ್ಬತ್ ಜಿಹಾದ್” ಎಂದು ಬಣ್ಣಿಸಿದ್ದರು.

ಹಮ್ದರ್ದ್ ವೀಡಿಯೊವನ್ನು ತೆಗೆದುಹಾಕುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆ ಸಮಯದಲ್ಲಿ ರಾಮದೇವ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾನು ಯಾವುದೇ ಕಂಪನಿಯ ಹೆಸರನ್ನು ಹೆಸರಿಸಿಲ್ಲ ಎಂದು ಹೇಳಿದ್ದರು. ನ್ಯಾಯಾಲಯವು ಮೇ 9 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ. ಹಮ್ದರ್ದ್ ರೂಹ್ ಅಫ್ಜಾ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...