Homeಮುಖಪುಟಹಮ್ದರ್ದ್ ರೂಹ್ ಅಫ್ಜಾ ಗುರಿಯಾಗಿಸಿ ಹೇಳಿಕೆ ನೀಡಲ್ಲ: ದೆಹಲಿ ಹೈಕೋರ್ಟ್‌ಗೆ ರಾಮದೇವ್ ಭರವಸೆ

ಹಮ್ದರ್ದ್ ರೂಹ್ ಅಫ್ಜಾ ಗುರಿಯಾಗಿಸಿ ಹೇಳಿಕೆ ನೀಡಲ್ಲ: ದೆಹಲಿ ಹೈಕೋರ್ಟ್‌ಗೆ ರಾಮದೇವ್ ಭರವಸೆ

- Advertisement -
- Advertisement -

ಆಹಾರ ಕಂಪನಿ ಹಮ್ದರ್ದ್‌ನ ಪಾನೀಯ ‘ರೂಹ್ ಅಫ್ಜಾ’ವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವುದಿಲ್ಲ ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಪ್ರಕಟಿಸುವುದಿಲ್ಲ ಎಂದು ಪತಂಜಲಿ ಆಯುರ್ವೇದ ಸಹ-ಸಂಸ್ಥಾಪಕ ರಾಮದೇವ್ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಹೇಳಿಕೆ ನೀಡಿದ್ದಾರೆ. ಹಮ್ದರ್ದ್ ರೂಹ್ ಅಫ್ಜಾ

ರಾಮದೇವ್ ತಮ್ಮ ಭರವಸೆಯನ್ನು ದಾಖಲಿಸಲು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಗುರುವಾರ, ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಪೀಠಕ್ಕೆ ಹಮ್ದರ್ದ್ ಬಗ್ಗೆ ಕೋಮುವಾದಿ ಹೇಳಿಕೆ ನೀಡಿ ಮತ್ತೊಂದು ವೀಡಿಯೊವನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಲಾಗಿತ್ತು.

ಹಮ್ದರ್ದ್‌ ಕಂಪನಿಯನ್ನು ಗುರಿಯಾಗಿಸಿಕೊಂಡು ಹೊಸ ವೀಡಿಯೊವನ್ನು ಪ್ರಕಟಿಸಿದ್ದಕ್ಕಾಗಿ ನ್ಯಾಯಾಲಯವು ರಾಮದೇವ್‌ಗೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ದಿನದ ಹಿಂದೆಯಷ್ಟೆ ಎಚ್ಚರಿಕೆ ನೀಡಿತ್ತು. ಅದಾಗಿ ಒಂದು ದಿನದ ನಂತರ ಕೋರ್ಟ್‌ನಲ್ಲಿ ರಾಮ್‌ದೇವ್ ಮೇಲಿನ ಹೇಳಿಕೆ ನೀಡಿದ್ದಾರೆ.

ಹಮ್ದರ್ದ್‌ನ ಪಾನೀಯ ‘ರೂಹ್ ಅಫ್ಜಾ’ವನ್ನು “ಶರಬತ್ ಜಿಹಾದ್” ಅನ್ನು ಸಂಘಟಿಸಲು ಬಳಸಲಾಗುತ್ತಿದೆ ಎಂದು ರಾಮದೇವ್ ಹೇಳಿಕೊಂಡ ಜಾಹೀರಾತುಗಳನ್ನು ತೆಗೆದುಹಾಕುವಂತೆ ಹೈಕೋರ್ಟ್ ಏಪ್ರಿಲ್ 22 ರಂದು ಆದೇಶಿಸಿತ್ತು.

ಗುರುವಾರದಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಪೀಠಕ್ಕೆ ಹಮ್ದರ್ದ್ ಬಗ್ಗೆ ಕೋಮುವಾದಿ ಹೇಳಿಕೆ ನೀಡಿ ಮತ್ತೊಂದು ವೀಡಿಯೊವನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಲಾಯಿತು. ಈ ವೇಳೆ ನ್ಯಾಯಾಲಯವು ರಾಮದೇವ್‌ಗೆ ನ್ಯಾಯಾಂಗ ನಿಂದನೆಯ ನೋಟಿಸ್ ಜಾರಿ ಮಾಡಿ ಅವರನ್ನು ಸಮನ್ಸ್ ಮಾಡುವುದಾಗಿ ಪೀಠ ಹೇಳಿದೆ.

“ರಾಮ್‌ ದೇವ್‌ ತನ್ನದೇ ಆದ ಜಗತ್ತಿನಲ್ಲಿ ಇದ್ದು, ಅವರು ಯಾರ ಮಾತನ್ನೂ ಕೇಳುತ್ತಿಲ್ಲ” ಎಂದು ನ್ಯಾಯಮೂರ್ತಿ ಬನ್ಸಾಲ್ ಕಿಡಿಕಾರಿದ್ದಾರೆ ಎಂದು ಲೈವ್ ಲಾ ಉಲ್ಲೇಖಿಸಿದೆ. ಹೊಸ ವೀಡಿಯೊದ ಆಕ್ಷೇಪಾರ್ಹ ಭಾಗಗಳನ್ನು 24 ಗಂಟೆಗಳ ಒಳಗೆ ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕಲು ರಾಮದೇವ್ ಅವರ ವಕೀಲರು ಒಪ್ಪಿಕೊಂಡಿದ್ದರು.

ಏಪ್ರಿಲ್ 22 ರಂದು, ಹಮ್ದರ್ದ್ ಬಗ್ಗೆ ರಾಮದೇವ್ ಅವರ ಹೇಳಿಕೆ “ಸಮರ್ಥನೀಯವಲ್ಲ” ಎಂದು ಹೈಕೋರ್ಟ್ ಹೇಳಿತ್ತು.

ಏಪ್ರಿಲ್ 3 ರಂದು ಪತಂಜಲಿ ಉತ್ಪನ್ನದ ಜಾಹೀರಾತು ನೀಡುತ್ತಿದ್ದಾಗ, ರಾಮದೇವ್, ಹಮ್ದರ್ದ್ ಅವರ ಹೆಸರನ್ನು ಉಲ್ಲೇಖಿಸದೆ, ಕಂಪನಿಯು ಪಾನೀಯ ಮಾರಾಟದಿಂದ ಬಂದ ಹಣವನ್ನು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ಹೇಳಿಕೊಂಡಿದ್ದರು. ಅವರು ಇದನ್ನು “ಶರ್ಬತ್ ಜಿಹಾದ್” ಎಂದು ಬಣ್ಣಿಸಿದ್ದರು.

ಹಮ್ದರ್ದ್ ವೀಡಿಯೊವನ್ನು ತೆಗೆದುಹಾಕುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆ ಸಮಯದಲ್ಲಿ ರಾಮದೇವ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾನು ಯಾವುದೇ ಕಂಪನಿಯ ಹೆಸರನ್ನು ಹೆಸರಿಸಿಲ್ಲ ಎಂದು ಹೇಳಿದ್ದರು. ನ್ಯಾಯಾಲಯವು ಮೇ 9 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ. ಹಮ್ದರ್ದ್ ರೂಹ್ ಅಫ್ಜಾ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...