Homeಚಳವಳಿಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ...

ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ…

ಮಂಗಳವಾರ ತಮ್ಮ 74ನೆ ವರ್ಷದಲ್ಲಿ ನಿಧನರಾದ ಹಮೀದಾ ಬೀ ಖುದ್ದು ಅನಿಲ ದುರಂತದ ಸಂತ್ರಸ್ತೆಯಾಗಿದ್ದು, 30 ವರ್ಷಗಳ ಕಾಲ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೋರಾಡಿದವರು.

- Advertisement -
- Advertisement -

ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನ್ (ಬಿಜಿಪಿಎಂಯುಎಸ್) ಸಂಘಟನೆಯ ಅಧ್ಯಕ್ಷೆ ಮತ್ತು ದಣಿವರಿಯದ ಆಕ್ಟಿವಿಸ್ಟ್ ಆಗಿದ್ದ ಹಮೀದಾ ಬೀ ಡಿಸೆಂಬರ್ 29 ರಂದು ನಿಧನರಾಗಿದ್ದಾರೆ.
‘ಆಕೆಯ ಸಾವಿಗೆ ಕಾರಣ ಮುದಿ ವಯಸ್ಸಲ್ಲ; ಯುನಿಯನ್ ಕಾರ್ಬೈಡ್ ಪ್ಲ್ಯಾಂಟ್’ ಎನ್ನುತ್ತಾರೆ ಹಮೀದಾ ಬೀ ಅವರ ಬಹುಕಾಲದ ಗೆಳತಿ ಮತ್ತು ಬಿಜಿಪಿಎಂಯುಎಸ್ ಸದಸ್ಯೆ ರಯಿಸಾ ಬೀ.

ಸ್ವತಃ ಆ ದುರಂತದ ಸಂತ್ರಸ್ತೆಯಾಗಿದ್ದ ಹಮೀದಾ, ಮನುಷ್ಯ ನಿರ್ಮಿತ ಆ ದುರಂತದಿಂದ ಸಂತ್ರಸ್ತರಾದವರನ್ನು ಒಗ್ಗೂಡಿಸಿ ಭೋಪಾಲದ ಬೀದಿ-ರಸ್ತೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತ, ಸಂತ್ರಸ್ತರ ಹಕ್ಕುಗಳಿಗಾಗಿ ಹೋರಾಡಿದರು. ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಹಾರ ಲಭಿಸಬೇಕೆಂಬ ಬೇಡಿಕೆಗಳನ್ನು ಮುನ್ನೆಲೆಗೆ ತಂದಿದ್ದರು. ಇಂತಹ ಹೋರಾಟದ ಪರಿಣಾಮವಾಗಿ ಅಷ್ಟಿಷ್ಟಾದರೂ ನ್ಯಾಯ ದೊರಕಿದೆ. ಆದರೆ ಈ ಹೋರಾಟ ಮುಂದುವರೆದೇ ಇದೆ.

‘ಸಮಾಜದ ಅಶಕ್ತ ವಿಭಾಗಗಳಿಗೆ ಸೇರಿದ ಅನಿಲ ದುರಂತದ ಸಂತ್ರಸ್ತರಿಗೇಕೆ ಒಂದು ಸರಿಯಾದ ಬದುಕು ಇರಬಾರದು?’ -ಸಾಯುವ ತಿಂಗಳು ಮೊದಲು ಅವರ ಮಗಳ ಮನೆಯಲ್ಲಿ ಕಟ್ಟಿಗೆ ಮಂಚದಲ್ಲಿ ಮಲಗಿದ್ದ ಅವರು ಈ ಬರಹಗಾರರನ್ನು ಕೇಳಿದ್ದರು.

ಭೋಪಾಲ್‌ನಲ್ಲಿ ಜನಿಸಿದ ಹಮೀದಾ ಬೀ ಅವರ ಪ್ರತಿಭಟನೆ ಹೋರಾಟ ಸುದೀರ್ಘವಾದದ್ದು ಮತ್ತು ಸ್ಥಿರವಾದದ್ದು. ದುರಂತದಲ್ಲಿ ಅವರ ಸಂಬಂಧಿಗಳನೇಕರು ಅಸು ನೀಗಿದ್ದಾರೆ.

ಜನವರಿ 23, 1986ರಿಂದ ಪ್ರತಿ ಶನಿವಾರ (ಲಾಕ್‌ಡೌನ್ ಶುರುವಾಗುವವರೆಗೂ) ಬಿಜಿಪಿಎಂಯುಎಸ್ ಸಭೆಗಳಿಗೆ ಹಾಜರಾಗಲು ಇಬ್ರಾಹಿಂಪುರದ ತಮ್ಮ ಮನೆಯಿಂದ ಸೆಂಟ್ರಲ್ ಲೈಬ್ರರಿ ಸಮೀಪದ ಪಾರ್ಕಿಗೆ ಅವರು ನಡೆದೇ ಹೋಗುತ್ತಿದ್ದರು. ಅಲ್ಲಿ ಸಂತ್ರಸ್ತರ ಸಮಸ್ಯೆಗಳಿಗೆ ದನಿಯಾಗುತ್ತಿದ್ದ ಅವರು, ಹಕ್ಕು ಪಡೆಯಲು ಮುಂದೆ ಮಾಡಬೇಕಾದ ಹೋರಾಟದ ಬಗ್ಗೆ ಅವರನ್ನು ಸಂಘಟಿಸುತ್ತಿದ್ದರು.

ವಾರದ ಉಳಿದ ದಿನಗಳಂದು ಬಿಜಿಪಿಎಂಯುಎಸ್‌ನ ಸ್ವಾಭಿಮಾನ ಕೇಂದ್ರದಲ್ಲಿ ಸಂತ್ರಸ್ತ ಮಹಿಳೆಯರಿಗೆ ಹೊಲಿಗೆ, ಹೆಣಿಕೆ ತರಹದ ಜೀವನೋಪಾಯದ ಕೌಶಲ್ಯಗಳನ್ನು ಕಲಿಸುತ್ತಿದ್ದರು.

ಹೋರಾಟದ ಮೂಲಕ ಮತ್ತು ನ್ಯಾಯಾಲಯದ ಮೂಲಕ ಸಂತ್ರಸ್ತರಿಗೆ ಎಷ್ಟು ಸಾಧ್ಯವೋ ಅಷ್ಟು ನೆರವು-ಪರಿಹಾರ, ಚಿಕಿತ್ಸೆ ಸಿಗುವಂತೆ ಹಮೀದಾ ಶ್ರಮಿಸಿದರು. ಬಿಜಿಪಿಎಂಯುಎಸ್ ಸಂಘಟನೆಯ ಸಂಚಾಲಕರಾಗಿ ಸಂತ್ರಸ್ತರ ಹೋರಾಟಕ್ಕೆ ಒಂದು ದೃಢ ಸಂಕಲ್ಪ ರೂಪಿಸಿದ್ದ ಅಬ್ದುಲ್ ಜಬ್ಬಾರ್ ನಿಧನದ ನಂತರ ಹಮೀದಾರನ್ನು ಅಧ್ಯಕ್ಷೆಯನ್ನಾಗಿ ಸಂತ್ರಸ್ತರು ನೇಮಿಸಿಕೊಂಡಿದ್ದರು.

ಅವರ ಪತಿ ಇದ್ರಿಸ್ ಭಾಯ್ ಕೂಡ ಈ ಹೋರಾಟಕ್ಕೆ ಜೀವನ ಮೀಸಲಿಟ್ಟು ನಿಧನರಾದರು. ಹೋರಾಟಗಾರ್ತಿಯಾಗುವ ಮೊದಲು ಸಾಮಾನ್ಯ ಗೃಹಿಣಿಯಾಗಿದ್ದ ಅವರು ಸಂಪ್ರದಾಯಸ್ಥ ವ್ಯವಸ್ಥೆಯ ನಿರ್ಬಂಧಗಳಲ್ಲೇ ಬದುಕಿದ್ದರು. ಆದರೆ ಆ ಮನುಷ್ಯ ನಿರ್ಮಿತ ದುರಂತ ಉಂಟು ಮಾಡಿದ ಆಘಾತ, ನೋವು ಅವರನ್ನು ಸಂತ್ರಸ್ತರ ದನಿಯಾಗುವಂತೆ ಪ್ರೇರೆಪಿಸಿತು.

-ಅನೂಪ್ ದತ್ತಾ

(ಬರಹ ಕೃಪೆ: ದಿ ವೈರ್)


ಇದನ್ನೂ ಓದಿ; ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...