Homeಚಳವಳಿಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ...

ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ…

ಮಂಗಳವಾರ ತಮ್ಮ 74ನೆ ವರ್ಷದಲ್ಲಿ ನಿಧನರಾದ ಹಮೀದಾ ಬೀ ಖುದ್ದು ಅನಿಲ ದುರಂತದ ಸಂತ್ರಸ್ತೆಯಾಗಿದ್ದು, 30 ವರ್ಷಗಳ ಕಾಲ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೋರಾಡಿದವರು.

- Advertisement -
- Advertisement -

ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನ್ (ಬಿಜಿಪಿಎಂಯುಎಸ್) ಸಂಘಟನೆಯ ಅಧ್ಯಕ್ಷೆ ಮತ್ತು ದಣಿವರಿಯದ ಆಕ್ಟಿವಿಸ್ಟ್ ಆಗಿದ್ದ ಹಮೀದಾ ಬೀ ಡಿಸೆಂಬರ್ 29 ರಂದು ನಿಧನರಾಗಿದ್ದಾರೆ.
‘ಆಕೆಯ ಸಾವಿಗೆ ಕಾರಣ ಮುದಿ ವಯಸ್ಸಲ್ಲ; ಯುನಿಯನ್ ಕಾರ್ಬೈಡ್ ಪ್ಲ್ಯಾಂಟ್’ ಎನ್ನುತ್ತಾರೆ ಹಮೀದಾ ಬೀ ಅವರ ಬಹುಕಾಲದ ಗೆಳತಿ ಮತ್ತು ಬಿಜಿಪಿಎಂಯುಎಸ್ ಸದಸ್ಯೆ ರಯಿಸಾ ಬೀ.

ಸ್ವತಃ ಆ ದುರಂತದ ಸಂತ್ರಸ್ತೆಯಾಗಿದ್ದ ಹಮೀದಾ, ಮನುಷ್ಯ ನಿರ್ಮಿತ ಆ ದುರಂತದಿಂದ ಸಂತ್ರಸ್ತರಾದವರನ್ನು ಒಗ್ಗೂಡಿಸಿ ಭೋಪಾಲದ ಬೀದಿ-ರಸ್ತೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತ, ಸಂತ್ರಸ್ತರ ಹಕ್ಕುಗಳಿಗಾಗಿ ಹೋರಾಡಿದರು. ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಹಾರ ಲಭಿಸಬೇಕೆಂಬ ಬೇಡಿಕೆಗಳನ್ನು ಮುನ್ನೆಲೆಗೆ ತಂದಿದ್ದರು. ಇಂತಹ ಹೋರಾಟದ ಪರಿಣಾಮವಾಗಿ ಅಷ್ಟಿಷ್ಟಾದರೂ ನ್ಯಾಯ ದೊರಕಿದೆ. ಆದರೆ ಈ ಹೋರಾಟ ಮುಂದುವರೆದೇ ಇದೆ.

‘ಸಮಾಜದ ಅಶಕ್ತ ವಿಭಾಗಗಳಿಗೆ ಸೇರಿದ ಅನಿಲ ದುರಂತದ ಸಂತ್ರಸ್ತರಿಗೇಕೆ ಒಂದು ಸರಿಯಾದ ಬದುಕು ಇರಬಾರದು?’ -ಸಾಯುವ ತಿಂಗಳು ಮೊದಲು ಅವರ ಮಗಳ ಮನೆಯಲ್ಲಿ ಕಟ್ಟಿಗೆ ಮಂಚದಲ್ಲಿ ಮಲಗಿದ್ದ ಅವರು ಈ ಬರಹಗಾರರನ್ನು ಕೇಳಿದ್ದರು.

ಭೋಪಾಲ್‌ನಲ್ಲಿ ಜನಿಸಿದ ಹಮೀದಾ ಬೀ ಅವರ ಪ್ರತಿಭಟನೆ ಹೋರಾಟ ಸುದೀರ್ಘವಾದದ್ದು ಮತ್ತು ಸ್ಥಿರವಾದದ್ದು. ದುರಂತದಲ್ಲಿ ಅವರ ಸಂಬಂಧಿಗಳನೇಕರು ಅಸು ನೀಗಿದ್ದಾರೆ.

ಜನವರಿ 23, 1986ರಿಂದ ಪ್ರತಿ ಶನಿವಾರ (ಲಾಕ್‌ಡೌನ್ ಶುರುವಾಗುವವರೆಗೂ) ಬಿಜಿಪಿಎಂಯುಎಸ್ ಸಭೆಗಳಿಗೆ ಹಾಜರಾಗಲು ಇಬ್ರಾಹಿಂಪುರದ ತಮ್ಮ ಮನೆಯಿಂದ ಸೆಂಟ್ರಲ್ ಲೈಬ್ರರಿ ಸಮೀಪದ ಪಾರ್ಕಿಗೆ ಅವರು ನಡೆದೇ ಹೋಗುತ್ತಿದ್ದರು. ಅಲ್ಲಿ ಸಂತ್ರಸ್ತರ ಸಮಸ್ಯೆಗಳಿಗೆ ದನಿಯಾಗುತ್ತಿದ್ದ ಅವರು, ಹಕ್ಕು ಪಡೆಯಲು ಮುಂದೆ ಮಾಡಬೇಕಾದ ಹೋರಾಟದ ಬಗ್ಗೆ ಅವರನ್ನು ಸಂಘಟಿಸುತ್ತಿದ್ದರು.

ವಾರದ ಉಳಿದ ದಿನಗಳಂದು ಬಿಜಿಪಿಎಂಯುಎಸ್‌ನ ಸ್ವಾಭಿಮಾನ ಕೇಂದ್ರದಲ್ಲಿ ಸಂತ್ರಸ್ತ ಮಹಿಳೆಯರಿಗೆ ಹೊಲಿಗೆ, ಹೆಣಿಕೆ ತರಹದ ಜೀವನೋಪಾಯದ ಕೌಶಲ್ಯಗಳನ್ನು ಕಲಿಸುತ್ತಿದ್ದರು.

ಹೋರಾಟದ ಮೂಲಕ ಮತ್ತು ನ್ಯಾಯಾಲಯದ ಮೂಲಕ ಸಂತ್ರಸ್ತರಿಗೆ ಎಷ್ಟು ಸಾಧ್ಯವೋ ಅಷ್ಟು ನೆರವು-ಪರಿಹಾರ, ಚಿಕಿತ್ಸೆ ಸಿಗುವಂತೆ ಹಮೀದಾ ಶ್ರಮಿಸಿದರು. ಬಿಜಿಪಿಎಂಯುಎಸ್ ಸಂಘಟನೆಯ ಸಂಚಾಲಕರಾಗಿ ಸಂತ್ರಸ್ತರ ಹೋರಾಟಕ್ಕೆ ಒಂದು ದೃಢ ಸಂಕಲ್ಪ ರೂಪಿಸಿದ್ದ ಅಬ್ದುಲ್ ಜಬ್ಬಾರ್ ನಿಧನದ ನಂತರ ಹಮೀದಾರನ್ನು ಅಧ್ಯಕ್ಷೆಯನ್ನಾಗಿ ಸಂತ್ರಸ್ತರು ನೇಮಿಸಿಕೊಂಡಿದ್ದರು.

ಅವರ ಪತಿ ಇದ್ರಿಸ್ ಭಾಯ್ ಕೂಡ ಈ ಹೋರಾಟಕ್ಕೆ ಜೀವನ ಮೀಸಲಿಟ್ಟು ನಿಧನರಾದರು. ಹೋರಾಟಗಾರ್ತಿಯಾಗುವ ಮೊದಲು ಸಾಮಾನ್ಯ ಗೃಹಿಣಿಯಾಗಿದ್ದ ಅವರು ಸಂಪ್ರದಾಯಸ್ಥ ವ್ಯವಸ್ಥೆಯ ನಿರ್ಬಂಧಗಳಲ್ಲೇ ಬದುಕಿದ್ದರು. ಆದರೆ ಆ ಮನುಷ್ಯ ನಿರ್ಮಿತ ದುರಂತ ಉಂಟು ಮಾಡಿದ ಆಘಾತ, ನೋವು ಅವರನ್ನು ಸಂತ್ರಸ್ತರ ದನಿಯಾಗುವಂತೆ ಪ್ರೇರೆಪಿಸಿತು.

-ಅನೂಪ್ ದತ್ತಾ

(ಬರಹ ಕೃಪೆ: ದಿ ವೈರ್)


ಇದನ್ನೂ ಓದಿ; ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....