Homeಚಳವಳಿಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ...

ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ…

ಮಂಗಳವಾರ ತಮ್ಮ 74ನೆ ವರ್ಷದಲ್ಲಿ ನಿಧನರಾದ ಹಮೀದಾ ಬೀ ಖುದ್ದು ಅನಿಲ ದುರಂತದ ಸಂತ್ರಸ್ತೆಯಾಗಿದ್ದು, 30 ವರ್ಷಗಳ ಕಾಲ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೋರಾಡಿದವರು.

- Advertisement -
- Advertisement -

ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನ್ (ಬಿಜಿಪಿಎಂಯುಎಸ್) ಸಂಘಟನೆಯ ಅಧ್ಯಕ್ಷೆ ಮತ್ತು ದಣಿವರಿಯದ ಆಕ್ಟಿವಿಸ್ಟ್ ಆಗಿದ್ದ ಹಮೀದಾ ಬೀ ಡಿಸೆಂಬರ್ 29 ರಂದು ನಿಧನರಾಗಿದ್ದಾರೆ.
‘ಆಕೆಯ ಸಾವಿಗೆ ಕಾರಣ ಮುದಿ ವಯಸ್ಸಲ್ಲ; ಯುನಿಯನ್ ಕಾರ್ಬೈಡ್ ಪ್ಲ್ಯಾಂಟ್’ ಎನ್ನುತ್ತಾರೆ ಹಮೀದಾ ಬೀ ಅವರ ಬಹುಕಾಲದ ಗೆಳತಿ ಮತ್ತು ಬಿಜಿಪಿಎಂಯುಎಸ್ ಸದಸ್ಯೆ ರಯಿಸಾ ಬೀ.

ಸ್ವತಃ ಆ ದುರಂತದ ಸಂತ್ರಸ್ತೆಯಾಗಿದ್ದ ಹಮೀದಾ, ಮನುಷ್ಯ ನಿರ್ಮಿತ ಆ ದುರಂತದಿಂದ ಸಂತ್ರಸ್ತರಾದವರನ್ನು ಒಗ್ಗೂಡಿಸಿ ಭೋಪಾಲದ ಬೀದಿ-ರಸ್ತೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತ, ಸಂತ್ರಸ್ತರ ಹಕ್ಕುಗಳಿಗಾಗಿ ಹೋರಾಡಿದರು. ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಹಾರ ಲಭಿಸಬೇಕೆಂಬ ಬೇಡಿಕೆಗಳನ್ನು ಮುನ್ನೆಲೆಗೆ ತಂದಿದ್ದರು. ಇಂತಹ ಹೋರಾಟದ ಪರಿಣಾಮವಾಗಿ ಅಷ್ಟಿಷ್ಟಾದರೂ ನ್ಯಾಯ ದೊರಕಿದೆ. ಆದರೆ ಈ ಹೋರಾಟ ಮುಂದುವರೆದೇ ಇದೆ.

‘ಸಮಾಜದ ಅಶಕ್ತ ವಿಭಾಗಗಳಿಗೆ ಸೇರಿದ ಅನಿಲ ದುರಂತದ ಸಂತ್ರಸ್ತರಿಗೇಕೆ ಒಂದು ಸರಿಯಾದ ಬದುಕು ಇರಬಾರದು?’ -ಸಾಯುವ ತಿಂಗಳು ಮೊದಲು ಅವರ ಮಗಳ ಮನೆಯಲ್ಲಿ ಕಟ್ಟಿಗೆ ಮಂಚದಲ್ಲಿ ಮಲಗಿದ್ದ ಅವರು ಈ ಬರಹಗಾರರನ್ನು ಕೇಳಿದ್ದರು.

ಭೋಪಾಲ್‌ನಲ್ಲಿ ಜನಿಸಿದ ಹಮೀದಾ ಬೀ ಅವರ ಪ್ರತಿಭಟನೆ ಹೋರಾಟ ಸುದೀರ್ಘವಾದದ್ದು ಮತ್ತು ಸ್ಥಿರವಾದದ್ದು. ದುರಂತದಲ್ಲಿ ಅವರ ಸಂಬಂಧಿಗಳನೇಕರು ಅಸು ನೀಗಿದ್ದಾರೆ.

ಜನವರಿ 23, 1986ರಿಂದ ಪ್ರತಿ ಶನಿವಾರ (ಲಾಕ್‌ಡೌನ್ ಶುರುವಾಗುವವರೆಗೂ) ಬಿಜಿಪಿಎಂಯುಎಸ್ ಸಭೆಗಳಿಗೆ ಹಾಜರಾಗಲು ಇಬ್ರಾಹಿಂಪುರದ ತಮ್ಮ ಮನೆಯಿಂದ ಸೆಂಟ್ರಲ್ ಲೈಬ್ರರಿ ಸಮೀಪದ ಪಾರ್ಕಿಗೆ ಅವರು ನಡೆದೇ ಹೋಗುತ್ತಿದ್ದರು. ಅಲ್ಲಿ ಸಂತ್ರಸ್ತರ ಸಮಸ್ಯೆಗಳಿಗೆ ದನಿಯಾಗುತ್ತಿದ್ದ ಅವರು, ಹಕ್ಕು ಪಡೆಯಲು ಮುಂದೆ ಮಾಡಬೇಕಾದ ಹೋರಾಟದ ಬಗ್ಗೆ ಅವರನ್ನು ಸಂಘಟಿಸುತ್ತಿದ್ದರು.

ವಾರದ ಉಳಿದ ದಿನಗಳಂದು ಬಿಜಿಪಿಎಂಯುಎಸ್‌ನ ಸ್ವಾಭಿಮಾನ ಕೇಂದ್ರದಲ್ಲಿ ಸಂತ್ರಸ್ತ ಮಹಿಳೆಯರಿಗೆ ಹೊಲಿಗೆ, ಹೆಣಿಕೆ ತರಹದ ಜೀವನೋಪಾಯದ ಕೌಶಲ್ಯಗಳನ್ನು ಕಲಿಸುತ್ತಿದ್ದರು.

ಹೋರಾಟದ ಮೂಲಕ ಮತ್ತು ನ್ಯಾಯಾಲಯದ ಮೂಲಕ ಸಂತ್ರಸ್ತರಿಗೆ ಎಷ್ಟು ಸಾಧ್ಯವೋ ಅಷ್ಟು ನೆರವು-ಪರಿಹಾರ, ಚಿಕಿತ್ಸೆ ಸಿಗುವಂತೆ ಹಮೀದಾ ಶ್ರಮಿಸಿದರು. ಬಿಜಿಪಿಎಂಯುಎಸ್ ಸಂಘಟನೆಯ ಸಂಚಾಲಕರಾಗಿ ಸಂತ್ರಸ್ತರ ಹೋರಾಟಕ್ಕೆ ಒಂದು ದೃಢ ಸಂಕಲ್ಪ ರೂಪಿಸಿದ್ದ ಅಬ್ದುಲ್ ಜಬ್ಬಾರ್ ನಿಧನದ ನಂತರ ಹಮೀದಾರನ್ನು ಅಧ್ಯಕ್ಷೆಯನ್ನಾಗಿ ಸಂತ್ರಸ್ತರು ನೇಮಿಸಿಕೊಂಡಿದ್ದರು.

ಅವರ ಪತಿ ಇದ್ರಿಸ್ ಭಾಯ್ ಕೂಡ ಈ ಹೋರಾಟಕ್ಕೆ ಜೀವನ ಮೀಸಲಿಟ್ಟು ನಿಧನರಾದರು. ಹೋರಾಟಗಾರ್ತಿಯಾಗುವ ಮೊದಲು ಸಾಮಾನ್ಯ ಗೃಹಿಣಿಯಾಗಿದ್ದ ಅವರು ಸಂಪ್ರದಾಯಸ್ಥ ವ್ಯವಸ್ಥೆಯ ನಿರ್ಬಂಧಗಳಲ್ಲೇ ಬದುಕಿದ್ದರು. ಆದರೆ ಆ ಮನುಷ್ಯ ನಿರ್ಮಿತ ದುರಂತ ಉಂಟು ಮಾಡಿದ ಆಘಾತ, ನೋವು ಅವರನ್ನು ಸಂತ್ರಸ್ತರ ದನಿಯಾಗುವಂತೆ ಪ್ರೇರೆಪಿಸಿತು.

-ಅನೂಪ್ ದತ್ತಾ

(ಬರಹ ಕೃಪೆ: ದಿ ವೈರ್)


ಇದನ್ನೂ ಓದಿ; ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....