Homeಚಳವಳಿಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ...

ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ…

ಮಂಗಳವಾರ ತಮ್ಮ 74ನೆ ವರ್ಷದಲ್ಲಿ ನಿಧನರಾದ ಹಮೀದಾ ಬೀ ಖುದ್ದು ಅನಿಲ ದುರಂತದ ಸಂತ್ರಸ್ತೆಯಾಗಿದ್ದು, 30 ವರ್ಷಗಳ ಕಾಲ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೋರಾಡಿದವರು.

- Advertisement -
- Advertisement -

ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನ್ (ಬಿಜಿಪಿಎಂಯುಎಸ್) ಸಂಘಟನೆಯ ಅಧ್ಯಕ್ಷೆ ಮತ್ತು ದಣಿವರಿಯದ ಆಕ್ಟಿವಿಸ್ಟ್ ಆಗಿದ್ದ ಹಮೀದಾ ಬೀ ಡಿಸೆಂಬರ್ 29 ರಂದು ನಿಧನರಾಗಿದ್ದಾರೆ.
‘ಆಕೆಯ ಸಾವಿಗೆ ಕಾರಣ ಮುದಿ ವಯಸ್ಸಲ್ಲ; ಯುನಿಯನ್ ಕಾರ್ಬೈಡ್ ಪ್ಲ್ಯಾಂಟ್’ ಎನ್ನುತ್ತಾರೆ ಹಮೀದಾ ಬೀ ಅವರ ಬಹುಕಾಲದ ಗೆಳತಿ ಮತ್ತು ಬಿಜಿಪಿಎಂಯುಎಸ್ ಸದಸ್ಯೆ ರಯಿಸಾ ಬೀ.

ಸ್ವತಃ ಆ ದುರಂತದ ಸಂತ್ರಸ್ತೆಯಾಗಿದ್ದ ಹಮೀದಾ, ಮನುಷ್ಯ ನಿರ್ಮಿತ ಆ ದುರಂತದಿಂದ ಸಂತ್ರಸ್ತರಾದವರನ್ನು ಒಗ್ಗೂಡಿಸಿ ಭೋಪಾಲದ ಬೀದಿ-ರಸ್ತೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತ, ಸಂತ್ರಸ್ತರ ಹಕ್ಕುಗಳಿಗಾಗಿ ಹೋರಾಡಿದರು. ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಹಾರ ಲಭಿಸಬೇಕೆಂಬ ಬೇಡಿಕೆಗಳನ್ನು ಮುನ್ನೆಲೆಗೆ ತಂದಿದ್ದರು. ಇಂತಹ ಹೋರಾಟದ ಪರಿಣಾಮವಾಗಿ ಅಷ್ಟಿಷ್ಟಾದರೂ ನ್ಯಾಯ ದೊರಕಿದೆ. ಆದರೆ ಈ ಹೋರಾಟ ಮುಂದುವರೆದೇ ಇದೆ.

‘ಸಮಾಜದ ಅಶಕ್ತ ವಿಭಾಗಗಳಿಗೆ ಸೇರಿದ ಅನಿಲ ದುರಂತದ ಸಂತ್ರಸ್ತರಿಗೇಕೆ ಒಂದು ಸರಿಯಾದ ಬದುಕು ಇರಬಾರದು?’ -ಸಾಯುವ ತಿಂಗಳು ಮೊದಲು ಅವರ ಮಗಳ ಮನೆಯಲ್ಲಿ ಕಟ್ಟಿಗೆ ಮಂಚದಲ್ಲಿ ಮಲಗಿದ್ದ ಅವರು ಈ ಬರಹಗಾರರನ್ನು ಕೇಳಿದ್ದರು.

ಭೋಪಾಲ್‌ನಲ್ಲಿ ಜನಿಸಿದ ಹಮೀದಾ ಬೀ ಅವರ ಪ್ರತಿಭಟನೆ ಹೋರಾಟ ಸುದೀರ್ಘವಾದದ್ದು ಮತ್ತು ಸ್ಥಿರವಾದದ್ದು. ದುರಂತದಲ್ಲಿ ಅವರ ಸಂಬಂಧಿಗಳನೇಕರು ಅಸು ನೀಗಿದ್ದಾರೆ.

ಜನವರಿ 23, 1986ರಿಂದ ಪ್ರತಿ ಶನಿವಾರ (ಲಾಕ್‌ಡೌನ್ ಶುರುವಾಗುವವರೆಗೂ) ಬಿಜಿಪಿಎಂಯುಎಸ್ ಸಭೆಗಳಿಗೆ ಹಾಜರಾಗಲು ಇಬ್ರಾಹಿಂಪುರದ ತಮ್ಮ ಮನೆಯಿಂದ ಸೆಂಟ್ರಲ್ ಲೈಬ್ರರಿ ಸಮೀಪದ ಪಾರ್ಕಿಗೆ ಅವರು ನಡೆದೇ ಹೋಗುತ್ತಿದ್ದರು. ಅಲ್ಲಿ ಸಂತ್ರಸ್ತರ ಸಮಸ್ಯೆಗಳಿಗೆ ದನಿಯಾಗುತ್ತಿದ್ದ ಅವರು, ಹಕ್ಕು ಪಡೆಯಲು ಮುಂದೆ ಮಾಡಬೇಕಾದ ಹೋರಾಟದ ಬಗ್ಗೆ ಅವರನ್ನು ಸಂಘಟಿಸುತ್ತಿದ್ದರು.

ವಾರದ ಉಳಿದ ದಿನಗಳಂದು ಬಿಜಿಪಿಎಂಯುಎಸ್‌ನ ಸ್ವಾಭಿಮಾನ ಕೇಂದ್ರದಲ್ಲಿ ಸಂತ್ರಸ್ತ ಮಹಿಳೆಯರಿಗೆ ಹೊಲಿಗೆ, ಹೆಣಿಕೆ ತರಹದ ಜೀವನೋಪಾಯದ ಕೌಶಲ್ಯಗಳನ್ನು ಕಲಿಸುತ್ತಿದ್ದರು.

ಹೋರಾಟದ ಮೂಲಕ ಮತ್ತು ನ್ಯಾಯಾಲಯದ ಮೂಲಕ ಸಂತ್ರಸ್ತರಿಗೆ ಎಷ್ಟು ಸಾಧ್ಯವೋ ಅಷ್ಟು ನೆರವು-ಪರಿಹಾರ, ಚಿಕಿತ್ಸೆ ಸಿಗುವಂತೆ ಹಮೀದಾ ಶ್ರಮಿಸಿದರು. ಬಿಜಿಪಿಎಂಯುಎಸ್ ಸಂಘಟನೆಯ ಸಂಚಾಲಕರಾಗಿ ಸಂತ್ರಸ್ತರ ಹೋರಾಟಕ್ಕೆ ಒಂದು ದೃಢ ಸಂಕಲ್ಪ ರೂಪಿಸಿದ್ದ ಅಬ್ದುಲ್ ಜಬ್ಬಾರ್ ನಿಧನದ ನಂತರ ಹಮೀದಾರನ್ನು ಅಧ್ಯಕ್ಷೆಯನ್ನಾಗಿ ಸಂತ್ರಸ್ತರು ನೇಮಿಸಿಕೊಂಡಿದ್ದರು.

ಅವರ ಪತಿ ಇದ್ರಿಸ್ ಭಾಯ್ ಕೂಡ ಈ ಹೋರಾಟಕ್ಕೆ ಜೀವನ ಮೀಸಲಿಟ್ಟು ನಿಧನರಾದರು. ಹೋರಾಟಗಾರ್ತಿಯಾಗುವ ಮೊದಲು ಸಾಮಾನ್ಯ ಗೃಹಿಣಿಯಾಗಿದ್ದ ಅವರು ಸಂಪ್ರದಾಯಸ್ಥ ವ್ಯವಸ್ಥೆಯ ನಿರ್ಬಂಧಗಳಲ್ಲೇ ಬದುಕಿದ್ದರು. ಆದರೆ ಆ ಮನುಷ್ಯ ನಿರ್ಮಿತ ದುರಂತ ಉಂಟು ಮಾಡಿದ ಆಘಾತ, ನೋವು ಅವರನ್ನು ಸಂತ್ರಸ್ತರ ದನಿಯಾಗುವಂತೆ ಪ್ರೇರೆಪಿಸಿತು.

-ಅನೂಪ್ ದತ್ತಾ

(ಬರಹ ಕೃಪೆ: ದಿ ವೈರ್)


ಇದನ್ನೂ ಓದಿ; ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...