Homeಚಳವಳಿಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ...

ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ…

ಮಂಗಳವಾರ ತಮ್ಮ 74ನೆ ವರ್ಷದಲ್ಲಿ ನಿಧನರಾದ ಹಮೀದಾ ಬೀ ಖುದ್ದು ಅನಿಲ ದುರಂತದ ಸಂತ್ರಸ್ತೆಯಾಗಿದ್ದು, 30 ವರ್ಷಗಳ ಕಾಲ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೋರಾಡಿದವರು.

- Advertisement -
- Advertisement -

ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನ್ (ಬಿಜಿಪಿಎಂಯುಎಸ್) ಸಂಘಟನೆಯ ಅಧ್ಯಕ್ಷೆ ಮತ್ತು ದಣಿವರಿಯದ ಆಕ್ಟಿವಿಸ್ಟ್ ಆಗಿದ್ದ ಹಮೀದಾ ಬೀ ಡಿಸೆಂಬರ್ 29 ರಂದು ನಿಧನರಾಗಿದ್ದಾರೆ.
‘ಆಕೆಯ ಸಾವಿಗೆ ಕಾರಣ ಮುದಿ ವಯಸ್ಸಲ್ಲ; ಯುನಿಯನ್ ಕಾರ್ಬೈಡ್ ಪ್ಲ್ಯಾಂಟ್’ ಎನ್ನುತ್ತಾರೆ ಹಮೀದಾ ಬೀ ಅವರ ಬಹುಕಾಲದ ಗೆಳತಿ ಮತ್ತು ಬಿಜಿಪಿಎಂಯುಎಸ್ ಸದಸ್ಯೆ ರಯಿಸಾ ಬೀ.

ಸ್ವತಃ ಆ ದುರಂತದ ಸಂತ್ರಸ್ತೆಯಾಗಿದ್ದ ಹಮೀದಾ, ಮನುಷ್ಯ ನಿರ್ಮಿತ ಆ ದುರಂತದಿಂದ ಸಂತ್ರಸ್ತರಾದವರನ್ನು ಒಗ್ಗೂಡಿಸಿ ಭೋಪಾಲದ ಬೀದಿ-ರಸ್ತೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತ, ಸಂತ್ರಸ್ತರ ಹಕ್ಕುಗಳಿಗಾಗಿ ಹೋರಾಡಿದರು. ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಹಾರ ಲಭಿಸಬೇಕೆಂಬ ಬೇಡಿಕೆಗಳನ್ನು ಮುನ್ನೆಲೆಗೆ ತಂದಿದ್ದರು. ಇಂತಹ ಹೋರಾಟದ ಪರಿಣಾಮವಾಗಿ ಅಷ್ಟಿಷ್ಟಾದರೂ ನ್ಯಾಯ ದೊರಕಿದೆ. ಆದರೆ ಈ ಹೋರಾಟ ಮುಂದುವರೆದೇ ಇದೆ.

‘ಸಮಾಜದ ಅಶಕ್ತ ವಿಭಾಗಗಳಿಗೆ ಸೇರಿದ ಅನಿಲ ದುರಂತದ ಸಂತ್ರಸ್ತರಿಗೇಕೆ ಒಂದು ಸರಿಯಾದ ಬದುಕು ಇರಬಾರದು?’ -ಸಾಯುವ ತಿಂಗಳು ಮೊದಲು ಅವರ ಮಗಳ ಮನೆಯಲ್ಲಿ ಕಟ್ಟಿಗೆ ಮಂಚದಲ್ಲಿ ಮಲಗಿದ್ದ ಅವರು ಈ ಬರಹಗಾರರನ್ನು ಕೇಳಿದ್ದರು.

ಭೋಪಾಲ್‌ನಲ್ಲಿ ಜನಿಸಿದ ಹಮೀದಾ ಬೀ ಅವರ ಪ್ರತಿಭಟನೆ ಹೋರಾಟ ಸುದೀರ್ಘವಾದದ್ದು ಮತ್ತು ಸ್ಥಿರವಾದದ್ದು. ದುರಂತದಲ್ಲಿ ಅವರ ಸಂಬಂಧಿಗಳನೇಕರು ಅಸು ನೀಗಿದ್ದಾರೆ.

ಜನವರಿ 23, 1986ರಿಂದ ಪ್ರತಿ ಶನಿವಾರ (ಲಾಕ್‌ಡೌನ್ ಶುರುವಾಗುವವರೆಗೂ) ಬಿಜಿಪಿಎಂಯುಎಸ್ ಸಭೆಗಳಿಗೆ ಹಾಜರಾಗಲು ಇಬ್ರಾಹಿಂಪುರದ ತಮ್ಮ ಮನೆಯಿಂದ ಸೆಂಟ್ರಲ್ ಲೈಬ್ರರಿ ಸಮೀಪದ ಪಾರ್ಕಿಗೆ ಅವರು ನಡೆದೇ ಹೋಗುತ್ತಿದ್ದರು. ಅಲ್ಲಿ ಸಂತ್ರಸ್ತರ ಸಮಸ್ಯೆಗಳಿಗೆ ದನಿಯಾಗುತ್ತಿದ್ದ ಅವರು, ಹಕ್ಕು ಪಡೆಯಲು ಮುಂದೆ ಮಾಡಬೇಕಾದ ಹೋರಾಟದ ಬಗ್ಗೆ ಅವರನ್ನು ಸಂಘಟಿಸುತ್ತಿದ್ದರು.

ವಾರದ ಉಳಿದ ದಿನಗಳಂದು ಬಿಜಿಪಿಎಂಯುಎಸ್‌ನ ಸ್ವಾಭಿಮಾನ ಕೇಂದ್ರದಲ್ಲಿ ಸಂತ್ರಸ್ತ ಮಹಿಳೆಯರಿಗೆ ಹೊಲಿಗೆ, ಹೆಣಿಕೆ ತರಹದ ಜೀವನೋಪಾಯದ ಕೌಶಲ್ಯಗಳನ್ನು ಕಲಿಸುತ್ತಿದ್ದರು.

ಹೋರಾಟದ ಮೂಲಕ ಮತ್ತು ನ್ಯಾಯಾಲಯದ ಮೂಲಕ ಸಂತ್ರಸ್ತರಿಗೆ ಎಷ್ಟು ಸಾಧ್ಯವೋ ಅಷ್ಟು ನೆರವು-ಪರಿಹಾರ, ಚಿಕಿತ್ಸೆ ಸಿಗುವಂತೆ ಹಮೀದಾ ಶ್ರಮಿಸಿದರು. ಬಿಜಿಪಿಎಂಯುಎಸ್ ಸಂಘಟನೆಯ ಸಂಚಾಲಕರಾಗಿ ಸಂತ್ರಸ್ತರ ಹೋರಾಟಕ್ಕೆ ಒಂದು ದೃಢ ಸಂಕಲ್ಪ ರೂಪಿಸಿದ್ದ ಅಬ್ದುಲ್ ಜಬ್ಬಾರ್ ನಿಧನದ ನಂತರ ಹಮೀದಾರನ್ನು ಅಧ್ಯಕ್ಷೆಯನ್ನಾಗಿ ಸಂತ್ರಸ್ತರು ನೇಮಿಸಿಕೊಂಡಿದ್ದರು.

ಅವರ ಪತಿ ಇದ್ರಿಸ್ ಭಾಯ್ ಕೂಡ ಈ ಹೋರಾಟಕ್ಕೆ ಜೀವನ ಮೀಸಲಿಟ್ಟು ನಿಧನರಾದರು. ಹೋರಾಟಗಾರ್ತಿಯಾಗುವ ಮೊದಲು ಸಾಮಾನ್ಯ ಗೃಹಿಣಿಯಾಗಿದ್ದ ಅವರು ಸಂಪ್ರದಾಯಸ್ಥ ವ್ಯವಸ್ಥೆಯ ನಿರ್ಬಂಧಗಳಲ್ಲೇ ಬದುಕಿದ್ದರು. ಆದರೆ ಆ ಮನುಷ್ಯ ನಿರ್ಮಿತ ದುರಂತ ಉಂಟು ಮಾಡಿದ ಆಘಾತ, ನೋವು ಅವರನ್ನು ಸಂತ್ರಸ್ತರ ದನಿಯಾಗುವಂತೆ ಪ್ರೇರೆಪಿಸಿತು.

-ಅನೂಪ್ ದತ್ತಾ

(ಬರಹ ಕೃಪೆ: ದಿ ವೈರ್)


ಇದನ್ನೂ ಓದಿ; ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...