Homeಕರ್ನಾಟಕಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ 2024ರ ದಸರಾ ಉದ್ಘಾಟನೆ - ಸಿದ್ದರಾಮಯ್ಯ ಘೋಷಣೆ

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ 2024ರ ದಸರಾ ಉದ್ಘಾಟನೆ – ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು 2024ರ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ಮೈಸೂರಿನಲ್ಲಿ ಹೇಳಿದ್ದಾರೆ. ಜಿಲ್ಲಾಡಳಿತ, ಮೈಸೂರು ಉಸ್ತುವಾರಿ ಸಚಿವರು ಅವರಿಗೆ ಆಹ್ವಾನ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ,”ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡಿ ತೀರ್ಮಾನಿಸುತ್ತೇವೆ.” ಎಂದು ಹೇಳಿದ್ದಾರೆ.

ಅಲ್ಲದೆ, ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

“ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆಗೆ ಆದೇಶವಾಗಿದೆ, ಆದರೆ 2021 ಲೋಕಾಯುಕ್ತದವರು ತನಿಖೆ ಮಾಡಿಲ್ಲ. ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ನಮ್ಮ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

“ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡುತ್ತಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ, ಅವರು ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...