Homeಕರ್ನಾಟಕಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ಧರ್ಮದ ಅಮಲಿನಲ್ಲಿ ತೇಲಾಡ್ತಾ ಇರೋ ಕನ್ನಡಿಗರೆ, ಇವತ್ತು ಕನ್ನಡ ನಾಡಿನಲ್ಲಿ ಕನ್ನಡ ವಿವಿಗೆ ಬಂದ ಗತಿಯೇ, ನಾಳೆ ಕನ್ನಡ ನಾಡಿನ ಕನ್ನಡಿಗರಿಗೆ ಬರುತ್ತದೆ, ಎಚ್ಚರ ಎಂದು ಟ್ವಿಟ್ಟರಿಗರು ಎಚ್ಚರಿಸಿದ್ದಾರೆ.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ಕೊಟ್ಟಿದ್ದ ಟ್ವಿಟರ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಟ್ವಿಟ್ಟರ್‌ನಲ್ಲಿ ಈಗಾಗಲೇ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗುತ್ತಿದೆ.

ಈ ಬಗ್ಗೆ ನಿನ್ನೆ ಟ್ವಿಟ್ಟರ್‌ ಮುಖಾಂತರ ಕರೆ ನೀಡಿದ್ದ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಟಿ.ಎ “ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿರುವ ಟ್ವಿಟರ್ ಅಭಿಯಾನದಲ್ಲಿ ಈ ಕುರಿತು ಮಾತನಾಡೋಣ. ಸರ್ಕಾರವನ್ನು ಎಚ್ಚರಿಸೋಣ” ಎಂದು ಹೇಳಿದ್ದರು.

ಇದನ್ನೂ ಓದಿ: ‘ಹಂಪಿ ವಿವಿಗೆ ಅನುದಾನ ಬಿಡುಗಡೆ ಮಾಡಿ’ – ನಾಳೆ #ಕನ್ನಡವಿವಿಉಳಿಸಿ ಟ್ವಿಟರ್ ಅಭಿಯಾನ: ಕರವೇ

ಟ್ವಿಟ್ಟರ್‌ನಲ್ಲಿ #ಕನ್ನಡವಿವಿಉಳಿಸಿ ಟ್ರೆಂಡ್ ಆಗುತ್ತಿದ್ದು ಹಲವಾರು ಕನ್ನಡಾಭಿಮಾನಿಗಳು ಕರವೇ ಕರೆಯನ್ನು ಬೆಂಬಲಿಸಿ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕರವೆ ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಟಿ.ಎ ಸರಣಿ ಟ್ವೀಟ್ ಮಾಡಿದ್ದು, “ಹಂಪಿ ಕನ್ನಡ ವಿಶ್ವವಿದ್ಯಾಲಯದ ಪರಿಸ್ಥಿತಿ ಶೋಚನೀಯವಾಗಿದೆ. ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಂದ ಸಂಶೋಧನೆ, ಬೋಧನೆ ಹೆಚ್ಚು ಕಡಿಮೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರ ಪರಿಣಾಮವಾಗಿಯೇ ನ್ಯಾಕ್ ಗುಣಮಟ್ಟದಲ್ಲಿ ಎ+ ಇದ್ದ ಶ್ರೇಣಿ ಮೂರು ಮೆಟ್ಟಿಲು ಕೆಳಗಿಳಿದು ಬಿ ಶ್ರೇಣಿಗೆ ಇಳಿದಿದೆ. ಕಳೆದ ಎರಡು ವರ್ಷಗಳಿಂದ ಕನ್ನಡ ವಿವಿಯಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿಲ್ಲ. ಸಂಶೋಧನಾ ಕಾರ್ಯಗಳು ಸ್ಥಗಿತಗೊಂಡಿವೆ ಅಥವಾ ವೇಗ ಕಳೆದುಕೊಂಡಿವೆ. ದೂರಶಿಕ್ಷಣ ಕೋರ್ಸ್ ಗಳು ಮುಚ್ಚಿಕೊಳ್ಳುತ್ತಿವೆ. ಇದೆಲ್ಲವನ್ನೂ ಸರಿಪಡಿಸಬೇಕಾದ ಆಡಳಿತ ಮಂಡಳಿ ನಿಷ್ಕ್ರಿಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’

ಪ್ರಸಾದ್ ಅವರು, “ಎಲ್ಲ ಶಿಕ್ಷಣವೂ ಕನ್ನಡದಲ್ಲಿಯೇ ಸಿಗಲಿ ಎಂಬ ಚರ್ಚೆ ಆರಂಭವಾಗುತ್ತಿರುವಾಗ, ಹೆಮ್ಮರವಾಗಿ ಸಾವಿರಾರು ಜನರ ಭವಿಷ್ಯ ರೂಪಿಸುವ ವಿವಿಗೆ ಅನುದಾನ ಕಡಿತ ಮಾಡುತ್ತಾರೆ. ಗಿಲ್ಕಿ ತೋರಿಸಿ ಹೊಟ್ಟೆ ಮೇಲೆ ಹೊಡೆಯುವ ಹುನ್ನಾರವಲ್ಲವೇ ಇದು?” ಎಂದು ಕಿಡಿ ಕಾರಿದ್ದಾರೆ.

ಕಿಶೋರ್‌ ಅವರು, “ಧರ್ಮದ ಅಮಲಿನಲ್ಲಿ ತೇಲಾಡ್ತಾ ಇರೋ ಕನ್ನಡಿಗರೆ, ಇವತ್ತು ಕನ್ನಡ ನಾಡಿನಲ್ಲಿ ಕನ್ನಡ ವಿವಿಗೆ ಬಂದ ಗತಿಯೇ, ನಾಳೆ ಕನ್ನಡ ನಾಡಿನ ಕನ್ನಡಿಗರಿಗೆ ಬರುತ್ತದೆ. ಎಚ್ಚರ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ರಾಘು ಅವರು, “ಸರ್ಕಾರ ಅಧಿಕಾರ,ಪ್ರಾಧಿಕಾರ ಎನ್ನುತ್ತಾ ಉನ್ನತ ಮಟ್ಟದ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡುತ್ತಿಲ್ಲ. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ನೀಡುವ ಅನುದಾನವನ್ನು ಬಿಜೆಪಿ ಸರ್ಕಾರ ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿದೆ ಇದಕ್ಕೆ ನನ್ನ ಧಿಕ್ಕಾರವಿದೆ, ಇದು ಖಂಡನೀಯ” ಎಂದು ಹೇಳಿದ್ದಾರೆ.

ಭರತ್‌. ಪಿ ಅವರು, “ಖಾಸಗಿಯವರು ಬೇಡಿಕೆ ಇದೆ ಎಂದು ಹೇಳಿ ಹೊಸದಾಗಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳನ್ನ ತೆರೆದರೆ,ಈ ಸರ್ಕಾರದವರು ಒಂದೊಂದು ಕುಂಟು ನೆಪ ಹೇಳಿ ಇರುವ ವಿಶ್ವವಿದ್ಯಾಲಯವನ್ನ ಮುಚ್ಚಲು ಹುನ್ನಾರಮಾಡುತ್ತಿದ್ದಾರಲ್ಲ..!ಏನು ಸ್ವಾಮಿ ಕಥೆ ಇದು ಯಡಿಯೂರಪ್ಪನವರೆ” ಎಂದು ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...