Homeಕರ್ನಾಟಕಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ಧರ್ಮದ ಅಮಲಿನಲ್ಲಿ ತೇಲಾಡ್ತಾ ಇರೋ ಕನ್ನಡಿಗರೆ, ಇವತ್ತು ಕನ್ನಡ ನಾಡಿನಲ್ಲಿ ಕನ್ನಡ ವಿವಿಗೆ ಬಂದ ಗತಿಯೇ, ನಾಳೆ ಕನ್ನಡ ನಾಡಿನ ಕನ್ನಡಿಗರಿಗೆ ಬರುತ್ತದೆ, ಎಚ್ಚರ ಎಂದು ಟ್ವಿಟ್ಟರಿಗರು ಎಚ್ಚರಿಸಿದ್ದಾರೆ.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ಕೊಟ್ಟಿದ್ದ ಟ್ವಿಟರ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಟ್ವಿಟ್ಟರ್‌ನಲ್ಲಿ ಈಗಾಗಲೇ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗುತ್ತಿದೆ.

ಈ ಬಗ್ಗೆ ನಿನ್ನೆ ಟ್ವಿಟ್ಟರ್‌ ಮುಖಾಂತರ ಕರೆ ನೀಡಿದ್ದ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಟಿ.ಎ “ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿರುವ ಟ್ವಿಟರ್ ಅಭಿಯಾನದಲ್ಲಿ ಈ ಕುರಿತು ಮಾತನಾಡೋಣ. ಸರ್ಕಾರವನ್ನು ಎಚ್ಚರಿಸೋಣ” ಎಂದು ಹೇಳಿದ್ದರು.

ಇದನ್ನೂ ಓದಿ: ‘ಹಂಪಿ ವಿವಿಗೆ ಅನುದಾನ ಬಿಡುಗಡೆ ಮಾಡಿ’ – ನಾಳೆ #ಕನ್ನಡವಿವಿಉಳಿಸಿ ಟ್ವಿಟರ್ ಅಭಿಯಾನ: ಕರವೇ

ಟ್ವಿಟ್ಟರ್‌ನಲ್ಲಿ #ಕನ್ನಡವಿವಿಉಳಿಸಿ ಟ್ರೆಂಡ್ ಆಗುತ್ತಿದ್ದು ಹಲವಾರು ಕನ್ನಡಾಭಿಮಾನಿಗಳು ಕರವೇ ಕರೆಯನ್ನು ಬೆಂಬಲಿಸಿ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕರವೆ ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಟಿ.ಎ ಸರಣಿ ಟ್ವೀಟ್ ಮಾಡಿದ್ದು, “ಹಂಪಿ ಕನ್ನಡ ವಿಶ್ವವಿದ್ಯಾಲಯದ ಪರಿಸ್ಥಿತಿ ಶೋಚನೀಯವಾಗಿದೆ. ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಂದ ಸಂಶೋಧನೆ, ಬೋಧನೆ ಹೆಚ್ಚು ಕಡಿಮೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರ ಪರಿಣಾಮವಾಗಿಯೇ ನ್ಯಾಕ್ ಗುಣಮಟ್ಟದಲ್ಲಿ ಎ+ ಇದ್ದ ಶ್ರೇಣಿ ಮೂರು ಮೆಟ್ಟಿಲು ಕೆಳಗಿಳಿದು ಬಿ ಶ್ರೇಣಿಗೆ ಇಳಿದಿದೆ. ಕಳೆದ ಎರಡು ವರ್ಷಗಳಿಂದ ಕನ್ನಡ ವಿವಿಯಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿಲ್ಲ. ಸಂಶೋಧನಾ ಕಾರ್ಯಗಳು ಸ್ಥಗಿತಗೊಂಡಿವೆ ಅಥವಾ ವೇಗ ಕಳೆದುಕೊಂಡಿವೆ. ದೂರಶಿಕ್ಷಣ ಕೋರ್ಸ್ ಗಳು ಮುಚ್ಚಿಕೊಳ್ಳುತ್ತಿವೆ. ಇದೆಲ್ಲವನ್ನೂ ಸರಿಪಡಿಸಬೇಕಾದ ಆಡಳಿತ ಮಂಡಳಿ ನಿಷ್ಕ್ರಿಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’

ಪ್ರಸಾದ್ ಅವರು, “ಎಲ್ಲ ಶಿಕ್ಷಣವೂ ಕನ್ನಡದಲ್ಲಿಯೇ ಸಿಗಲಿ ಎಂಬ ಚರ್ಚೆ ಆರಂಭವಾಗುತ್ತಿರುವಾಗ, ಹೆಮ್ಮರವಾಗಿ ಸಾವಿರಾರು ಜನರ ಭವಿಷ್ಯ ರೂಪಿಸುವ ವಿವಿಗೆ ಅನುದಾನ ಕಡಿತ ಮಾಡುತ್ತಾರೆ. ಗಿಲ್ಕಿ ತೋರಿಸಿ ಹೊಟ್ಟೆ ಮೇಲೆ ಹೊಡೆಯುವ ಹುನ್ನಾರವಲ್ಲವೇ ಇದು?” ಎಂದು ಕಿಡಿ ಕಾರಿದ್ದಾರೆ.

ಕಿಶೋರ್‌ ಅವರು, “ಧರ್ಮದ ಅಮಲಿನಲ್ಲಿ ತೇಲಾಡ್ತಾ ಇರೋ ಕನ್ನಡಿಗರೆ, ಇವತ್ತು ಕನ್ನಡ ನಾಡಿನಲ್ಲಿ ಕನ್ನಡ ವಿವಿಗೆ ಬಂದ ಗತಿಯೇ, ನಾಳೆ ಕನ್ನಡ ನಾಡಿನ ಕನ್ನಡಿಗರಿಗೆ ಬರುತ್ತದೆ. ಎಚ್ಚರ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ರಾಘು ಅವರು, “ಸರ್ಕಾರ ಅಧಿಕಾರ,ಪ್ರಾಧಿಕಾರ ಎನ್ನುತ್ತಾ ಉನ್ನತ ಮಟ್ಟದ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡುತ್ತಿಲ್ಲ. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ನೀಡುವ ಅನುದಾನವನ್ನು ಬಿಜೆಪಿ ಸರ್ಕಾರ ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿದೆ ಇದಕ್ಕೆ ನನ್ನ ಧಿಕ್ಕಾರವಿದೆ, ಇದು ಖಂಡನೀಯ” ಎಂದು ಹೇಳಿದ್ದಾರೆ.

ಭರತ್‌. ಪಿ ಅವರು, “ಖಾಸಗಿಯವರು ಬೇಡಿಕೆ ಇದೆ ಎಂದು ಹೇಳಿ ಹೊಸದಾಗಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳನ್ನ ತೆರೆದರೆ,ಈ ಸರ್ಕಾರದವರು ಒಂದೊಂದು ಕುಂಟು ನೆಪ ಹೇಳಿ ಇರುವ ವಿಶ್ವವಿದ್ಯಾಲಯವನ್ನ ಮುಚ್ಚಲು ಹುನ್ನಾರಮಾಡುತ್ತಿದ್ದಾರಲ್ಲ..!ಏನು ಸ್ವಾಮಿ ಕಥೆ ಇದು ಯಡಿಯೂರಪ್ಪನವರೆ” ಎಂದು ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...