Homeಕರ್ನಾಟಕಹಂಪಿಯಲ್ಲಿ ಪ್ರವಾಹ: ಪ್ರವಾಸಿಗರು, ಹೋಟೆಲ್ ಮಾಲೀಕರು ಮಾಡಿದ್ದು ತಪ್ಪಲ್ಲವೇ? ಇದಕ್ಕೆ ಶಿಕ್ಷೆಯಿಲ್ಲವೇ?

ಹಂಪಿಯಲ್ಲಿ ಪ್ರವಾಹ: ಪ್ರವಾಸಿಗರು, ಹೋಟೆಲ್ ಮಾಲೀಕರು ಮಾಡಿದ್ದು ತಪ್ಪಲ್ಲವೇ? ಇದಕ್ಕೆ ಶಿಕ್ಷೆಯಿಲ್ಲವೇ?

- Advertisement -
- Advertisement -

ಅತ್ತ ಸಹ್ಯಾದ್ರಿ ಪರ್ವತ ಶ್ರೇಣಿ ಮತ್ತು ಮಲೆನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದಂತೆ ಇತ್ತ ದೂರದ ಕೊಪ್ಪಳ ಜಿಲ್ಲೆಯಲ್ಲಿರುವ ತುಂಗಭದ್ರಾ ಜಲಾಶಯ ತುಂಬುವುದು ಎಲ್ಲರಿಗೂ ಖಾತ್ರಿಯಾಗಿ ಹೋಯಿತು. ಮಳೆ ಸುರಿಯುವ ಮೊದಲು ಜಲಾಶಯದಲ್ಲಿ ಬರೀ 32 ಟಿಎಂಸಿ ಅಡಿ ನೀರಿತ್ತು. ಒಂದೇ ವಾರದಲ್ಲಿ 100 ಟಿಎಂಸಿ ಅಡಿಗೆ ಬಂತು ನಿಂತಿತು. ಆದರೆ, ಮಲೆನಾಡಿನಲ್ಲಿ ಮಳೆ ಮಾತ್ರ ನಿಂತಿರಲಿಲ್ಲ. ಸುಮಾರು 2 ಲಕ್ಷ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಲೇ ಇತ್ತು. ಜಲಾಶಯದ ಗೇಟುಗಳನ್ನು ತೆರೆದು ನದಿಗೆ ನೀರು ಬಿಡುವುದು ಅನಿವಾರ್ಯವಾಯಿತು.

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದ ಕೊಪ್ಪಳದ ಯುವ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಜಲಾಶಯದಿಂದ ಎರಡೂವರೆ-ಮೂರು ಲಕ್ಷ ಕ್ಯೂಸೆಕ್ ನೀರನ್ನು ಬಿಟ್ಟರೆ ಜಗತ್ಪ್ರಸಿದ್ಧ ವಿಶ್ವಪಾರಂಪರಿಕ ತಾಣವಾದ ಹಂಪಿಯ ಕೆಲ ಸ್ಮಾರಕಗಳು ಜಲಾವೃತವಾಗುತ್ತವೆ ಹಾಗೂ ಹಂಪಿಯ ಪಕ್ಕದಲ್ಲಿರುವ ವಿರುಪಾಪುರ ನಡುಗಡ್ಡೆಯಲ್ಲಿನ ಜನ ತೊಂದರೆಗೆ ಸಿಲುಕಿಕೊಳ್ಳುತ್ತಾರೆ ಎಂಬುದನ್ನು ಮೊದಲೇ ಊಹಿಸಿದ್ದರು. ಅದಕ್ಕಾಗಿಯೇ ಅವರು ಅತ್ತ ಜಲಾಶಯದ ನೀರಿನ ಮಟ್ಟ ಏರುತ್ತಿದ್ದಂತೆ ವಿರುಪಾಪುರ ನಡುಗಡ್ಡೆಯಿಂದ ಜನರನ್ನು ತೆರವುಗೊಳಿಸುವ ಸಿದ್ಧತೆ ಮಾಡಿಕೊಂಡರು. ಮೊದಲು ತನ್ನ ಅಧಿಕಾರಿಗಳನ್ನು ಕಳಿಸಿ ಪ್ರವಾಸಿಗರು ನಡುಗಡ್ಡೆಗೆ ಬರುವುದನ್ನು ತಡೆಯಲು ಪ್ರಯತ್ನಿಸಿದರು. ಡಂಗೂರ ಹೊಡೆಸಿ ನಡುಗಡ್ಡೆಯಲ್ಲಿರುವ ಜನ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಸಾರಿಸಿದರು. ಕೊನೆಗೆ ತಾವೇ ಖುದ್ದಾಗಿ ನಡುಗಡ್ಡೆಗೆ ಹೋಗಿ ಎಲ್ಲಾ ಹೊಟೇಲ್ ಮತ್ತು ರೆಸಾರ್ಟ್ ಗಳನ್ನು ಮುಚ್ಚಬೇಕು ಎಂದು ಅವುಗಳ ಮಾಲಿಕರಿಗೆ ನಿರ್ದೇಶನ ಕೊಟ್ಟು ಬಂದರು. ಅಷ್ಟೇ ಅಲ್ಲದೇ, ಈ ನಿಟ್ಟಿನಲ್ಲಿ ಒಂದು ಅಧಿಕೃತ ಆದೇಶವನ್ನೂ ಹೊರಡಿಸಿದರು.

ಇಷ್ಟೆಲ್ಲಾ ಮಾಡಿದ ನಂತರವೂ ಆಗಿದ್ದೇನು ಗೊತ್ತೆ?

ವಿಶ್ವಪ್ರಸಿದ್ಧ ಹಂಪಿಗೆ ದೇಶವಿದೇಶಗಳಿಂದ ಹಲವು ಪ್ರವಾಸಿಗರು ಬರುತ್ತಾರೆ. ಬಂದವರಲ್ಲಿ ಬಹುತೇಕರು ಮೋಜು-ಮಸ್ತಿಗೆ ಹೆಸರುವಾಸಿಯಾದ ಈ ವಿರುಪಾಪುರ ಗಡ್ಡಿಗೆ ಬಂದೇ ಬರುತ್ತಾರೆ. ದೇಶಿ-ವಿದೇಶಿ ಪ್ರವಾಸಿಗರನ್ನು ಹಲವು ರೀತಿಯಲ್ಲಿ ತೃಪ್ತಿಪಡಿಸುವುದಕ್ಕಾಗಿಯೇ ಅಲ್ಲಿ ಅನೇಕ ಐಷಾರಾಮಿ ಹೊಟೇಲುಗಳು, ರೆಸಾರ್ಟುಗಳು ತಲೆಯೆತ್ತಿವೆ. ದುಡ್ಡು ಮಾಡುವ ಖಯಾಲಿಗೆ ಬಿದ್ದಿರುವ ಹೊಟೇಲ್ ಮಾಲಿಕರು ಜಿಲ್ಲಾಧಿಕಾರಿ ನೀಡಿದ ಮನವಿ, ನಿರ್ದೇಶನ, ಎಚ್ಚರಿಕೆ ಮತ್ತು ಆದೇಶವನ್ನೂ ಗಾಳಿಗೆ ತೂರಿ ತಮ್ಮ ಹೊಟೇಲ್ ಮತ್ತು ರೆಸಾರ್ಟುಗಳನ್ನು ಬಂದ್ ಮಾಡಲಿಲ್ಲ.

ಅದೂ ಸಾಲದೆಂಬಂತೆ, “ನದಿಯಲ್ಲಿ ನೀರು ಹೆಚ್ಚಾದರೆ, ನಾವೇ ನಿಮ್ಮನ್ನು ಖಾಸಗಿ ದೋಣಿಗಳಲ್ಲಿ ಆಚೆಗೆ ಬಿಟ್ಟುಬರುತ್ತೇವೆ. ನೀವೇನು ಹೆದರಬೇಡಿ. ಬೇಕಿದ್ದರೆ ನಿಮ್ಮ ಕಾರುಗಳನ್ನು ನದಿಯಿಂದ ದೂರ ನಿಲ್ಲಿಸಿ ಬನ್ನಿ” ಎಂದು ಪ್ರವಾಸಿಗರನ್ನು ಹುರಿದುಂಬಿಸಿ, ಅವರಿಗೆ ಆಶ್ವಾಸನೆಗಳನ್ನು ಕೊಟ್ಟು ತಮ್ಮಲ್ಲೇ ಉಳಿಸಿಕೊಂಡರು. ಎರಡನೇ ಶನಿವಾರ, ಭಾನುವಾರ ಮತ್ತು ಸೋಮವಾಗ (ಈದ್) ರಜಾ ದಿನಗಳಾಗಿದ್ದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿತ್ತು; ಅಂತೆಯೇ ಹೊಟೇಲ್ ಮಾಲಿಕರಿಗೆ ಲಾಭವೂ ಕೂಡ.

ಆಮೇಲೆ ಏನಾಯಿತು? ಜಿಲ್ಲಾಧಿಕಾರಿ ಸುನೀಲ್ ಕುಮಾರ್ ನಿರೀಕ್ಷಿಸಿದಂತೆಯೇ ಮಲೆನಾಡಿನಲ್ಲಿ ಮಳೆ ಬಿಡಲಿಲ್ಲ. ತುಂಗಭದ್ರಾ ಜಲಾಶಯಕ್ಕೆ ಬೃಹತ್ ಪ್ರಮಾಣದ ಒಳಹರಿವು ಬರುವುದು ನಿಲ್ಲಲಿಲ್ಲ. ಜಲಾಶಯದಿಂದ ನೀರು ಹೊರಹರಿಸುವುದೂ ಅನಿವಾರ್ಯವಾಯಿತು. ಯಾವಾಗ ಜಲಾಶಯದಿಂದ ಹೊರಹರಿವು ಎರಡೂವರೆ ಲಕ್ಷ ಕ್ಯೂಸೆಕ್ ದಾಟಿತೋ ಅತ್ತ ಹಂಪಿ ಸ್ಮಾರಕಗಳೂ ಜಲಾವೃತವಾದವು, ಇತ್ತ ನಡುಗಡ್ಡೆಯಲ್ಲೂ ಜನ ನೆರವಿಗಾಗಿ ಕೂಗಲಾರಂಭಿಸಿದರು.

ನಡುಗಡ್ಡೆಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನಾ ಪಡೆ (NDRF), ನಾಗರಿಕ ರಕ್ಷಣಾ ಪಡೆ ಮತ್ತು ಅಗ್ನಿಶಾಮಕ ದಳಗಳನ್ನು ಕರೆಸಲಾಯಿತು. ಮೋಜು-ಮಸ್ತಿಗಾಗಿ ನಡುಗಡ್ಡೆಯಲ್ಲಿ ಉಳಿದಿದ್ದ ಪ್ರವಾಸಿಗರನ್ನು ಹಾಗೂ ಲಾಭಕ್ಕಾಗಿ ಅವರನ್ನು ಉಳಿಸಿಕೊಂಡಿದ್ದ ಹೊಟೆಲ್ ಮಾಲಿಕರು/ನಿರ್ವಾಹಕರನ್ನು ರಕ್ಷಿಸಲು ರಕ್ಷಣಾ ದಳಗಳ ಯೋಧರು ತಮ್ಮ ಪ್ರಾಣಗಳನ್ನು ಪಣಕ್ಕೊಡ್ಡಿ ಮೈಯಿಗೆ ಲೈಫ್ ಜಾಕೇಟ್ ಹಾಕಿಕೊಂಡು ಭೋರ್ಗರೆಯುತ್ತಿದ್ದ ನದಿಗೆ ಇಳಿಯಬೇಕಾಯಿತು. ಎನ್.ಡಿ.ಆರ್.ಎಫ್ ತಂಡ ಆಗಲೇ ರಬ್ಬರ್ ಬೋಟ್ ಬಳಸಿ ಒಂದು ಟ್ರಿಪ್ ಹೋಗಿ ಬಂದು ವಿದೇಶಿ ಪ್ರವಾಸಿಗರನ್ನು ಕರೆತಂದಿತ್ತು. ನಡುಗಡ್ಡೆಯಲ್ಲಿ ಸುಮಾರು ಮುನ್ನೂರು ಜನ ಇದ್ದಿದ್ದರಿಂದ ಒಂದೇ ದೋಣಿಯಲ್ಲಿ ಪ್ರತೀ ಸಾರಿ ನಾಲ್ಕೈದು ಜನರನ್ನು ರಕ್ಷಿಸುತ್ತಾ ಹೋದರೆ ಒಂದು ವಾರ ಬೇಕಾಗುತ್ತದೆ. ಆದ್ದರಿಂದ ಇನ್ನೊಂದು ದೋಣಿ ಧುಮ್ಮಿಕ್ಕಿ ಬರುತ್ತಿದ್ದ ಅಪಾಯಕಾರಿ ನದಿಗೆ ಇಳಿಯಿತು. ಅದರಲ್ಲಿ ಐವರು ರಕ್ಷಣಾ ಸಿಬ್ಬಂದಿಗಳಿದ್ದರು. ಅದು ತನ್ನ ಮೊದಲ ಬಾರಿಗೆ ಪ್ರವಾಸಿಗರನ್ನು ಕರೆತರಲು ನಡುಗಡ್ಡೆಯತ್ತ ಹೋಗುವಾಗಲೇ ನದಿಯ ನಡುವೆ ನಿಂತಿದ್ದ ಮರಕ್ಕೆ ಬಡಿದು ಮಗುಚಿಬಿದ್ದಿತು..! ಜನರ ರಕ್ಷಣೆಗೆ ಹೋಗಿದ್ದ ಐವರೂ ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದರು.

ಕೂಡಲೇ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ವಾಯುಪಡೆ ಮತ್ತು ನೌಕಾಪಡೆಗಳನ್ನು ಸಂಪರ್ಕಿಸಿ ಮೂರು ಹೆಲಿಕ್ಯಾಪ್ಟರ್ ಗಳನ್ನು ತರಿಸಿ ಮೊದಲು ನದಿಯಲ್ಲಿ ಕೊಚ್ಚಿ ಹೋಗಿದ್ದ ರಕ್ಷಣಾ ಸಿಬ್ಬಂದಿಯನ್ನು ರಕ್ಷಿಸುವ ಕೆಲಸ ಪ್ರಾರಂಭಿಸಿದರು. ಅದೃಷ್ಟವಶಾತ್ ಕೆಲವೇ ಗಂಟೆಗಳಲ್ಲಿ ಎಲ್ಲಾ ಐವರನ್ನೂ  ರಕ್ಷಿಸುವಲ್ಲಿ ವಾಯುಪಡೆ ಮತ್ತು ನೌಕಾಪಡೆಯ ಹೆಲಿಕ್ಯಾಪ್ಟರುಗಳು ಯಶಸ್ವಿಯಾದವು.

ಕೊನೆಗೆ ದೋಣಿಯ ಮೂಲಕ ನಡುಗಡ್ಡೆಯಲ್ಲಿ ಸಿಲುಕಿರುವ ಪ್ರವಾಸಿಗರನ್ನು ರಕ್ಷಿಸುವ ಯೋಚನೆಯನ್ನೇ ಬಿಟ್ಟು ಇದೇ ಹೆಲಿಕ್ಯಾಪ್ಟರುಗಳ ಮೂಲಕ ಅವರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವ ಕೆಲಸ ಪ್ರಾರಂಭಿಸಿದರು.

ವಾಯುಪಡೆಯ ಒಂದು ಹೆಲಿಕ್ಯಾಪ್ಟರ್ 20 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದರೆ ಇನ್ನೊಂದು ಹೆಲಿಕ್ಯಾಪ್ಟರ್ 10 ಜನರನ್ನು ತುಂಬಿಕೊಂಡು ಹೋಗುವ ಸಾಮರ್ಥ್ಯ ಹೊಂದಿತ್ತು. ಈ ಹೆಲಿಕ್ಯಾಪ್ಟರುಗಳು ಕಂಡಕಂಡಲ್ಲಿ ಇಳಿಯುವುದು ಕಷ್ಟ. ಹಾಗಾಗಿ, ನಡುಗಡ್ಡೆಯಿಂದ ಹೊತ್ತೊಯ್ದ ಜನರನ್ನು ಜಿಂದಾಲ್ ಏರ್ ಸ್ಟ್ರಿಪ್ ನಲ್ಲಿ ಇಳಿಸಿದವು. ಇನ್ನೊಂದು ನೌಕಾಪಡೆಯ ಹೆಲಿಕ್ಯಾಪ್ಟ್ ಕೇವಲ ಏಳೆಂಟು ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವಿದ್ದು ಅದು ಯಾವುದೇ ಸಪಾಟು ನೆಲದ ಮೇಲೆ ಇಳಿಯಬಲ್ಲದು. ಅದು ಸಮೀಪದ ರಸ್ತೆಗಳಲ್ಲಿಯೇ ಜನರನ್ನು ಇಳಿಸಿತು. ಹೀಗೆ ಸಂಜೆಯ ಹೊತ್ತಿಗೆ ಸುಮಾರು ಇನ್ನೂರೈವತ್ತು ಜನರನ್ನು ವಾಯುಪಡೆ ಮತ್ತು ನೌಕಾಪಡೆಯ ಯೋಧರು ರಕ್ಷಿಸಿದರು. ಇನ್ನೂ ನೂರು ಮಂದಿ ಅಲ್ಲೇ ಉಳಿದಿದ್ದರು. ಇವತ್ತು ಅವರನ್ನು ಕರೆತರುವ ಕಾರ್ಯಾಚರಣೆ ಶುರುವಾಗಿಬಹುದು.

ಇಷ್ಟೆಲ್ಲಾ ಏಕೆ ಬರೆಯಬೇಕಾಯಿತು ಎಂದರೆ, ಜಿಲ್ಲಾಧಿಕಾರಿಯ ಮಾತನ್ನು ಪ್ರವಾಸಿಗರು, ಹೊಟೇಲ್ ಮಾಲಿಕರು ಕೇಳಿದ್ದರೆ ಇಷ್ಟೆಲ್ಲಾ ತೊಂದರೆಯಾಗುವ ಪ್ರಮೇಯವೇ ಬರುತ್ತಿರಲಿಲ್ಲ. ಇಷ್ಟೊಂದು ಸಮಯ, ಹಣ, ಶಕ್ತಿ ಪೋಲಾಗುವ ಸಂಭವವೇ ಇರುತ್ತಿರಲಿಲ್ಲ. ಮೋಜು-ಮಸ್ತಿ ಮಾಡುವವರ ರಕ್ಷಣೆಗಾಗಿ ತಮ್ಮ ಜೀವದ ಹಂಗು ತೊರೆದು ನದಿಗಿಳಿದು ಕೊಚ್ಚಿಹೋದ ಯೋಧರಿಗೆ ಏನಾದರೂ ಹೆಚ್ಚೂಕಮ್ಮಿಯಾಗಿದ್ದರೆ ಅದಕ್ಕೆ ಯಾರು ಹೊಣೆ?

ನಮ್ಮ ಜನಕ್ಕೆ ಯಾವಾಗ ಬುದ್ದಿ ಬರುತ್ತೆ ಅಂತ ಅರ್ಥವಾಗುತ್ತಿಲ್ಲ. 

ಅಂದಹಾಗೆ, ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಗೂ ಈಗ ಪಿತ್ತ ನೆತ್ತಿಗೇರಿದ ಹಾಗೆ ಕಾಣುತ್ತಿದೆ. ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ ಮಾಡಿದ್ದಕ್ಕಾಗಿ ಹೊಟೆಲ್/ ರೆಸಾರ್ಟ್ ಮಾಲಿಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಕ್ಕೆ ಅವರು ಮುಂದಾಗಿದ್ದಾರೆ. ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ತನಗೆ ಸಹಕಾರ ತೋರದ ಈ ಮಾಲಿಕರ ವಿರುದ್ಧ  ವಿಕೋಪ ನಿರ್ವಹಣಾ ಕಾಯ್ದೆಯ ಅಡಿಯಲ್ಲೂ ಕ್ರಮ ಜರುಗಿಸಲು ಮುಂದಾಗಿದ್ದಾರೆ. ಇವರ ಲೈಸನ್ಸುಗಳನ್ನು ರದ್ಧುಪಡಿಸುವ ಸಂಭವವೂ ಇದೆ. ಹಾಗಾದಾಗ ಮಾತ್ರ ಈ ಧನದಾಹಿಗಳು ಒಂದಿಷ್ಟು ಬುದ್ದಿಕಲಿಯುತ್ತಾರೆ ಅನ್ನಿಸುತ್ತದೆ.

ಕೃಪೆ- ಕುಮಾರ್ ಬುರಡಿಕಟ್ಟಿಯವರ ಫೇಸ್ ಬುಕ್ ಗೋಡೆಯಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...