Homeಕರ್ನಾಟಕಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು ಉಪಕುಲಪತಿ 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಸಹ-ಪ್ರಾಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿಯ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಕೋಟ್ಯಾಂತರ ರೂ ಬಾಕಿಯಿಟ್ಟಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಭಡ್ತಿ ನೀಡಲು ಲಂಚ, ಪಿಂಚಣಿಯಿಂದ ಕಮೀಷನ್‌ ಹಾಗೂ ಬೇಕಾಬಿಟ್ಟಿ ನೇಮಕಾತಿ ನಡೆಸುತ್ತಿದ್ದಾರೆ ಎಂದು ಅಲ್ಲಿನ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಕೂಡಾ ಆರೋಪಿಸಿದ್ದಾರೆ.

“ಕನ್ನಡ ವಿಶ್ವವಿದ್ಯಾಲಯ ಹಂಪಿ” ರಾಜ್ಯದ ಹಂಪಿಯಲ್ಲಿರುವ ಸಂಶೋಧನಾ ಆಧಾರಿತ ಸಾರ್ವಜನಿಕ ವಿಶ್ವವಿದ್ಯಾಲಯವಾಗಿದೆ. ಇದನ್ನು 1991 ರಲ್ಲಿ ಕರ್ನಾಟಕ ಸರ್ಕಾರವು ಕನ್ನಡ ವಿಶ್ವವಿದ್ಯಾಲಯ ಕಾಯಿದೆ-1991 ಮೂಲಕ ಕನ್ನಡ ಭಾಷೆಯನ್ನು ಅಭಿವೃದ್ಧಿಪಡಿಸುವ ಮತ್ತು ಕರ್ನಾಟಕದ ಜಾನಪದ ಸಾಹಿತ್ಯ, ಸಂಪ್ರದಾಯಗಳು, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಅಲ್ಲಿಂದ ಇತ್ತೀಚೆಗಿನವರೆಗೂ ವಿದ್ಯಾಲಯವು ಹಲವಾರು ಗಮನಾರ್ಹ ಸಂಶೋಧನೆಗಳನ್ನು, ಕೆಲಸವನ್ನು ಮಾಡಿದೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ಆದರೆ ಇತ್ತೀಚೆಗಿನ ವರ್ಷಗಳಲ್ಲಿ ವಿಶ್ವವಿದ್ಯಾಲಯ ಪ್ರಕಟಿಸುತ್ತಿದ್ದ ಪ್ರಕಟಣೆಗಳು ನಿಂತು ಹೋಗಿದೆ ಎಂದು ವಿದ್ಯಾಲಯದ ಅಧ್ಯಾಪಕರ ಸಂಘ ಆರೋಪಿಸಿದೆ. ಜೊತೆಗೆ ನ್ಯಾಕ್‌ ಮಾನ್ಯತೆಯಲ್ಲಿ ‘ಎ’  ಶ್ರೇಣಿಯಲ್ಲಿದ್ದ ವಿಶ್ವವಿದ್ಯಾಲಯ ಈಗ ‘ಬಿ’ ಶ್ರೇಣಿಗೆ ತಲುಪಿದ್ದು, ದೂರಶಿಕ್ಷಣ ನಿರ್ದೇಶನಾಲಯವು ಮಾನ್ಯತೆ ಕಳೆದುಕೊಂಡಿದೆ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ.

ಜೊತೆಗೆ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರ ಪಿಂಚಣಿ ಸೇರಿದಂತೆ ಕೋಟ್ಯಾಂತರ ರೂಗಳ ಸವಲತ್ತನ್ನು ಸಂದಾಯ ಮಾಡಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕರೇ ಆರೋಪಿಸಿದ್ದು ರಾಜ್ಯಪಾಲರಿಗೆ ಪತ್ರವನ್ನೂ ಬರೆದಿದ್ದಾರೆ.

ಇಷ್ಟೇ ಅಲ್ಲದೆ, ವಿದ್ಯಾಲಯದ ಸಹ-ಪ್ರಾಧ್ಯಾಪಕರಾಗಿರುವ ಡಾ. ಎಂ. ಮಲ್ಲಿಕಾರ್ಜುನಗೌಡ ಅವರು ಕುಲಪತಿಯ ಸ.ಚಿ. ರಮೇಶ ಅವರ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಕುಲಪತಿ ರಮೇಶ್ ಅವರು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇಷ್ಟೇ ಅಲ್ಲದೆ, ನಿಯಮಗಳನ್ನು ಪಾಲಿಸದೆ, ಮೀಸಲಾತಿಯನ್ನು ಉಲ್ಲಂಘಿಸಿ ಒಂದೇ ಜಾತಿಗೆ ಸೇರಿದ ಅಭ್ಯರ್ಥಿಗಳನ್ನು ನೇಮಕಗೊಳಸಲು ವಿಸಿ ಮತ್ತು ಕಾನೂನು ಘಟಕದ ಸಂಚಾಲಕರೊಬ್ಬರು ಹುನ್ನಾರ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ. ಅದರ ಬಗ್ಗೆ ತಕರಾರು ತೆಗೆದಿರುವುದಕ್ಕೆ ಮತ್ತು ಸಿಎಎಸ್ ಮುಂಬಡ್ತಿಗೆ ಲಂಚ ಕೇಳುವುದನ್ನು ಪ್ರಶ್ನಿಸಿದ ನಂತರ ತನ್ನನ್ನು ವಿಶ್ವವಿದ್ಯಾಲಯದಿಂದ ವರ್ಗಾವಣೆಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ವಿಶ್ವವಿದ್ಯಾಲಯದಲ್ಲಿನ ಎಸ್‌ ಸಿ, ಎಸ್‌ ಟಿ, ಒಬಿಸಿ ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಿಂದಲೂ ಪ್ರಾಧ್ಯಾಪಕರು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಪತ್ರ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: 9 ತಿಂಗಳಿಂದ ವೇತನ ಸಿಗದೆ ಸಂಕಷ್ಟದಲ್ಲಿ ಹಂಪಿ ವಿವಿ ನೌಕರರು: ವಿಶೇಷ ವರದಿ

ಸಂಶೋಧನಾ ವಿದ್ಯಾರ್ಥಿಗಳು ಹೇಳುವಂತೆ ಅವರ ವಿದ್ಯಾರ್ಥಿ ವೇತನಕ್ಕೆ ಸಹಿ ನೀಡುವುದಕ್ಕೆ ಕೂಡಾ ಲಂಚ ಪಡೆಯಲಾಗುತ್ತಿದ್ದು, ಅವುಗಳಲ್ಲೂ ಪರ್ಸಂಟೇಜ್ ಕೇಳಲಾಗುತ್ತಿದೆ. ಜೊತೆಗೆ ಏಕಾಏಕಿ ತಮ್ಮ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡುವುದನ್ನು ಕೂಡಾ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

“ಖರೀದಿ ಮತ್ತು ಇತರೆ ಹಣಕಾಸಿನ ವ್ಯವಹಾರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಪ್ರಸಾರಾಂಗದ ಪ್ರಕಟಣೆಗಳು ನಿಂತು ಹೋಗಿದೆ. ಜೊತೆಗೆ ವಿವಿಯ ಭೂಮಿಯನ್ನೂ ಒತ್ತುವರಿ ಮಾಡಲಾಗುತ್ತಿದೆ. ಡಿ.ಲಿಟ್‌ ಪದವಿಗಳನ್ನು ಹಣಕ್ಕಾಗಿ ಮಾರಾಟ ಮಾಡಲಾಗುತ್ತಿದೆ” ಎಂದು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಆರೋಪಿಸಿದ್ದಾರೆ.

ಈ ಎಲ್ಲಾ ವಿವಾದಗಳ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಸ.ಚಿ. ರಮೇಶ ಅವರು, “ಪ್ರಾಧ್ಯಾಪಕರ ನಿವೃತ್ತಿ ಪಿಂಚಣಿ ನೀಡಲು ಸರ್ಕಾರದಿಂದ ಅನುದಾನ ಬಂದಿಲ್ಲ, ಹಾಗಾಗಿ ಅವುಗಳನ್ನು ನೀಡಿಲ್ಲ. ಅನುದಾನದ ಕುರಿತು ಸರ್ಕಾರಕ್ಕೆ ಹತ್ತಾರು ಬಾರಿ ಪತ್ರ ಬರೆದಿದ್ದೇನೆ. ಉಳಿದಂತೆ ಲಂಚ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಲಾಗುತ್ತಿದೆ. ಮಾಡುತ್ತಿರುವ ಆರೋಪಗಳಿಗೆ ಸರಿಯಾದ ಸಾಕ್ಷಿ, ಆಧಾರಗಳನ್ನು ಕೊಟ್ಟರೆ ತಪ್ಪಿತಸ್ಥ ನಾನೇ ಆದರೂ ನನಗೆ ಶಿಕ್ಷೆ ಆಗಲಿ. ಈ ಆರೋಪಗಳ ಬಗ್ಗೆ ಈಗಾಗಲೇ ವಿದ್ಯಾಲಯದ ಸಿಂಡಿಕೇಟ್‌ಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಹಣಕಾಸು ಅಧಿಕಾರಿ ರಮೇಶ್ ನಾಯಕ್ ಮಾತನಾಡಿ, “ಪಿಂಚಣಿ ಯಾರಿಗೂ ನಿಂತಿಲ್ಲ, ಕೊಡಲಾಗುತ್ತಿದೆ. ಮಹಾಲೆಕ್ಕಪಾಲರು ನೇಮಕಾತಿ ಸಮಸ್ಯೆಗಳನ್ನು ಮುಂದಿಟ್ಟು ಇಬ್ಬರದು ತಡೆ ಹಿಡಿದಿದ್ದಾರೆ. ಇನ್ನು ಪಿಂಚಣಿ ಸೌಲಭ್ಯಗಳು ಟೆಕ್ನಿಕಲ್ ಸಮಸ್ಯೆಯಿಂದ ಉಳಿದುಕೊಂಡಿವೆ. ಕೆಲವರು 7ನೇ ವೇತನ ಆಯೋಗದ ಪ್ರಕಾರ ರಜೆಗಳಿಕೆ ಕೇಳುತ್ತಿದ್ದಾರೆ. ಆದರೆ ಅದಕ್ಕೆ ಪಿಂಚಣಿ ನಿಯಮಗಳು ವಿರುದ್ಧವಾಗಿವೆ. ಇನ್ನು ಕೆಲವರಿಗೆ ತಾವು ನಿವೃತ್ತರಾದ ವಿವಿಯಲ್ಲಿ ಗಳಿಕೆ ರಜೆ ತೆಗೆದುಕೊಳ್ಳಬೇಕು. ನಾವು ಇಲ್ಲಿ ಕೊಡಲು ಸಾಧ್ಯವಿಲ್ಲ. ಈ ರೀತಿಯಾಗಿ ಸಮಸ್ಯೆಗಳಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...