Homeಕರ್ನಾಟಕಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು ಉಪಕುಲಪತಿ 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಸಹ-ಪ್ರಾಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿಯ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಕೋಟ್ಯಾಂತರ ರೂ ಬಾಕಿಯಿಟ್ಟಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಭಡ್ತಿ ನೀಡಲು ಲಂಚ, ಪಿಂಚಣಿಯಿಂದ ಕಮೀಷನ್‌ ಹಾಗೂ ಬೇಕಾಬಿಟ್ಟಿ ನೇಮಕಾತಿ ನಡೆಸುತ್ತಿದ್ದಾರೆ ಎಂದು ಅಲ್ಲಿನ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಕೂಡಾ ಆರೋಪಿಸಿದ್ದಾರೆ.

“ಕನ್ನಡ ವಿಶ್ವವಿದ್ಯಾಲಯ ಹಂಪಿ” ರಾಜ್ಯದ ಹಂಪಿಯಲ್ಲಿರುವ ಸಂಶೋಧನಾ ಆಧಾರಿತ ಸಾರ್ವಜನಿಕ ವಿಶ್ವವಿದ್ಯಾಲಯವಾಗಿದೆ. ಇದನ್ನು 1991 ರಲ್ಲಿ ಕರ್ನಾಟಕ ಸರ್ಕಾರವು ಕನ್ನಡ ವಿಶ್ವವಿದ್ಯಾಲಯ ಕಾಯಿದೆ-1991 ಮೂಲಕ ಕನ್ನಡ ಭಾಷೆಯನ್ನು ಅಭಿವೃದ್ಧಿಪಡಿಸುವ ಮತ್ತು ಕರ್ನಾಟಕದ ಜಾನಪದ ಸಾಹಿತ್ಯ, ಸಂಪ್ರದಾಯಗಳು, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಅಲ್ಲಿಂದ ಇತ್ತೀಚೆಗಿನವರೆಗೂ ವಿದ್ಯಾಲಯವು ಹಲವಾರು ಗಮನಾರ್ಹ ಸಂಶೋಧನೆಗಳನ್ನು, ಕೆಲಸವನ್ನು ಮಾಡಿದೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ಆದರೆ ಇತ್ತೀಚೆಗಿನ ವರ್ಷಗಳಲ್ಲಿ ವಿಶ್ವವಿದ್ಯಾಲಯ ಪ್ರಕಟಿಸುತ್ತಿದ್ದ ಪ್ರಕಟಣೆಗಳು ನಿಂತು ಹೋಗಿದೆ ಎಂದು ವಿದ್ಯಾಲಯದ ಅಧ್ಯಾಪಕರ ಸಂಘ ಆರೋಪಿಸಿದೆ. ಜೊತೆಗೆ ನ್ಯಾಕ್‌ ಮಾನ್ಯತೆಯಲ್ಲಿ ‘ಎ’  ಶ್ರೇಣಿಯಲ್ಲಿದ್ದ ವಿಶ್ವವಿದ್ಯಾಲಯ ಈಗ ‘ಬಿ’ ಶ್ರೇಣಿಗೆ ತಲುಪಿದ್ದು, ದೂರಶಿಕ್ಷಣ ನಿರ್ದೇಶನಾಲಯವು ಮಾನ್ಯತೆ ಕಳೆದುಕೊಂಡಿದೆ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ.

ಜೊತೆಗೆ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರ ಪಿಂಚಣಿ ಸೇರಿದಂತೆ ಕೋಟ್ಯಾಂತರ ರೂಗಳ ಸವಲತ್ತನ್ನು ಸಂದಾಯ ಮಾಡಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕರೇ ಆರೋಪಿಸಿದ್ದು ರಾಜ್ಯಪಾಲರಿಗೆ ಪತ್ರವನ್ನೂ ಬರೆದಿದ್ದಾರೆ.

ಇಷ್ಟೇ ಅಲ್ಲದೆ, ವಿದ್ಯಾಲಯದ ಸಹ-ಪ್ರಾಧ್ಯಾಪಕರಾಗಿರುವ ಡಾ. ಎಂ. ಮಲ್ಲಿಕಾರ್ಜುನಗೌಡ ಅವರು ಕುಲಪತಿಯ ಸ.ಚಿ. ರಮೇಶ ಅವರ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಕುಲಪತಿ ರಮೇಶ್ ಅವರು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇಷ್ಟೇ ಅಲ್ಲದೆ, ನಿಯಮಗಳನ್ನು ಪಾಲಿಸದೆ, ಮೀಸಲಾತಿಯನ್ನು ಉಲ್ಲಂಘಿಸಿ ಒಂದೇ ಜಾತಿಗೆ ಸೇರಿದ ಅಭ್ಯರ್ಥಿಗಳನ್ನು ನೇಮಕಗೊಳಸಲು ವಿಸಿ ಮತ್ತು ಕಾನೂನು ಘಟಕದ ಸಂಚಾಲಕರೊಬ್ಬರು ಹುನ್ನಾರ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ. ಅದರ ಬಗ್ಗೆ ತಕರಾರು ತೆಗೆದಿರುವುದಕ್ಕೆ ಮತ್ತು ಸಿಎಎಸ್ ಮುಂಬಡ್ತಿಗೆ ಲಂಚ ಕೇಳುವುದನ್ನು ಪ್ರಶ್ನಿಸಿದ ನಂತರ ತನ್ನನ್ನು ವಿಶ್ವವಿದ್ಯಾಲಯದಿಂದ ವರ್ಗಾವಣೆಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ವಿಶ್ವವಿದ್ಯಾಲಯದಲ್ಲಿನ ಎಸ್‌ ಸಿ, ಎಸ್‌ ಟಿ, ಒಬಿಸಿ ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಿಂದಲೂ ಪ್ರಾಧ್ಯಾಪಕರು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಪತ್ರ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: 9 ತಿಂಗಳಿಂದ ವೇತನ ಸಿಗದೆ ಸಂಕಷ್ಟದಲ್ಲಿ ಹಂಪಿ ವಿವಿ ನೌಕರರು: ವಿಶೇಷ ವರದಿ

ಸಂಶೋಧನಾ ವಿದ್ಯಾರ್ಥಿಗಳು ಹೇಳುವಂತೆ ಅವರ ವಿದ್ಯಾರ್ಥಿ ವೇತನಕ್ಕೆ ಸಹಿ ನೀಡುವುದಕ್ಕೆ ಕೂಡಾ ಲಂಚ ಪಡೆಯಲಾಗುತ್ತಿದ್ದು, ಅವುಗಳಲ್ಲೂ ಪರ್ಸಂಟೇಜ್ ಕೇಳಲಾಗುತ್ತಿದೆ. ಜೊತೆಗೆ ಏಕಾಏಕಿ ತಮ್ಮ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡುವುದನ್ನು ಕೂಡಾ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

“ಖರೀದಿ ಮತ್ತು ಇತರೆ ಹಣಕಾಸಿನ ವ್ಯವಹಾರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಪ್ರಸಾರಾಂಗದ ಪ್ರಕಟಣೆಗಳು ನಿಂತು ಹೋಗಿದೆ. ಜೊತೆಗೆ ವಿವಿಯ ಭೂಮಿಯನ್ನೂ ಒತ್ತುವರಿ ಮಾಡಲಾಗುತ್ತಿದೆ. ಡಿ.ಲಿಟ್‌ ಪದವಿಗಳನ್ನು ಹಣಕ್ಕಾಗಿ ಮಾರಾಟ ಮಾಡಲಾಗುತ್ತಿದೆ” ಎಂದು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಆರೋಪಿಸಿದ್ದಾರೆ.

ಈ ಎಲ್ಲಾ ವಿವಾದಗಳ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಸ.ಚಿ. ರಮೇಶ ಅವರು, “ಪ್ರಾಧ್ಯಾಪಕರ ನಿವೃತ್ತಿ ಪಿಂಚಣಿ ನೀಡಲು ಸರ್ಕಾರದಿಂದ ಅನುದಾನ ಬಂದಿಲ್ಲ, ಹಾಗಾಗಿ ಅವುಗಳನ್ನು ನೀಡಿಲ್ಲ. ಅನುದಾನದ ಕುರಿತು ಸರ್ಕಾರಕ್ಕೆ ಹತ್ತಾರು ಬಾರಿ ಪತ್ರ ಬರೆದಿದ್ದೇನೆ. ಉಳಿದಂತೆ ಲಂಚ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಲಾಗುತ್ತಿದೆ. ಮಾಡುತ್ತಿರುವ ಆರೋಪಗಳಿಗೆ ಸರಿಯಾದ ಸಾಕ್ಷಿ, ಆಧಾರಗಳನ್ನು ಕೊಟ್ಟರೆ ತಪ್ಪಿತಸ್ಥ ನಾನೇ ಆದರೂ ನನಗೆ ಶಿಕ್ಷೆ ಆಗಲಿ. ಈ ಆರೋಪಗಳ ಬಗ್ಗೆ ಈಗಾಗಲೇ ವಿದ್ಯಾಲಯದ ಸಿಂಡಿಕೇಟ್‌ಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಹಣಕಾಸು ಅಧಿಕಾರಿ ರಮೇಶ್ ನಾಯಕ್ ಮಾತನಾಡಿ, “ಪಿಂಚಣಿ ಯಾರಿಗೂ ನಿಂತಿಲ್ಲ, ಕೊಡಲಾಗುತ್ತಿದೆ. ಮಹಾಲೆಕ್ಕಪಾಲರು ನೇಮಕಾತಿ ಸಮಸ್ಯೆಗಳನ್ನು ಮುಂದಿಟ್ಟು ಇಬ್ಬರದು ತಡೆ ಹಿಡಿದಿದ್ದಾರೆ. ಇನ್ನು ಪಿಂಚಣಿ ಸೌಲಭ್ಯಗಳು ಟೆಕ್ನಿಕಲ್ ಸಮಸ್ಯೆಯಿಂದ ಉಳಿದುಕೊಂಡಿವೆ. ಕೆಲವರು 7ನೇ ವೇತನ ಆಯೋಗದ ಪ್ರಕಾರ ರಜೆಗಳಿಕೆ ಕೇಳುತ್ತಿದ್ದಾರೆ. ಆದರೆ ಅದಕ್ಕೆ ಪಿಂಚಣಿ ನಿಯಮಗಳು ವಿರುದ್ಧವಾಗಿವೆ. ಇನ್ನು ಕೆಲವರಿಗೆ ತಾವು ನಿವೃತ್ತರಾದ ವಿವಿಯಲ್ಲಿ ಗಳಿಕೆ ರಜೆ ತೆಗೆದುಕೊಳ್ಳಬೇಕು. ನಾವು ಇಲ್ಲಿ ಕೊಡಲು ಸಾಧ್ಯವಿಲ್ಲ. ಈ ರೀತಿಯಾಗಿ ಸಮಸ್ಯೆಗಳಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...