Homeಕರ್ನಾಟಕಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು ಉಪಕುಲಪತಿ 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಸಹ-ಪ್ರಾಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿಯ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಕೋಟ್ಯಾಂತರ ರೂ ಬಾಕಿಯಿಟ್ಟಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಭಡ್ತಿ ನೀಡಲು ಲಂಚ, ಪಿಂಚಣಿಯಿಂದ ಕಮೀಷನ್‌ ಹಾಗೂ ಬೇಕಾಬಿಟ್ಟಿ ನೇಮಕಾತಿ ನಡೆಸುತ್ತಿದ್ದಾರೆ ಎಂದು ಅಲ್ಲಿನ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಕೂಡಾ ಆರೋಪಿಸಿದ್ದಾರೆ.

“ಕನ್ನಡ ವಿಶ್ವವಿದ್ಯಾಲಯ ಹಂಪಿ” ರಾಜ್ಯದ ಹಂಪಿಯಲ್ಲಿರುವ ಸಂಶೋಧನಾ ಆಧಾರಿತ ಸಾರ್ವಜನಿಕ ವಿಶ್ವವಿದ್ಯಾಲಯವಾಗಿದೆ. ಇದನ್ನು 1991 ರಲ್ಲಿ ಕರ್ನಾಟಕ ಸರ್ಕಾರವು ಕನ್ನಡ ವಿಶ್ವವಿದ್ಯಾಲಯ ಕಾಯಿದೆ-1991 ಮೂಲಕ ಕನ್ನಡ ಭಾಷೆಯನ್ನು ಅಭಿವೃದ್ಧಿಪಡಿಸುವ ಮತ್ತು ಕರ್ನಾಟಕದ ಜಾನಪದ ಸಾಹಿತ್ಯ, ಸಂಪ್ರದಾಯಗಳು, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಅಲ್ಲಿಂದ ಇತ್ತೀಚೆಗಿನವರೆಗೂ ವಿದ್ಯಾಲಯವು ಹಲವಾರು ಗಮನಾರ್ಹ ಸಂಶೋಧನೆಗಳನ್ನು, ಕೆಲಸವನ್ನು ಮಾಡಿದೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ಆದರೆ ಇತ್ತೀಚೆಗಿನ ವರ್ಷಗಳಲ್ಲಿ ವಿಶ್ವವಿದ್ಯಾಲಯ ಪ್ರಕಟಿಸುತ್ತಿದ್ದ ಪ್ರಕಟಣೆಗಳು ನಿಂತು ಹೋಗಿದೆ ಎಂದು ವಿದ್ಯಾಲಯದ ಅಧ್ಯಾಪಕರ ಸಂಘ ಆರೋಪಿಸಿದೆ. ಜೊತೆಗೆ ನ್ಯಾಕ್‌ ಮಾನ್ಯತೆಯಲ್ಲಿ ‘ಎ’  ಶ್ರೇಣಿಯಲ್ಲಿದ್ದ ವಿಶ್ವವಿದ್ಯಾಲಯ ಈಗ ‘ಬಿ’ ಶ್ರೇಣಿಗೆ ತಲುಪಿದ್ದು, ದೂರಶಿಕ್ಷಣ ನಿರ್ದೇಶನಾಲಯವು ಮಾನ್ಯತೆ ಕಳೆದುಕೊಂಡಿದೆ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ.

ಜೊತೆಗೆ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರ ಪಿಂಚಣಿ ಸೇರಿದಂತೆ ಕೋಟ್ಯಾಂತರ ರೂಗಳ ಸವಲತ್ತನ್ನು ಸಂದಾಯ ಮಾಡಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕರೇ ಆರೋಪಿಸಿದ್ದು ರಾಜ್ಯಪಾಲರಿಗೆ ಪತ್ರವನ್ನೂ ಬರೆದಿದ್ದಾರೆ.

ಇಷ್ಟೇ ಅಲ್ಲದೆ, ವಿದ್ಯಾಲಯದ ಸಹ-ಪ್ರಾಧ್ಯಾಪಕರಾಗಿರುವ ಡಾ. ಎಂ. ಮಲ್ಲಿಕಾರ್ಜುನಗೌಡ ಅವರು ಕುಲಪತಿಯ ಸ.ಚಿ. ರಮೇಶ ಅವರ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಕುಲಪತಿ ರಮೇಶ್ ಅವರು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇಷ್ಟೇ ಅಲ್ಲದೆ, ನಿಯಮಗಳನ್ನು ಪಾಲಿಸದೆ, ಮೀಸಲಾತಿಯನ್ನು ಉಲ್ಲಂಘಿಸಿ ಒಂದೇ ಜಾತಿಗೆ ಸೇರಿದ ಅಭ್ಯರ್ಥಿಗಳನ್ನು ನೇಮಕಗೊಳಸಲು ವಿಸಿ ಮತ್ತು ಕಾನೂನು ಘಟಕದ ಸಂಚಾಲಕರೊಬ್ಬರು ಹುನ್ನಾರ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ. ಅದರ ಬಗ್ಗೆ ತಕರಾರು ತೆಗೆದಿರುವುದಕ್ಕೆ ಮತ್ತು ಸಿಎಎಸ್ ಮುಂಬಡ್ತಿಗೆ ಲಂಚ ಕೇಳುವುದನ್ನು ಪ್ರಶ್ನಿಸಿದ ನಂತರ ತನ್ನನ್ನು ವಿಶ್ವವಿದ್ಯಾಲಯದಿಂದ ವರ್ಗಾವಣೆಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ವಿಶ್ವವಿದ್ಯಾಲಯದಲ್ಲಿನ ಎಸ್‌ ಸಿ, ಎಸ್‌ ಟಿ, ಒಬಿಸಿ ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಿಂದಲೂ ಪ್ರಾಧ್ಯಾಪಕರು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಪತ್ರ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: 9 ತಿಂಗಳಿಂದ ವೇತನ ಸಿಗದೆ ಸಂಕಷ್ಟದಲ್ಲಿ ಹಂಪಿ ವಿವಿ ನೌಕರರು: ವಿಶೇಷ ವರದಿ

ಸಂಶೋಧನಾ ವಿದ್ಯಾರ್ಥಿಗಳು ಹೇಳುವಂತೆ ಅವರ ವಿದ್ಯಾರ್ಥಿ ವೇತನಕ್ಕೆ ಸಹಿ ನೀಡುವುದಕ್ಕೆ ಕೂಡಾ ಲಂಚ ಪಡೆಯಲಾಗುತ್ತಿದ್ದು, ಅವುಗಳಲ್ಲೂ ಪರ್ಸಂಟೇಜ್ ಕೇಳಲಾಗುತ್ತಿದೆ. ಜೊತೆಗೆ ಏಕಾಏಕಿ ತಮ್ಮ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡುವುದನ್ನು ಕೂಡಾ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

“ಖರೀದಿ ಮತ್ತು ಇತರೆ ಹಣಕಾಸಿನ ವ್ಯವಹಾರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಪ್ರಸಾರಾಂಗದ ಪ್ರಕಟಣೆಗಳು ನಿಂತು ಹೋಗಿದೆ. ಜೊತೆಗೆ ವಿವಿಯ ಭೂಮಿಯನ್ನೂ ಒತ್ತುವರಿ ಮಾಡಲಾಗುತ್ತಿದೆ. ಡಿ.ಲಿಟ್‌ ಪದವಿಗಳನ್ನು ಹಣಕ್ಕಾಗಿ ಮಾರಾಟ ಮಾಡಲಾಗುತ್ತಿದೆ” ಎಂದು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಆರೋಪಿಸಿದ್ದಾರೆ.

ಈ ಎಲ್ಲಾ ವಿವಾದಗಳ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಸ.ಚಿ. ರಮೇಶ ಅವರು, “ಪ್ರಾಧ್ಯಾಪಕರ ನಿವೃತ್ತಿ ಪಿಂಚಣಿ ನೀಡಲು ಸರ್ಕಾರದಿಂದ ಅನುದಾನ ಬಂದಿಲ್ಲ, ಹಾಗಾಗಿ ಅವುಗಳನ್ನು ನೀಡಿಲ್ಲ. ಅನುದಾನದ ಕುರಿತು ಸರ್ಕಾರಕ್ಕೆ ಹತ್ತಾರು ಬಾರಿ ಪತ್ರ ಬರೆದಿದ್ದೇನೆ. ಉಳಿದಂತೆ ಲಂಚ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಲಾಗುತ್ತಿದೆ. ಮಾಡುತ್ತಿರುವ ಆರೋಪಗಳಿಗೆ ಸರಿಯಾದ ಸಾಕ್ಷಿ, ಆಧಾರಗಳನ್ನು ಕೊಟ್ಟರೆ ತಪ್ಪಿತಸ್ಥ ನಾನೇ ಆದರೂ ನನಗೆ ಶಿಕ್ಷೆ ಆಗಲಿ. ಈ ಆರೋಪಗಳ ಬಗ್ಗೆ ಈಗಾಗಲೇ ವಿದ್ಯಾಲಯದ ಸಿಂಡಿಕೇಟ್‌ಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಹಣಕಾಸು ಅಧಿಕಾರಿ ರಮೇಶ್ ನಾಯಕ್ ಮಾತನಾಡಿ, “ಪಿಂಚಣಿ ಯಾರಿಗೂ ನಿಂತಿಲ್ಲ, ಕೊಡಲಾಗುತ್ತಿದೆ. ಮಹಾಲೆಕ್ಕಪಾಲರು ನೇಮಕಾತಿ ಸಮಸ್ಯೆಗಳನ್ನು ಮುಂದಿಟ್ಟು ಇಬ್ಬರದು ತಡೆ ಹಿಡಿದಿದ್ದಾರೆ. ಇನ್ನು ಪಿಂಚಣಿ ಸೌಲಭ್ಯಗಳು ಟೆಕ್ನಿಕಲ್ ಸಮಸ್ಯೆಯಿಂದ ಉಳಿದುಕೊಂಡಿವೆ. ಕೆಲವರು 7ನೇ ವೇತನ ಆಯೋಗದ ಪ್ರಕಾರ ರಜೆಗಳಿಕೆ ಕೇಳುತ್ತಿದ್ದಾರೆ. ಆದರೆ ಅದಕ್ಕೆ ಪಿಂಚಣಿ ನಿಯಮಗಳು ವಿರುದ್ಧವಾಗಿವೆ. ಇನ್ನು ಕೆಲವರಿಗೆ ತಾವು ನಿವೃತ್ತರಾದ ವಿವಿಯಲ್ಲಿ ಗಳಿಕೆ ರಜೆ ತೆಗೆದುಕೊಳ್ಳಬೇಕು. ನಾವು ಇಲ್ಲಿ ಕೊಡಲು ಸಾಧ್ಯವಿಲ್ಲ. ಈ ರೀತಿಯಾಗಿ ಸಮಸ್ಯೆಗಳಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....