Homeಕರ್ನಾಟಕಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು ಉಪಕುಲಪತಿ 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಸಹ-ಪ್ರಾಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿಯ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಕೋಟ್ಯಾಂತರ ರೂ ಬಾಕಿಯಿಟ್ಟಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಭಡ್ತಿ ನೀಡಲು ಲಂಚ, ಪಿಂಚಣಿಯಿಂದ ಕಮೀಷನ್‌ ಹಾಗೂ ಬೇಕಾಬಿಟ್ಟಿ ನೇಮಕಾತಿ ನಡೆಸುತ್ತಿದ್ದಾರೆ ಎಂದು ಅಲ್ಲಿನ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಕೂಡಾ ಆರೋಪಿಸಿದ್ದಾರೆ.

“ಕನ್ನಡ ವಿಶ್ವವಿದ್ಯಾಲಯ ಹಂಪಿ” ರಾಜ್ಯದ ಹಂಪಿಯಲ್ಲಿರುವ ಸಂಶೋಧನಾ ಆಧಾರಿತ ಸಾರ್ವಜನಿಕ ವಿಶ್ವವಿದ್ಯಾಲಯವಾಗಿದೆ. ಇದನ್ನು 1991 ರಲ್ಲಿ ಕರ್ನಾಟಕ ಸರ್ಕಾರವು ಕನ್ನಡ ವಿಶ್ವವಿದ್ಯಾಲಯ ಕಾಯಿದೆ-1991 ಮೂಲಕ ಕನ್ನಡ ಭಾಷೆಯನ್ನು ಅಭಿವೃದ್ಧಿಪಡಿಸುವ ಮತ್ತು ಕರ್ನಾಟಕದ ಜಾನಪದ ಸಾಹಿತ್ಯ, ಸಂಪ್ರದಾಯಗಳು, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಅಲ್ಲಿಂದ ಇತ್ತೀಚೆಗಿನವರೆಗೂ ವಿದ್ಯಾಲಯವು ಹಲವಾರು ಗಮನಾರ್ಹ ಸಂಶೋಧನೆಗಳನ್ನು, ಕೆಲಸವನ್ನು ಮಾಡಿದೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ಆದರೆ ಇತ್ತೀಚೆಗಿನ ವರ್ಷಗಳಲ್ಲಿ ವಿಶ್ವವಿದ್ಯಾಲಯ ಪ್ರಕಟಿಸುತ್ತಿದ್ದ ಪ್ರಕಟಣೆಗಳು ನಿಂತು ಹೋಗಿದೆ ಎಂದು ವಿದ್ಯಾಲಯದ ಅಧ್ಯಾಪಕರ ಸಂಘ ಆರೋಪಿಸಿದೆ. ಜೊತೆಗೆ ನ್ಯಾಕ್‌ ಮಾನ್ಯತೆಯಲ್ಲಿ ‘ಎ’  ಶ್ರೇಣಿಯಲ್ಲಿದ್ದ ವಿಶ್ವವಿದ್ಯಾಲಯ ಈಗ ‘ಬಿ’ ಶ್ರೇಣಿಗೆ ತಲುಪಿದ್ದು, ದೂರಶಿಕ್ಷಣ ನಿರ್ದೇಶನಾಲಯವು ಮಾನ್ಯತೆ ಕಳೆದುಕೊಂಡಿದೆ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ.

ಜೊತೆಗೆ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರ ಪಿಂಚಣಿ ಸೇರಿದಂತೆ ಕೋಟ್ಯಾಂತರ ರೂಗಳ ಸವಲತ್ತನ್ನು ಸಂದಾಯ ಮಾಡಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕರೇ ಆರೋಪಿಸಿದ್ದು ರಾಜ್ಯಪಾಲರಿಗೆ ಪತ್ರವನ್ನೂ ಬರೆದಿದ್ದಾರೆ.

ಇಷ್ಟೇ ಅಲ್ಲದೆ, ವಿದ್ಯಾಲಯದ ಸಹ-ಪ್ರಾಧ್ಯಾಪಕರಾಗಿರುವ ಡಾ. ಎಂ. ಮಲ್ಲಿಕಾರ್ಜುನಗೌಡ ಅವರು ಕುಲಪತಿಯ ಸ.ಚಿ. ರಮೇಶ ಅವರ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಕುಲಪತಿ ರಮೇಶ್ ಅವರು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇಷ್ಟೇ ಅಲ್ಲದೆ, ನಿಯಮಗಳನ್ನು ಪಾಲಿಸದೆ, ಮೀಸಲಾತಿಯನ್ನು ಉಲ್ಲಂಘಿಸಿ ಒಂದೇ ಜಾತಿಗೆ ಸೇರಿದ ಅಭ್ಯರ್ಥಿಗಳನ್ನು ನೇಮಕಗೊಳಸಲು ವಿಸಿ ಮತ್ತು ಕಾನೂನು ಘಟಕದ ಸಂಚಾಲಕರೊಬ್ಬರು ಹುನ್ನಾರ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ. ಅದರ ಬಗ್ಗೆ ತಕರಾರು ತೆಗೆದಿರುವುದಕ್ಕೆ ಮತ್ತು ಸಿಎಎಸ್ ಮುಂಬಡ್ತಿಗೆ ಲಂಚ ಕೇಳುವುದನ್ನು ಪ್ರಶ್ನಿಸಿದ ನಂತರ ತನ್ನನ್ನು ವಿಶ್ವವಿದ್ಯಾಲಯದಿಂದ ವರ್ಗಾವಣೆಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ವಿಶ್ವವಿದ್ಯಾಲಯದಲ್ಲಿನ ಎಸ್‌ ಸಿ, ಎಸ್‌ ಟಿ, ಒಬಿಸಿ ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಿಂದಲೂ ಪ್ರಾಧ್ಯಾಪಕರು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಪತ್ರ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: 9 ತಿಂಗಳಿಂದ ವೇತನ ಸಿಗದೆ ಸಂಕಷ್ಟದಲ್ಲಿ ಹಂಪಿ ವಿವಿ ನೌಕರರು: ವಿಶೇಷ ವರದಿ

ಸಂಶೋಧನಾ ವಿದ್ಯಾರ್ಥಿಗಳು ಹೇಳುವಂತೆ ಅವರ ವಿದ್ಯಾರ್ಥಿ ವೇತನಕ್ಕೆ ಸಹಿ ನೀಡುವುದಕ್ಕೆ ಕೂಡಾ ಲಂಚ ಪಡೆಯಲಾಗುತ್ತಿದ್ದು, ಅವುಗಳಲ್ಲೂ ಪರ್ಸಂಟೇಜ್ ಕೇಳಲಾಗುತ್ತಿದೆ. ಜೊತೆಗೆ ಏಕಾಏಕಿ ತಮ್ಮ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡುವುದನ್ನು ಕೂಡಾ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

“ಖರೀದಿ ಮತ್ತು ಇತರೆ ಹಣಕಾಸಿನ ವ್ಯವಹಾರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಪ್ರಸಾರಾಂಗದ ಪ್ರಕಟಣೆಗಳು ನಿಂತು ಹೋಗಿದೆ. ಜೊತೆಗೆ ವಿವಿಯ ಭೂಮಿಯನ್ನೂ ಒತ್ತುವರಿ ಮಾಡಲಾಗುತ್ತಿದೆ. ಡಿ.ಲಿಟ್‌ ಪದವಿಗಳನ್ನು ಹಣಕ್ಕಾಗಿ ಮಾರಾಟ ಮಾಡಲಾಗುತ್ತಿದೆ” ಎಂದು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಆರೋಪಿಸಿದ್ದಾರೆ.

ಈ ಎಲ್ಲಾ ವಿವಾದಗಳ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಸ.ಚಿ. ರಮೇಶ ಅವರು, “ಪ್ರಾಧ್ಯಾಪಕರ ನಿವೃತ್ತಿ ಪಿಂಚಣಿ ನೀಡಲು ಸರ್ಕಾರದಿಂದ ಅನುದಾನ ಬಂದಿಲ್ಲ, ಹಾಗಾಗಿ ಅವುಗಳನ್ನು ನೀಡಿಲ್ಲ. ಅನುದಾನದ ಕುರಿತು ಸರ್ಕಾರಕ್ಕೆ ಹತ್ತಾರು ಬಾರಿ ಪತ್ರ ಬರೆದಿದ್ದೇನೆ. ಉಳಿದಂತೆ ಲಂಚ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಲಾಗುತ್ತಿದೆ. ಮಾಡುತ್ತಿರುವ ಆರೋಪಗಳಿಗೆ ಸರಿಯಾದ ಸಾಕ್ಷಿ, ಆಧಾರಗಳನ್ನು ಕೊಟ್ಟರೆ ತಪ್ಪಿತಸ್ಥ ನಾನೇ ಆದರೂ ನನಗೆ ಶಿಕ್ಷೆ ಆಗಲಿ. ಈ ಆರೋಪಗಳ ಬಗ್ಗೆ ಈಗಾಗಲೇ ವಿದ್ಯಾಲಯದ ಸಿಂಡಿಕೇಟ್‌ಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಹಣಕಾಸು ಅಧಿಕಾರಿ ರಮೇಶ್ ನಾಯಕ್ ಮಾತನಾಡಿ, “ಪಿಂಚಣಿ ಯಾರಿಗೂ ನಿಂತಿಲ್ಲ, ಕೊಡಲಾಗುತ್ತಿದೆ. ಮಹಾಲೆಕ್ಕಪಾಲರು ನೇಮಕಾತಿ ಸಮಸ್ಯೆಗಳನ್ನು ಮುಂದಿಟ್ಟು ಇಬ್ಬರದು ತಡೆ ಹಿಡಿದಿದ್ದಾರೆ. ಇನ್ನು ಪಿಂಚಣಿ ಸೌಲಭ್ಯಗಳು ಟೆಕ್ನಿಕಲ್ ಸಮಸ್ಯೆಯಿಂದ ಉಳಿದುಕೊಂಡಿವೆ. ಕೆಲವರು 7ನೇ ವೇತನ ಆಯೋಗದ ಪ್ರಕಾರ ರಜೆಗಳಿಕೆ ಕೇಳುತ್ತಿದ್ದಾರೆ. ಆದರೆ ಅದಕ್ಕೆ ಪಿಂಚಣಿ ನಿಯಮಗಳು ವಿರುದ್ಧವಾಗಿವೆ. ಇನ್ನು ಕೆಲವರಿಗೆ ತಾವು ನಿವೃತ್ತರಾದ ವಿವಿಯಲ್ಲಿ ಗಳಿಕೆ ರಜೆ ತೆಗೆದುಕೊಳ್ಳಬೇಕು. ನಾವು ಇಲ್ಲಿ ಕೊಡಲು ಸಾಧ್ಯವಿಲ್ಲ. ಈ ರೀತಿಯಾಗಿ ಸಮಸ್ಯೆಗಳಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...