Homeಕರ್ನಾಟಕಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು ಉಪಕುಲಪತಿ 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಸಹ-ಪ್ರಾಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿಯ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಕೋಟ್ಯಾಂತರ ರೂ ಬಾಕಿಯಿಟ್ಟಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಭಡ್ತಿ ನೀಡಲು ಲಂಚ, ಪಿಂಚಣಿಯಿಂದ ಕಮೀಷನ್‌ ಹಾಗೂ ಬೇಕಾಬಿಟ್ಟಿ ನೇಮಕಾತಿ ನಡೆಸುತ್ತಿದ್ದಾರೆ ಎಂದು ಅಲ್ಲಿನ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಕೂಡಾ ಆರೋಪಿಸಿದ್ದಾರೆ.

“ಕನ್ನಡ ವಿಶ್ವವಿದ್ಯಾಲಯ ಹಂಪಿ” ರಾಜ್ಯದ ಹಂಪಿಯಲ್ಲಿರುವ ಸಂಶೋಧನಾ ಆಧಾರಿತ ಸಾರ್ವಜನಿಕ ವಿಶ್ವವಿದ್ಯಾಲಯವಾಗಿದೆ. ಇದನ್ನು 1991 ರಲ್ಲಿ ಕರ್ನಾಟಕ ಸರ್ಕಾರವು ಕನ್ನಡ ವಿಶ್ವವಿದ್ಯಾಲಯ ಕಾಯಿದೆ-1991 ಮೂಲಕ ಕನ್ನಡ ಭಾಷೆಯನ್ನು ಅಭಿವೃದ್ಧಿಪಡಿಸುವ ಮತ್ತು ಕರ್ನಾಟಕದ ಜಾನಪದ ಸಾಹಿತ್ಯ, ಸಂಪ್ರದಾಯಗಳು, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಅಲ್ಲಿಂದ ಇತ್ತೀಚೆಗಿನವರೆಗೂ ವಿದ್ಯಾಲಯವು ಹಲವಾರು ಗಮನಾರ್ಹ ಸಂಶೋಧನೆಗಳನ್ನು, ಕೆಲಸವನ್ನು ಮಾಡಿದೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ಆದರೆ ಇತ್ತೀಚೆಗಿನ ವರ್ಷಗಳಲ್ಲಿ ವಿಶ್ವವಿದ್ಯಾಲಯ ಪ್ರಕಟಿಸುತ್ತಿದ್ದ ಪ್ರಕಟಣೆಗಳು ನಿಂತು ಹೋಗಿದೆ ಎಂದು ವಿದ್ಯಾಲಯದ ಅಧ್ಯಾಪಕರ ಸಂಘ ಆರೋಪಿಸಿದೆ. ಜೊತೆಗೆ ನ್ಯಾಕ್‌ ಮಾನ್ಯತೆಯಲ್ಲಿ ‘ಎ’  ಶ್ರೇಣಿಯಲ್ಲಿದ್ದ ವಿಶ್ವವಿದ್ಯಾಲಯ ಈಗ ‘ಬಿ’ ಶ್ರೇಣಿಗೆ ತಲುಪಿದ್ದು, ದೂರಶಿಕ್ಷಣ ನಿರ್ದೇಶನಾಲಯವು ಮಾನ್ಯತೆ ಕಳೆದುಕೊಂಡಿದೆ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ.

ಜೊತೆಗೆ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರ ಪಿಂಚಣಿ ಸೇರಿದಂತೆ ಕೋಟ್ಯಾಂತರ ರೂಗಳ ಸವಲತ್ತನ್ನು ಸಂದಾಯ ಮಾಡಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕರೇ ಆರೋಪಿಸಿದ್ದು ರಾಜ್ಯಪಾಲರಿಗೆ ಪತ್ರವನ್ನೂ ಬರೆದಿದ್ದಾರೆ.

ಇಷ್ಟೇ ಅಲ್ಲದೆ, ವಿದ್ಯಾಲಯದ ಸಹ-ಪ್ರಾಧ್ಯಾಪಕರಾಗಿರುವ ಡಾ. ಎಂ. ಮಲ್ಲಿಕಾರ್ಜುನಗೌಡ ಅವರು ಕುಲಪತಿಯ ಸ.ಚಿ. ರಮೇಶ ಅವರ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಕುಲಪತಿ ರಮೇಶ್ ಅವರು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇಷ್ಟೇ ಅಲ್ಲದೆ, ನಿಯಮಗಳನ್ನು ಪಾಲಿಸದೆ, ಮೀಸಲಾತಿಯನ್ನು ಉಲ್ಲಂಘಿಸಿ ಒಂದೇ ಜಾತಿಗೆ ಸೇರಿದ ಅಭ್ಯರ್ಥಿಗಳನ್ನು ನೇಮಕಗೊಳಸಲು ವಿಸಿ ಮತ್ತು ಕಾನೂನು ಘಟಕದ ಸಂಚಾಲಕರೊಬ್ಬರು ಹುನ್ನಾರ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ. ಅದರ ಬಗ್ಗೆ ತಕರಾರು ತೆಗೆದಿರುವುದಕ್ಕೆ ಮತ್ತು ಸಿಎಎಸ್ ಮುಂಬಡ್ತಿಗೆ ಲಂಚ ಕೇಳುವುದನ್ನು ಪ್ರಶ್ನಿಸಿದ ನಂತರ ತನ್ನನ್ನು ವಿಶ್ವವಿದ್ಯಾಲಯದಿಂದ ವರ್ಗಾವಣೆಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ವಿಶ್ವವಿದ್ಯಾಲಯದಲ್ಲಿನ ಎಸ್‌ ಸಿ, ಎಸ್‌ ಟಿ, ಒಬಿಸಿ ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಿಂದಲೂ ಪ್ರಾಧ್ಯಾಪಕರು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಪತ್ರ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: 9 ತಿಂಗಳಿಂದ ವೇತನ ಸಿಗದೆ ಸಂಕಷ್ಟದಲ್ಲಿ ಹಂಪಿ ವಿವಿ ನೌಕರರು: ವಿಶೇಷ ವರದಿ

ಸಂಶೋಧನಾ ವಿದ್ಯಾರ್ಥಿಗಳು ಹೇಳುವಂತೆ ಅವರ ವಿದ್ಯಾರ್ಥಿ ವೇತನಕ್ಕೆ ಸಹಿ ನೀಡುವುದಕ್ಕೆ ಕೂಡಾ ಲಂಚ ಪಡೆಯಲಾಗುತ್ತಿದ್ದು, ಅವುಗಳಲ್ಲೂ ಪರ್ಸಂಟೇಜ್ ಕೇಳಲಾಗುತ್ತಿದೆ. ಜೊತೆಗೆ ಏಕಾಏಕಿ ತಮ್ಮ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡುವುದನ್ನು ಕೂಡಾ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

“ಖರೀದಿ ಮತ್ತು ಇತರೆ ಹಣಕಾಸಿನ ವ್ಯವಹಾರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಪ್ರಸಾರಾಂಗದ ಪ್ರಕಟಣೆಗಳು ನಿಂತು ಹೋಗಿದೆ. ಜೊತೆಗೆ ವಿವಿಯ ಭೂಮಿಯನ್ನೂ ಒತ್ತುವರಿ ಮಾಡಲಾಗುತ್ತಿದೆ. ಡಿ.ಲಿಟ್‌ ಪದವಿಗಳನ್ನು ಹಣಕ್ಕಾಗಿ ಮಾರಾಟ ಮಾಡಲಾಗುತ್ತಿದೆ” ಎಂದು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಆರೋಪಿಸಿದ್ದಾರೆ.

ಈ ಎಲ್ಲಾ ವಿವಾದಗಳ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಸ.ಚಿ. ರಮೇಶ ಅವರು, “ಪ್ರಾಧ್ಯಾಪಕರ ನಿವೃತ್ತಿ ಪಿಂಚಣಿ ನೀಡಲು ಸರ್ಕಾರದಿಂದ ಅನುದಾನ ಬಂದಿಲ್ಲ, ಹಾಗಾಗಿ ಅವುಗಳನ್ನು ನೀಡಿಲ್ಲ. ಅನುದಾನದ ಕುರಿತು ಸರ್ಕಾರಕ್ಕೆ ಹತ್ತಾರು ಬಾರಿ ಪತ್ರ ಬರೆದಿದ್ದೇನೆ. ಉಳಿದಂತೆ ಲಂಚ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಲಾಗುತ್ತಿದೆ. ಮಾಡುತ್ತಿರುವ ಆರೋಪಗಳಿಗೆ ಸರಿಯಾದ ಸಾಕ್ಷಿ, ಆಧಾರಗಳನ್ನು ಕೊಟ್ಟರೆ ತಪ್ಪಿತಸ್ಥ ನಾನೇ ಆದರೂ ನನಗೆ ಶಿಕ್ಷೆ ಆಗಲಿ. ಈ ಆರೋಪಗಳ ಬಗ್ಗೆ ಈಗಾಗಲೇ ವಿದ್ಯಾಲಯದ ಸಿಂಡಿಕೇಟ್‌ಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಹಣಕಾಸು ಅಧಿಕಾರಿ ರಮೇಶ್ ನಾಯಕ್ ಮಾತನಾಡಿ, “ಪಿಂಚಣಿ ಯಾರಿಗೂ ನಿಂತಿಲ್ಲ, ಕೊಡಲಾಗುತ್ತಿದೆ. ಮಹಾಲೆಕ್ಕಪಾಲರು ನೇಮಕಾತಿ ಸಮಸ್ಯೆಗಳನ್ನು ಮುಂದಿಟ್ಟು ಇಬ್ಬರದು ತಡೆ ಹಿಡಿದಿದ್ದಾರೆ. ಇನ್ನು ಪಿಂಚಣಿ ಸೌಲಭ್ಯಗಳು ಟೆಕ್ನಿಕಲ್ ಸಮಸ್ಯೆಯಿಂದ ಉಳಿದುಕೊಂಡಿವೆ. ಕೆಲವರು 7ನೇ ವೇತನ ಆಯೋಗದ ಪ್ರಕಾರ ರಜೆಗಳಿಕೆ ಕೇಳುತ್ತಿದ್ದಾರೆ. ಆದರೆ ಅದಕ್ಕೆ ಪಿಂಚಣಿ ನಿಯಮಗಳು ವಿರುದ್ಧವಾಗಿವೆ. ಇನ್ನು ಕೆಲವರಿಗೆ ತಾವು ನಿವೃತ್ತರಾದ ವಿವಿಯಲ್ಲಿ ಗಳಿಕೆ ರಜೆ ತೆಗೆದುಕೊಳ್ಳಬೇಕು. ನಾವು ಇಲ್ಲಿ ಕೊಡಲು ಸಾಧ್ಯವಿಲ್ಲ. ಈ ರೀತಿಯಾಗಿ ಸಮಸ್ಯೆಗಳಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...