Homeಕರ್ನಾಟಕಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು ಉಪಕುಲಪತಿ 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಸಹ-ಪ್ರಾಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿಯ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಕೋಟ್ಯಾಂತರ ರೂ ಬಾಕಿಯಿಟ್ಟಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಭಡ್ತಿ ನೀಡಲು ಲಂಚ, ಪಿಂಚಣಿಯಿಂದ ಕಮೀಷನ್‌ ಹಾಗೂ ಬೇಕಾಬಿಟ್ಟಿ ನೇಮಕಾತಿ ನಡೆಸುತ್ತಿದ್ದಾರೆ ಎಂದು ಅಲ್ಲಿನ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಕೂಡಾ ಆರೋಪಿಸಿದ್ದಾರೆ.

“ಕನ್ನಡ ವಿಶ್ವವಿದ್ಯಾಲಯ ಹಂಪಿ” ರಾಜ್ಯದ ಹಂಪಿಯಲ್ಲಿರುವ ಸಂಶೋಧನಾ ಆಧಾರಿತ ಸಾರ್ವಜನಿಕ ವಿಶ್ವವಿದ್ಯಾಲಯವಾಗಿದೆ. ಇದನ್ನು 1991 ರಲ್ಲಿ ಕರ್ನಾಟಕ ಸರ್ಕಾರವು ಕನ್ನಡ ವಿಶ್ವವಿದ್ಯಾಲಯ ಕಾಯಿದೆ-1991 ಮೂಲಕ ಕನ್ನಡ ಭಾಷೆಯನ್ನು ಅಭಿವೃದ್ಧಿಪಡಿಸುವ ಮತ್ತು ಕರ್ನಾಟಕದ ಜಾನಪದ ಸಾಹಿತ್ಯ, ಸಂಪ್ರದಾಯಗಳು, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಅಲ್ಲಿಂದ ಇತ್ತೀಚೆಗಿನವರೆಗೂ ವಿದ್ಯಾಲಯವು ಹಲವಾರು ಗಮನಾರ್ಹ ಸಂಶೋಧನೆಗಳನ್ನು, ಕೆಲಸವನ್ನು ಮಾಡಿದೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ಆದರೆ ಇತ್ತೀಚೆಗಿನ ವರ್ಷಗಳಲ್ಲಿ ವಿಶ್ವವಿದ್ಯಾಲಯ ಪ್ರಕಟಿಸುತ್ತಿದ್ದ ಪ್ರಕಟಣೆಗಳು ನಿಂತು ಹೋಗಿದೆ ಎಂದು ವಿದ್ಯಾಲಯದ ಅಧ್ಯಾಪಕರ ಸಂಘ ಆರೋಪಿಸಿದೆ. ಜೊತೆಗೆ ನ್ಯಾಕ್‌ ಮಾನ್ಯತೆಯಲ್ಲಿ ‘ಎ’  ಶ್ರೇಣಿಯಲ್ಲಿದ್ದ ವಿಶ್ವವಿದ್ಯಾಲಯ ಈಗ ‘ಬಿ’ ಶ್ರೇಣಿಗೆ ತಲುಪಿದ್ದು, ದೂರಶಿಕ್ಷಣ ನಿರ್ದೇಶನಾಲಯವು ಮಾನ್ಯತೆ ಕಳೆದುಕೊಂಡಿದೆ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ.

ಜೊತೆಗೆ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರ ಪಿಂಚಣಿ ಸೇರಿದಂತೆ ಕೋಟ್ಯಾಂತರ ರೂಗಳ ಸವಲತ್ತನ್ನು ಸಂದಾಯ ಮಾಡಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕರೇ ಆರೋಪಿಸಿದ್ದು ರಾಜ್ಯಪಾಲರಿಗೆ ಪತ್ರವನ್ನೂ ಬರೆದಿದ್ದಾರೆ.

ಇಷ್ಟೇ ಅಲ್ಲದೆ, ವಿದ್ಯಾಲಯದ ಸಹ-ಪ್ರಾಧ್ಯಾಪಕರಾಗಿರುವ ಡಾ. ಎಂ. ಮಲ್ಲಿಕಾರ್ಜುನಗೌಡ ಅವರು ಕುಲಪತಿಯ ಸ.ಚಿ. ರಮೇಶ ಅವರ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಕುಲಪತಿ ರಮೇಶ್ ಅವರು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇಷ್ಟೇ ಅಲ್ಲದೆ, ನಿಯಮಗಳನ್ನು ಪಾಲಿಸದೆ, ಮೀಸಲಾತಿಯನ್ನು ಉಲ್ಲಂಘಿಸಿ ಒಂದೇ ಜಾತಿಗೆ ಸೇರಿದ ಅಭ್ಯರ್ಥಿಗಳನ್ನು ನೇಮಕಗೊಳಸಲು ವಿಸಿ ಮತ್ತು ಕಾನೂನು ಘಟಕದ ಸಂಚಾಲಕರೊಬ್ಬರು ಹುನ್ನಾರ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ. ಅದರ ಬಗ್ಗೆ ತಕರಾರು ತೆಗೆದಿರುವುದಕ್ಕೆ ಮತ್ತು ಸಿಎಎಸ್ ಮುಂಬಡ್ತಿಗೆ ಲಂಚ ಕೇಳುವುದನ್ನು ಪ್ರಶ್ನಿಸಿದ ನಂತರ ತನ್ನನ್ನು ವಿಶ್ವವಿದ್ಯಾಲಯದಿಂದ ವರ್ಗಾವಣೆಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ವಿಶ್ವವಿದ್ಯಾಲಯದಲ್ಲಿನ ಎಸ್‌ ಸಿ, ಎಸ್‌ ಟಿ, ಒಬಿಸಿ ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಿಂದಲೂ ಪ್ರಾಧ್ಯಾಪಕರು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಪತ್ರ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: 9 ತಿಂಗಳಿಂದ ವೇತನ ಸಿಗದೆ ಸಂಕಷ್ಟದಲ್ಲಿ ಹಂಪಿ ವಿವಿ ನೌಕರರು: ವಿಶೇಷ ವರದಿ

ಸಂಶೋಧನಾ ವಿದ್ಯಾರ್ಥಿಗಳು ಹೇಳುವಂತೆ ಅವರ ವಿದ್ಯಾರ್ಥಿ ವೇತನಕ್ಕೆ ಸಹಿ ನೀಡುವುದಕ್ಕೆ ಕೂಡಾ ಲಂಚ ಪಡೆಯಲಾಗುತ್ತಿದ್ದು, ಅವುಗಳಲ್ಲೂ ಪರ್ಸಂಟೇಜ್ ಕೇಳಲಾಗುತ್ತಿದೆ. ಜೊತೆಗೆ ಏಕಾಏಕಿ ತಮ್ಮ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡುವುದನ್ನು ಕೂಡಾ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

“ಖರೀದಿ ಮತ್ತು ಇತರೆ ಹಣಕಾಸಿನ ವ್ಯವಹಾರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಪ್ರಸಾರಾಂಗದ ಪ್ರಕಟಣೆಗಳು ನಿಂತು ಹೋಗಿದೆ. ಜೊತೆಗೆ ವಿವಿಯ ಭೂಮಿಯನ್ನೂ ಒತ್ತುವರಿ ಮಾಡಲಾಗುತ್ತಿದೆ. ಡಿ.ಲಿಟ್‌ ಪದವಿಗಳನ್ನು ಹಣಕ್ಕಾಗಿ ಮಾರಾಟ ಮಾಡಲಾಗುತ್ತಿದೆ” ಎಂದು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಆರೋಪಿಸಿದ್ದಾರೆ.

ಈ ಎಲ್ಲಾ ವಿವಾದಗಳ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಸ.ಚಿ. ರಮೇಶ ಅವರು, “ಪ್ರಾಧ್ಯಾಪಕರ ನಿವೃತ್ತಿ ಪಿಂಚಣಿ ನೀಡಲು ಸರ್ಕಾರದಿಂದ ಅನುದಾನ ಬಂದಿಲ್ಲ, ಹಾಗಾಗಿ ಅವುಗಳನ್ನು ನೀಡಿಲ್ಲ. ಅನುದಾನದ ಕುರಿತು ಸರ್ಕಾರಕ್ಕೆ ಹತ್ತಾರು ಬಾರಿ ಪತ್ರ ಬರೆದಿದ್ದೇನೆ. ಉಳಿದಂತೆ ಲಂಚ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಲಾಗುತ್ತಿದೆ. ಮಾಡುತ್ತಿರುವ ಆರೋಪಗಳಿಗೆ ಸರಿಯಾದ ಸಾಕ್ಷಿ, ಆಧಾರಗಳನ್ನು ಕೊಟ್ಟರೆ ತಪ್ಪಿತಸ್ಥ ನಾನೇ ಆದರೂ ನನಗೆ ಶಿಕ್ಷೆ ಆಗಲಿ. ಈ ಆರೋಪಗಳ ಬಗ್ಗೆ ಈಗಾಗಲೇ ವಿದ್ಯಾಲಯದ ಸಿಂಡಿಕೇಟ್‌ಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಹಣಕಾಸು ಅಧಿಕಾರಿ ರಮೇಶ್ ನಾಯಕ್ ಮಾತನಾಡಿ, “ಪಿಂಚಣಿ ಯಾರಿಗೂ ನಿಂತಿಲ್ಲ, ಕೊಡಲಾಗುತ್ತಿದೆ. ಮಹಾಲೆಕ್ಕಪಾಲರು ನೇಮಕಾತಿ ಸಮಸ್ಯೆಗಳನ್ನು ಮುಂದಿಟ್ಟು ಇಬ್ಬರದು ತಡೆ ಹಿಡಿದಿದ್ದಾರೆ. ಇನ್ನು ಪಿಂಚಣಿ ಸೌಲಭ್ಯಗಳು ಟೆಕ್ನಿಕಲ್ ಸಮಸ್ಯೆಯಿಂದ ಉಳಿದುಕೊಂಡಿವೆ. ಕೆಲವರು 7ನೇ ವೇತನ ಆಯೋಗದ ಪ್ರಕಾರ ರಜೆಗಳಿಕೆ ಕೇಳುತ್ತಿದ್ದಾರೆ. ಆದರೆ ಅದಕ್ಕೆ ಪಿಂಚಣಿ ನಿಯಮಗಳು ವಿರುದ್ಧವಾಗಿವೆ. ಇನ್ನು ಕೆಲವರಿಗೆ ತಾವು ನಿವೃತ್ತರಾದ ವಿವಿಯಲ್ಲಿ ಗಳಿಕೆ ರಜೆ ತೆಗೆದುಕೊಳ್ಳಬೇಕು. ನಾವು ಇಲ್ಲಿ ಕೊಡಲು ಸಾಧ್ಯವಿಲ್ಲ. ಈ ರೀತಿಯಾಗಿ ಸಮಸ್ಯೆಗಳಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...