Homeಕರ್ನಾಟಕಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ನಾಡು, ನುಡಿ, ಸಂಶೋಧನೆಯ ವಿಷಯದಲ್ಲಿ ತನ್ನದೇ ಆದ ಘನತೆಯನ್ನು ಹೊಂದಿರುವ ಹಂಪಿ ವಿಶ್ವವಿದ್ಯಾನಿಲಯ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದೆ. ವಿವಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತವೇ ಇವೆ. ಈ ನಿಟ್ಟಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

“ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯನವರ ಪತ್ರ:

ಮಾನ್ಯ ಬಸವರಾಜ ಬೊಮ್ಮಾಯಿಯವರೇ,

1991ರಲ್ಲಿ ಹಂಪಿಯಲ್ಲಿರುವ ‘ಕನ್ನಡ ವಿಶ್ವವಿದ್ಯಾಲಯ’ವನ್ನು ವಿಶೇಷ ನಿಯಮಗಳನ್ನು ರೂಪಿಸಿ ಸ್ಥಾಪಿಸಲಾಗಿದೆ. ನಾಡಿನ ಎಲ್ಲ ವಿಶ್ವವಿದ್ಯಾಲಯಗಳು ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಕಲಿಸುವ ಕೆಲಸ ಮಾಡುತ್ತವೆ ಆದರೆ ಹಂಪಿಯಲ್ಲಿರುವ ಈ ವಿಶ್ವ ವಿದ್ಯಾಲಯವನ್ನು “ಜ್ಞಾನ ಸೃಷ್ಟಿಯ” ಕೆಲಸ ಮಾಡುವ ವಿಶಿಷ್ಟ ಉದ್ದೇಶದಿಂದ ಸ್ಥಾಪಿಸಲಾಗಿದೆ. 1991ರಿಂದ ಈ ವಿಶ್ವವಿದ್ಯಾಲಯದಲ್ಲಿ ನಾಡಿನ ಅನೇಕ ಧೀಮಂತ ವಿದ್ವಾಂಸರು ಕೆಲಸ ಮಾಡಿದ್ದಾರೆ. ಹಾಗಾಗಿ ಈ ವಿವಿಯಲ್ಲಿ ಅತ್ಯುತ್ತಮ ಕೆಲಸವೂ ಆಗಿದೆ. ವಿಜ್ಞಾನ, ತಾಂತ್ರಿಕ ಶಿಕ್ಷಣವೂ ಸೇರಿದಂತೆ ಅನೇಕ ವಿಷಯಗಳಿಗೆ ಕನ್ನಡದಲ್ಲಿ ಪಠ್ಯ ಪುಸ್ತಕಗಳನ್ನು ರೂಪಿಸುವ ಕೆಲಸವನ್ನೂ ಈ ವಿವಿ ಮಾಡಿದೆ.

ಇಡೀ ದೇಶದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಯ ಗುಣಮಟ್ಟ ಕುಸಿದು ಹೋಗುತ್ತಿದೆ ಎಂಬ ಗಂಭೀರ ಆರೋಪ ವಿದ್ವತ್ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಅಪವಾದವೆಂಬಂತೆ ಕನ್ನಡ ವಿಶ್ವವಿದ್ಯಾಲಯವು ಮೌಲ್ಯಯುತ ಸಂಶೋಧನಾ ಕೆಲಸಗಳನ್ನು ಮಾಡುತ್ತಿದೆ. ಆದರೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯವೂ ಸೇರಿದಂತೆ ನಾಡಿನ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಗುಣಮಟ್ಟದ ನೇಮಕಾತಿಗಳು ನಡೆಯದ ಕಾರಣದಿಂದ ಉತ್ತಮ ವಿದ್ವಾಂಸರುಗಳು, ಬೋಧಕರು ಲಭ್ಯವಾಗುತ್ತಿಲ್ಲ. ಉನ್ನತ ಶಿಕ್ಷಣವು ತನ್ನ ಗುಣಮಟ್ಟವನ್ನು ಕಳೆದುಕೊಂಡರೆ, ನಾಡಿನ ಸಮಸ್ತ ವಿಭಾಗಗಳೂ ಕುಸಿದು ಬೀಳುತ್ತವೆ. ಉನ್ನತ ಶಿಕ್ಷಣ ಸರಿಯಾಗಿದ್ದರೆ ಮಾತ್ರ ಉತ್ತಮ ಪ್ರಾಥಮಿಕ, ಪ್ರೌಢ ಶಿಕ್ಷಣ ಸಿಗಲು ಸಾಧ್ಯ. ಜ್ಞಾನವಂತ, ಸೂಕ್ಷ್ಮ ಮತ್ತು ಮಾನವೀಯ ಸಂವೇದನೆಯ ಸಮಾಜದ ನಿರ್ಮಾಣದಲ್ಲಿ ಉನ್ನತ ಶಿಕ್ಷಣದ ಪಾತ್ರ ಬಹಳ ದೊಡ್ಡದು.


ಇದನ್ನೂ ಓದಿರಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ


ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಭ್ರಷ್ಟಾಚಾರ, ಕಮಿಷನ್ ದಂಧೆ ಮುಂತಾದ ಕೆಟ್ಟ ಕಾರಣಗಳಿಂದ ಸುದ್ಧಿಯಲ್ಲಿದೆ. ತೀವ್ರವಾದ ಹಗರಣಗಳ ಆರೋಪಗಳು ಈ ವಿಶ್ವವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ. ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದೆ. ಅದರಲ್ಲಿ ಮುಖ್ಯವಾಗಿ;

1.ಇತ್ತೀಚೆಗೆ ವಿವಿಯಲ್ಲಿ ಕೆಲವು ಬೋಧಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪತ್ರಿಕೆಗಳ ಪ್ರಕಾರ ಪ್ರತಿ ಹುದ್ದೆಗೆ 50 ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿ, ಹರಾಜು ಮಾಡಲಾಗುತ್ತಿದೆಯೆಂದು ವರದಿ ಮಾಡಲಾಗಿದೆ. ಹಣ ಕೊಟ್ಟವರಿಗೆ ಪರೀಕ್ಷೆಗೆ ಮುನ್ನವೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿದೆಯೆಂಬ ಗಂಭೀರ ಆರೋಪಗಳಿವೆಯೆಂದು ಪತ್ರಿಕೆ ವರದಿ ಮಾಡಿದೆ. ವಿಶ್ವವಿದ್ಯಾಲಯಗಳು ಹುದ್ದೆಗಳನ್ನು ಹರಾಜಿಗಿಟ್ಟರೆ ಬಡತನದ ಹಿನ್ನೆಲೆಗಳಿಂದ ಬರುವ ಪ್ರತಿಭಾವಂತರು ಆಯ್ಕೆಯಾಗಲು ಸಾಧ್ಯವೆ? ಪ್ರತಿಭಾವಂತರು ವಿವಿ ಗಳಲ್ಲಿ ಇಲ್ಲವಾದರೆ ಯಾವ ದೇಶವೂ ಉದ್ಧಾರವಾಗಲು ಸಾಧ್ಯವೆ?

2.ಕನ್ನಡ ವಿವಿಯು ವಿವಿಧ ಹುದ್ದೆಗಳನ್ನು ತುಂಬಿಸಲು ಹೊರಡಿಸಿರುವ ಅಧಿಸೂಚನೆಯಲ್ಲಿ ಮೀಸಲಾತಿ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಜೊತೆಗೆ ಹಿಂದೆ ನೇಮಕವಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ಪ್ರೊಬೆಷನರಿ ಅವಧಿಯನ್ನು ಘೋಷಿಸಲೂ ಕಮಿಷನ್ ನಿಗದಿಗೊಳಿಸಲಾಗಿದೆ ಮತ್ತು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಆದ್ದರಿಂದ ಕೂಡಲೆ ನೇಮಕಾತಿ ಪ್ರಕ್ರಿಯೆಯನ್ನು ನಿಲ್ಲಿಸಿ ಈ ಕುರಿತು ತನಿಖೆ ನಡೆಸಿ‌ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಬೇಕು. ರಾಜ್ಯದಲ್ಲಿರುವ ಪ್ರತಿಭಾವಂತರ ಪಟ್ಟಿಯನ್ನು ವಿಷಯವಾರು ತಯಾರಿಸಿ ಅವರುಗಳನ್ನು ಯುಜಿಸಿ ನಿಯಮಾವಳಿಗಳಂತೆ ವಿಶ್ವವಿದ್ಯಾಲಯಗಳಿಗೆ ಕರೆತರುವ ಕೆಲಸ ಮಾಡಬೇಕು.

3.ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಬಳ ನೀಡಲು, ಪಿಂಚಣಿ ನಿಗದಿಪಡಿಸಲು, ಪಿಂಚಣಿ ಬಿಡುಗಡೆ ಮಾಡಲೂ ಕಮಿಷನ್ ನಿಗಧಿಗೊಳಿಸಲಾಗಿದೆ, ಕಮಿಷನ್ ನೀಡದೆ ಯಾವ ಕಡತಗಳಿಗೂ ಜೀವ ಬರುವುದಿಲ್ಲವೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರುಗಳು ವಿಶ್ವ ವಿದ್ಯಾಲಯದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.


ಇದನ್ನೂ ಓದಿರಿ: ಅಕಾಲಿಕ ಮಳೆಯಿಂದ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟ, ತಕ್ಷಣ ಪರಿಹಾರ ನೀಡಿ: ಸಿದ್ದರಾಮಯ್ಯ


4.ನಿವೃತ್ತರಾದ ಕೆಲವು ಪ್ರೊಫೆಸರುಗಳ ಪಿಂಚಣಿಯನ್ನು ನಿಗದಿಪಡಿಸದೆ ಏಳೆಂಟು ತಿಂಗಳಿಂದ ಅವರು ಜೀವನ ನಿರ್ವವಹಿಸಲಾರದೆ ಒದ್ದಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.

5.ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳೂ ನೀಡುತ್ತಿದ್ದ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು 2-3 ವರ್ಷಗಳಿಂದ ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ, ಕಲಿಕೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳೂ ಕೇಳಿ ಬಂದಿವೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ.

ವಂದನೆಗಳೊಂದಿಗೆ,
ತಮ್ಮ ವಿಶ್ವಾಸಿ,
ಸಿದ್ದರಾಮಯ್ಯ


ಇದನ್ನೂ ಓದಿರಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...