Homeಕರ್ನಾಟಕಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ನಾಡು, ನುಡಿ, ಸಂಶೋಧನೆಯ ವಿಷಯದಲ್ಲಿ ತನ್ನದೇ ಆದ ಘನತೆಯನ್ನು ಹೊಂದಿರುವ ಹಂಪಿ ವಿಶ್ವವಿದ್ಯಾನಿಲಯ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದೆ. ವಿವಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತವೇ ಇವೆ. ಈ ನಿಟ್ಟಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

“ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯನವರ ಪತ್ರ:

ಮಾನ್ಯ ಬಸವರಾಜ ಬೊಮ್ಮಾಯಿಯವರೇ,

1991ರಲ್ಲಿ ಹಂಪಿಯಲ್ಲಿರುವ ‘ಕನ್ನಡ ವಿಶ್ವವಿದ್ಯಾಲಯ’ವನ್ನು ವಿಶೇಷ ನಿಯಮಗಳನ್ನು ರೂಪಿಸಿ ಸ್ಥಾಪಿಸಲಾಗಿದೆ. ನಾಡಿನ ಎಲ್ಲ ವಿಶ್ವವಿದ್ಯಾಲಯಗಳು ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಕಲಿಸುವ ಕೆಲಸ ಮಾಡುತ್ತವೆ ಆದರೆ ಹಂಪಿಯಲ್ಲಿರುವ ಈ ವಿಶ್ವ ವಿದ್ಯಾಲಯವನ್ನು “ಜ್ಞಾನ ಸೃಷ್ಟಿಯ” ಕೆಲಸ ಮಾಡುವ ವಿಶಿಷ್ಟ ಉದ್ದೇಶದಿಂದ ಸ್ಥಾಪಿಸಲಾಗಿದೆ. 1991ರಿಂದ ಈ ವಿಶ್ವವಿದ್ಯಾಲಯದಲ್ಲಿ ನಾಡಿನ ಅನೇಕ ಧೀಮಂತ ವಿದ್ವಾಂಸರು ಕೆಲಸ ಮಾಡಿದ್ದಾರೆ. ಹಾಗಾಗಿ ಈ ವಿವಿಯಲ್ಲಿ ಅತ್ಯುತ್ತಮ ಕೆಲಸವೂ ಆಗಿದೆ. ವಿಜ್ಞಾನ, ತಾಂತ್ರಿಕ ಶಿಕ್ಷಣವೂ ಸೇರಿದಂತೆ ಅನೇಕ ವಿಷಯಗಳಿಗೆ ಕನ್ನಡದಲ್ಲಿ ಪಠ್ಯ ಪುಸ್ತಕಗಳನ್ನು ರೂಪಿಸುವ ಕೆಲಸವನ್ನೂ ಈ ವಿವಿ ಮಾಡಿದೆ.

ಇಡೀ ದೇಶದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಯ ಗುಣಮಟ್ಟ ಕುಸಿದು ಹೋಗುತ್ತಿದೆ ಎಂಬ ಗಂಭೀರ ಆರೋಪ ವಿದ್ವತ್ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಅಪವಾದವೆಂಬಂತೆ ಕನ್ನಡ ವಿಶ್ವವಿದ್ಯಾಲಯವು ಮೌಲ್ಯಯುತ ಸಂಶೋಧನಾ ಕೆಲಸಗಳನ್ನು ಮಾಡುತ್ತಿದೆ. ಆದರೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯವೂ ಸೇರಿದಂತೆ ನಾಡಿನ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಗುಣಮಟ್ಟದ ನೇಮಕಾತಿಗಳು ನಡೆಯದ ಕಾರಣದಿಂದ ಉತ್ತಮ ವಿದ್ವಾಂಸರುಗಳು, ಬೋಧಕರು ಲಭ್ಯವಾಗುತ್ತಿಲ್ಲ. ಉನ್ನತ ಶಿಕ್ಷಣವು ತನ್ನ ಗುಣಮಟ್ಟವನ್ನು ಕಳೆದುಕೊಂಡರೆ, ನಾಡಿನ ಸಮಸ್ತ ವಿಭಾಗಗಳೂ ಕುಸಿದು ಬೀಳುತ್ತವೆ. ಉನ್ನತ ಶಿಕ್ಷಣ ಸರಿಯಾಗಿದ್ದರೆ ಮಾತ್ರ ಉತ್ತಮ ಪ್ರಾಥಮಿಕ, ಪ್ರೌಢ ಶಿಕ್ಷಣ ಸಿಗಲು ಸಾಧ್ಯ. ಜ್ಞಾನವಂತ, ಸೂಕ್ಷ್ಮ ಮತ್ತು ಮಾನವೀಯ ಸಂವೇದನೆಯ ಸಮಾಜದ ನಿರ್ಮಾಣದಲ್ಲಿ ಉನ್ನತ ಶಿಕ್ಷಣದ ಪಾತ್ರ ಬಹಳ ದೊಡ್ಡದು.


ಇದನ್ನೂ ಓದಿರಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ


ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಭ್ರಷ್ಟಾಚಾರ, ಕಮಿಷನ್ ದಂಧೆ ಮುಂತಾದ ಕೆಟ್ಟ ಕಾರಣಗಳಿಂದ ಸುದ್ಧಿಯಲ್ಲಿದೆ. ತೀವ್ರವಾದ ಹಗರಣಗಳ ಆರೋಪಗಳು ಈ ವಿಶ್ವವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ. ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದೆ. ಅದರಲ್ಲಿ ಮುಖ್ಯವಾಗಿ;

1.ಇತ್ತೀಚೆಗೆ ವಿವಿಯಲ್ಲಿ ಕೆಲವು ಬೋಧಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪತ್ರಿಕೆಗಳ ಪ್ರಕಾರ ಪ್ರತಿ ಹುದ್ದೆಗೆ 50 ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿ, ಹರಾಜು ಮಾಡಲಾಗುತ್ತಿದೆಯೆಂದು ವರದಿ ಮಾಡಲಾಗಿದೆ. ಹಣ ಕೊಟ್ಟವರಿಗೆ ಪರೀಕ್ಷೆಗೆ ಮುನ್ನವೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿದೆಯೆಂಬ ಗಂಭೀರ ಆರೋಪಗಳಿವೆಯೆಂದು ಪತ್ರಿಕೆ ವರದಿ ಮಾಡಿದೆ. ವಿಶ್ವವಿದ್ಯಾಲಯಗಳು ಹುದ್ದೆಗಳನ್ನು ಹರಾಜಿಗಿಟ್ಟರೆ ಬಡತನದ ಹಿನ್ನೆಲೆಗಳಿಂದ ಬರುವ ಪ್ರತಿಭಾವಂತರು ಆಯ್ಕೆಯಾಗಲು ಸಾಧ್ಯವೆ? ಪ್ರತಿಭಾವಂತರು ವಿವಿ ಗಳಲ್ಲಿ ಇಲ್ಲವಾದರೆ ಯಾವ ದೇಶವೂ ಉದ್ಧಾರವಾಗಲು ಸಾಧ್ಯವೆ?

2.ಕನ್ನಡ ವಿವಿಯು ವಿವಿಧ ಹುದ್ದೆಗಳನ್ನು ತುಂಬಿಸಲು ಹೊರಡಿಸಿರುವ ಅಧಿಸೂಚನೆಯಲ್ಲಿ ಮೀಸಲಾತಿ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಜೊತೆಗೆ ಹಿಂದೆ ನೇಮಕವಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ಪ್ರೊಬೆಷನರಿ ಅವಧಿಯನ್ನು ಘೋಷಿಸಲೂ ಕಮಿಷನ್ ನಿಗದಿಗೊಳಿಸಲಾಗಿದೆ ಮತ್ತು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಆದ್ದರಿಂದ ಕೂಡಲೆ ನೇಮಕಾತಿ ಪ್ರಕ್ರಿಯೆಯನ್ನು ನಿಲ್ಲಿಸಿ ಈ ಕುರಿತು ತನಿಖೆ ನಡೆಸಿ‌ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಬೇಕು. ರಾಜ್ಯದಲ್ಲಿರುವ ಪ್ರತಿಭಾವಂತರ ಪಟ್ಟಿಯನ್ನು ವಿಷಯವಾರು ತಯಾರಿಸಿ ಅವರುಗಳನ್ನು ಯುಜಿಸಿ ನಿಯಮಾವಳಿಗಳಂತೆ ವಿಶ್ವವಿದ್ಯಾಲಯಗಳಿಗೆ ಕರೆತರುವ ಕೆಲಸ ಮಾಡಬೇಕು.

3.ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಬಳ ನೀಡಲು, ಪಿಂಚಣಿ ನಿಗದಿಪಡಿಸಲು, ಪಿಂಚಣಿ ಬಿಡುಗಡೆ ಮಾಡಲೂ ಕಮಿಷನ್ ನಿಗಧಿಗೊಳಿಸಲಾಗಿದೆ, ಕಮಿಷನ್ ನೀಡದೆ ಯಾವ ಕಡತಗಳಿಗೂ ಜೀವ ಬರುವುದಿಲ್ಲವೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರುಗಳು ವಿಶ್ವ ವಿದ್ಯಾಲಯದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.


ಇದನ್ನೂ ಓದಿರಿ: ಅಕಾಲಿಕ ಮಳೆಯಿಂದ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟ, ತಕ್ಷಣ ಪರಿಹಾರ ನೀಡಿ: ಸಿದ್ದರಾಮಯ್ಯ


4.ನಿವೃತ್ತರಾದ ಕೆಲವು ಪ್ರೊಫೆಸರುಗಳ ಪಿಂಚಣಿಯನ್ನು ನಿಗದಿಪಡಿಸದೆ ಏಳೆಂಟು ತಿಂಗಳಿಂದ ಅವರು ಜೀವನ ನಿರ್ವವಹಿಸಲಾರದೆ ಒದ್ದಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.

5.ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳೂ ನೀಡುತ್ತಿದ್ದ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು 2-3 ವರ್ಷಗಳಿಂದ ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ, ಕಲಿಕೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳೂ ಕೇಳಿ ಬಂದಿವೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ.

ವಂದನೆಗಳೊಂದಿಗೆ,
ತಮ್ಮ ವಿಶ್ವಾಸಿ,
ಸಿದ್ದರಾಮಯ್ಯ


ಇದನ್ನೂ ಓದಿರಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...