Homeಕರ್ನಾಟಕಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ನಾಡು, ನುಡಿ, ಸಂಶೋಧನೆಯ ವಿಷಯದಲ್ಲಿ ತನ್ನದೇ ಆದ ಘನತೆಯನ್ನು ಹೊಂದಿರುವ ಹಂಪಿ ವಿಶ್ವವಿದ್ಯಾನಿಲಯ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದೆ. ವಿವಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತವೇ ಇವೆ. ಈ ನಿಟ್ಟಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

“ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯನವರ ಪತ್ರ:

ಮಾನ್ಯ ಬಸವರಾಜ ಬೊಮ್ಮಾಯಿಯವರೇ,

1991ರಲ್ಲಿ ಹಂಪಿಯಲ್ಲಿರುವ ‘ಕನ್ನಡ ವಿಶ್ವವಿದ್ಯಾಲಯ’ವನ್ನು ವಿಶೇಷ ನಿಯಮಗಳನ್ನು ರೂಪಿಸಿ ಸ್ಥಾಪಿಸಲಾಗಿದೆ. ನಾಡಿನ ಎಲ್ಲ ವಿಶ್ವವಿದ್ಯಾಲಯಗಳು ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಕಲಿಸುವ ಕೆಲಸ ಮಾಡುತ್ತವೆ ಆದರೆ ಹಂಪಿಯಲ್ಲಿರುವ ಈ ವಿಶ್ವ ವಿದ್ಯಾಲಯವನ್ನು “ಜ್ಞಾನ ಸೃಷ್ಟಿಯ” ಕೆಲಸ ಮಾಡುವ ವಿಶಿಷ್ಟ ಉದ್ದೇಶದಿಂದ ಸ್ಥಾಪಿಸಲಾಗಿದೆ. 1991ರಿಂದ ಈ ವಿಶ್ವವಿದ್ಯಾಲಯದಲ್ಲಿ ನಾಡಿನ ಅನೇಕ ಧೀಮಂತ ವಿದ್ವಾಂಸರು ಕೆಲಸ ಮಾಡಿದ್ದಾರೆ. ಹಾಗಾಗಿ ಈ ವಿವಿಯಲ್ಲಿ ಅತ್ಯುತ್ತಮ ಕೆಲಸವೂ ಆಗಿದೆ. ವಿಜ್ಞಾನ, ತಾಂತ್ರಿಕ ಶಿಕ್ಷಣವೂ ಸೇರಿದಂತೆ ಅನೇಕ ವಿಷಯಗಳಿಗೆ ಕನ್ನಡದಲ್ಲಿ ಪಠ್ಯ ಪುಸ್ತಕಗಳನ್ನು ರೂಪಿಸುವ ಕೆಲಸವನ್ನೂ ಈ ವಿವಿ ಮಾಡಿದೆ.

ಇಡೀ ದೇಶದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಯ ಗುಣಮಟ್ಟ ಕುಸಿದು ಹೋಗುತ್ತಿದೆ ಎಂಬ ಗಂಭೀರ ಆರೋಪ ವಿದ್ವತ್ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಅಪವಾದವೆಂಬಂತೆ ಕನ್ನಡ ವಿಶ್ವವಿದ್ಯಾಲಯವು ಮೌಲ್ಯಯುತ ಸಂಶೋಧನಾ ಕೆಲಸಗಳನ್ನು ಮಾಡುತ್ತಿದೆ. ಆದರೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯವೂ ಸೇರಿದಂತೆ ನಾಡಿನ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಗುಣಮಟ್ಟದ ನೇಮಕಾತಿಗಳು ನಡೆಯದ ಕಾರಣದಿಂದ ಉತ್ತಮ ವಿದ್ವಾಂಸರುಗಳು, ಬೋಧಕರು ಲಭ್ಯವಾಗುತ್ತಿಲ್ಲ. ಉನ್ನತ ಶಿಕ್ಷಣವು ತನ್ನ ಗುಣಮಟ್ಟವನ್ನು ಕಳೆದುಕೊಂಡರೆ, ನಾಡಿನ ಸಮಸ್ತ ವಿಭಾಗಗಳೂ ಕುಸಿದು ಬೀಳುತ್ತವೆ. ಉನ್ನತ ಶಿಕ್ಷಣ ಸರಿಯಾಗಿದ್ದರೆ ಮಾತ್ರ ಉತ್ತಮ ಪ್ರಾಥಮಿಕ, ಪ್ರೌಢ ಶಿಕ್ಷಣ ಸಿಗಲು ಸಾಧ್ಯ. ಜ್ಞಾನವಂತ, ಸೂಕ್ಷ್ಮ ಮತ್ತು ಮಾನವೀಯ ಸಂವೇದನೆಯ ಸಮಾಜದ ನಿರ್ಮಾಣದಲ್ಲಿ ಉನ್ನತ ಶಿಕ್ಷಣದ ಪಾತ್ರ ಬಹಳ ದೊಡ್ಡದು.


ಇದನ್ನೂ ಓದಿರಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ


ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಭ್ರಷ್ಟಾಚಾರ, ಕಮಿಷನ್ ದಂಧೆ ಮುಂತಾದ ಕೆಟ್ಟ ಕಾರಣಗಳಿಂದ ಸುದ್ಧಿಯಲ್ಲಿದೆ. ತೀವ್ರವಾದ ಹಗರಣಗಳ ಆರೋಪಗಳು ಈ ವಿಶ್ವವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ. ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದೆ. ಅದರಲ್ಲಿ ಮುಖ್ಯವಾಗಿ;

1.ಇತ್ತೀಚೆಗೆ ವಿವಿಯಲ್ಲಿ ಕೆಲವು ಬೋಧಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪತ್ರಿಕೆಗಳ ಪ್ರಕಾರ ಪ್ರತಿ ಹುದ್ದೆಗೆ 50 ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿ, ಹರಾಜು ಮಾಡಲಾಗುತ್ತಿದೆಯೆಂದು ವರದಿ ಮಾಡಲಾಗಿದೆ. ಹಣ ಕೊಟ್ಟವರಿಗೆ ಪರೀಕ್ಷೆಗೆ ಮುನ್ನವೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿದೆಯೆಂಬ ಗಂಭೀರ ಆರೋಪಗಳಿವೆಯೆಂದು ಪತ್ರಿಕೆ ವರದಿ ಮಾಡಿದೆ. ವಿಶ್ವವಿದ್ಯಾಲಯಗಳು ಹುದ್ದೆಗಳನ್ನು ಹರಾಜಿಗಿಟ್ಟರೆ ಬಡತನದ ಹಿನ್ನೆಲೆಗಳಿಂದ ಬರುವ ಪ್ರತಿಭಾವಂತರು ಆಯ್ಕೆಯಾಗಲು ಸಾಧ್ಯವೆ? ಪ್ರತಿಭಾವಂತರು ವಿವಿ ಗಳಲ್ಲಿ ಇಲ್ಲವಾದರೆ ಯಾವ ದೇಶವೂ ಉದ್ಧಾರವಾಗಲು ಸಾಧ್ಯವೆ?

2.ಕನ್ನಡ ವಿವಿಯು ವಿವಿಧ ಹುದ್ದೆಗಳನ್ನು ತುಂಬಿಸಲು ಹೊರಡಿಸಿರುವ ಅಧಿಸೂಚನೆಯಲ್ಲಿ ಮೀಸಲಾತಿ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಜೊತೆಗೆ ಹಿಂದೆ ನೇಮಕವಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ಪ್ರೊಬೆಷನರಿ ಅವಧಿಯನ್ನು ಘೋಷಿಸಲೂ ಕಮಿಷನ್ ನಿಗದಿಗೊಳಿಸಲಾಗಿದೆ ಮತ್ತು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಆದ್ದರಿಂದ ಕೂಡಲೆ ನೇಮಕಾತಿ ಪ್ರಕ್ರಿಯೆಯನ್ನು ನಿಲ್ಲಿಸಿ ಈ ಕುರಿತು ತನಿಖೆ ನಡೆಸಿ‌ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಬೇಕು. ರಾಜ್ಯದಲ್ಲಿರುವ ಪ್ರತಿಭಾವಂತರ ಪಟ್ಟಿಯನ್ನು ವಿಷಯವಾರು ತಯಾರಿಸಿ ಅವರುಗಳನ್ನು ಯುಜಿಸಿ ನಿಯಮಾವಳಿಗಳಂತೆ ವಿಶ್ವವಿದ್ಯಾಲಯಗಳಿಗೆ ಕರೆತರುವ ಕೆಲಸ ಮಾಡಬೇಕು.

3.ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಬಳ ನೀಡಲು, ಪಿಂಚಣಿ ನಿಗದಿಪಡಿಸಲು, ಪಿಂಚಣಿ ಬಿಡುಗಡೆ ಮಾಡಲೂ ಕಮಿಷನ್ ನಿಗಧಿಗೊಳಿಸಲಾಗಿದೆ, ಕಮಿಷನ್ ನೀಡದೆ ಯಾವ ಕಡತಗಳಿಗೂ ಜೀವ ಬರುವುದಿಲ್ಲವೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರುಗಳು ವಿಶ್ವ ವಿದ್ಯಾಲಯದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.


ಇದನ್ನೂ ಓದಿರಿ: ಅಕಾಲಿಕ ಮಳೆಯಿಂದ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟ, ತಕ್ಷಣ ಪರಿಹಾರ ನೀಡಿ: ಸಿದ್ದರಾಮಯ್ಯ


4.ನಿವೃತ್ತರಾದ ಕೆಲವು ಪ್ರೊಫೆಸರುಗಳ ಪಿಂಚಣಿಯನ್ನು ನಿಗದಿಪಡಿಸದೆ ಏಳೆಂಟು ತಿಂಗಳಿಂದ ಅವರು ಜೀವನ ನಿರ್ವವಹಿಸಲಾರದೆ ಒದ್ದಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.

5.ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳೂ ನೀಡುತ್ತಿದ್ದ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು 2-3 ವರ್ಷಗಳಿಂದ ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ, ಕಲಿಕೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳೂ ಕೇಳಿ ಬಂದಿವೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ.

ವಂದನೆಗಳೊಂದಿಗೆ,
ತಮ್ಮ ವಿಶ್ವಾಸಿ,
ಸಿದ್ದರಾಮಯ್ಯ


ಇದನ್ನೂ ಓದಿರಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...