Homeಕರ್ನಾಟಕನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ...

ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿ ಇದರ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಲಕ್ಷಾಂತರ ರುಪಾಯಿ ಬಾಕಿಯಿಟ್ಟಿರುವ ಘಟನೆ ನಡೆದಿದೆ. ಹೀಗಾಗಿ ಮಾಜಿ ಉಪಕುಲಪತಿಗಳು ಹಾಗೂ ನಿವೃತ್ತ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಕುಲಸಚಿವರಿಗೆ ತಮ್ಮ ಪಿಂಚಣಿಯನ್ನು ಕಾಲಕಾಲಕ್ಕೆ ಸಂದಾಯ ಮಾಡುವಂತೆ ಪತ್ರ ಬರೆದಿದ್ದಾರೆ.

ಪ್ರಾಧ್ಯಾಪಕರು ಕುಲಸಚಿವರಿಗೆ ಬರೆದಿರುವ ಪತ್ರದಲ್ಲಿ, “ನಮಗೆ ಸಲ್ಲಬೇಕಾದ ಪಿಂಚಣಿ ಮತ್ತು ಪಿಂಚಣಿ ಸವಲತ್ತುಗಳನ್ನು ತಕ್ಷಣ ಸಂದಾಯ ಮಾಡಬೇಕೆಂದು ಮತ್ತು ಸಂಬಂಧಿತ ಇತರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕೆಂದು” ಕೋರಿದ್ದಾರೆ.

ಇದನ್ನೂ ಓದಿ: ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಗಳಿಕೆ ರಜೆ ಮೊತ್ತ ವರ್ಗಾವಣೆ ಆಗದೆ ಪಿಂಚಣಿ ನಿಗದಿತವಾಗಿಲ್ಲ ಎಂದು ದೂರಿರುವ ಅವರು, “ಕೆಲವರಿಗೆ ಪಿಂಚಣಿ ಸೌಲಭ್ಯಗಳು ಸಂದಾಯವಾಗದೆ ಮೂರು ವರ್ಷಗಳಾದರೆ, ಇನ್ನು ಕೆಲವರಿಗೆ ಒಂದೆರಡು ವರ್ಷಗಳಾಗಿವೆ, ಮತ್ತೂ ಕೆಲವರಿಗೆ ಎರಡರಿಂದ ಐದಾರು ತಿಂಗಳುಗಳಾಗಿವೆ” ಎಂದು ಪತ್ರದಲ್ಲಿ ದೂರಿದ್ದಾರೆ.

“ಕೆಲವು ಪ್ರಾಧ್ಯಾಪಕರು ನಿವೃತ್ತರಾಗಿ ಐದಾರು ತಿಂಗಳುಗಳಾದರೂ ಪಿಂಚಣಿ ನಿಗದಿತವಾಗಿಲ್ಲ. ಪಿ೦ಜಣಿ ನಿಗದಿತವಾದವರಿಗೆ ಕಾಲಕಾಲಕ್ಕೆ ಪಿಂಚಣಿ ಸಂದಾಯವಾಗುತ್ತಿಲ್ಲ. ಆದಾಯ ತೆರಿಗೆ ಹೆಸರಲ್ಲಿ, ಹಿಂದಿನ ಬಾಕಿ ಹೆಸರಲ್ಲಿ ನಿವೃತ್ತರಾದವರ ಒಪ್ಪಿಗೆ ಇಲ್ಲದೆ ಅವರ ಪಿಂಚಣಿಯಿಂದ ವಿಶ್ವವಿದ್ಯಾಲಯ ಬೇಕಾಬಿಟ್ಟಿ ಕಡಿತ ಮಾಡುತ್ತಿದೆ” ಎಂದು ಪತ್ರದಲ್ಲಿ ಹೇಳಿದ್ದು, ಈ ಎಲ್ಲ ಸಮಸ್ಯೆಗಳ ಕುರಿತು ದೂರು ನೀಡಿದರೆ ಸಮಸ್ಯೆಗಳನ್ನು ಪರಿಹರಿಸುವ ಅಥವಾ ಪತ್ರಗಳಿಗೆ ಉತ್ತರಿಸುವ ಸೌಜನ್ಯವನ್ನು ವಿಶ್ವವಿದ್ಯಾಲಯ ತೋರಿಸುತ್ತಿಲ್ಲ ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ಪಿಂಚಣಿ ಸಮಸ್ಯೆಗಳನ್ನು ಹದಿನೈದು ದಿನಗಳೊಳಗೆ ಪರಿಹರಿಸಿ ಎಂದು ವಿನಂತಿಸಿರುವ ಪ್ರಾಧ್ಯಾಪಕರು, “ಒಂದು ವೇಳೆ ವಿಶ್ವವಿದ್ಯಾಲಯ ಹಿಂದಿನಂತೆ ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿದರೆ ನಾವು ವಿಶ್ವವಿದ್ಯಾಲಯಕ್ಕೆ ಬಂದು ನಮ್ಮ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸುವ ಅನಿವಾರ್ಯತೆ ಸೃಷ್ಟಿ ಅಗಬಹುದು” ಎಂದು ಎಚ್ಚರಿಸಿದ್ದಾರೆ.

ಪತ್ರಕ್ಕೆ, ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಉಪಕುಲತಿಯಾದ ಡಾ. ಮಲ್ಲಿಕಾ ಎಸ್‌. ಘಂಟೆ, ನಿವೃತ್ತ ಪ್ರಾಧ್ಯಾಪಕರಾದ ಡಾ. ಎಂ. ಚಂದ್ರ ಪೂಜಾರಿ, ಡಾ. ಕೆ.ಜಿ. ಭಟ್‌ಸೂರಿ, ಡಾ. ಎಸ್‌.ಸಿ. ಪಾಟಿಲ್, ಡಾ. ಕೇಶವನ್‌ ಪ್ರಸಾದ್‌, ಡಾ. ಉಷಾ, ಡಾ. ನಾಗೇಶ್‌, ಡಾ. ಅಮರೇಶ್‌ ನುಗಡೋಣಿ ಮತ್ತು ಡಾ. ರಹಮತ್‌ ತರಿಕೆರೆ ಸಹಿ ಹಾಕಿದ್ದಾರೆ.

ಇದನ್ನೂ ಓದಿ: ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...