Homeಕರ್ನಾಟಕಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

ಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

"ಓ ಬಡವರ ಗೀತೆ, ಓ ಬಹುಜನ ಮಾತೆ" ಎಂದು ಭಾರತದ ಸಂವಿಧಾನವನ್ನು ಹಂಸಲೇಖ ಅವರು ಬಣ್ಣಿಸಿದ್ದಾರೆ.

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣ ಪೈಕಿ ಒಂದು ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಹಂಸಲೇಖ ಅವರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್ ಆಗಿದೆ.

ಪೇಜಾವರ ಮಠದ ದಿವಂಗತ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು.

‘ನನ್ನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್, ತನಿಖೆ ಮತ್ತು 37ನೇ ಎಸಿಸಿಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ಹಂಸಲೇಖ ಅವರು ಕೋರಿದ್ದರು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿದ್ದು, ಎರಡು ಪ್ರಕರಣಗಳ ಪೈಕಿ ಒಂದನ್ನು ತಡೆ ಹಿಡಿದಿದೆ.

ಹಂಸಲೇಖರ ಪರ ವಾದ ಮಾಡುತ್ತಿರುವ ವಕೀಲ ಸಿ.ಎಸ್. ದ್ವಾರಕನಾಥ್ ಅವರು, ‘ಹಂಸಲೇಖ ವಿರುದ್ಧದ ಆರೋಪಗಳಲ್ಲಿ ಪರಿಗಣಿಸಬಹುದಾದ ಸಂಜ್ಞೇಯ ಅಪರಾಧ ಕೃತ್ಯಗಳಿಲ್ಲ. ಅರ್ಜಿದಾರರ ವಿರುದ್ಧ ತನಿಖೆ ಮುಂದುವರಿದರೆ ಅವರ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ’ ಎಂದು ವಾದಿಸಿದರು.

‘ಅರ್ಜಿದಾರರು ಉದ್ದೇಶಪೂರ್ವಕವಾಗಿ ಎರಡು ವರ್ಗಗಳ ನಡುವೆ ದ್ವೇಷಭಾವನೆ ಉಂಟು ಮಾಡುವ, ಶಾಂತಿ ಕೆಡಿಸುವ ಅಥವಾ ಅವಹೇಳನಕಾರಿ ಹೇಳಿಕೆ ನೀಡುವ ಕೃತ್ಯ ಮಾಡಿಲ್ಲ. ಆದ್ದರಿಂದ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಎಲ್ಲಾ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಮನವಿ ಮಾಡಿದರು.

ಪ್ರತಿವಾದಿಗಳಾದ ಬಸವನಗುಡಿ ಪೊಲೀಸ್‌ ಠಾಣೆ ಅಧಿಕಾರಿ, ಡಾ.ಮುರಳೀಧರ ಹಾಗೂ ಎಸ್‌.ಎನ್‌.ರವೀಂದ್ರ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.


ಇದನ್ನೂ ಓದಿರಿ: ಹಂಸಲೇಖರವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡ ಬಸವನಗುಡಿ ಪೊಲೀಸರು


2ನೇ ದೂರು ಕ್ರೈಂ ನಂ.201/2021ರ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಮೊದಲನೇ ಎಫ್‌ಐಆರ್‌‌ ಕ್ರೈಂ ನಂ. 200/2021ಗೆ ಪ್ರಕರಣ ಮುಂದುವರಿಯಲಿದೆ. ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಹಂಸಲೇಖ ಅವರು ಮಾತನಾಡಿದ್ದಾರೆ ಎಂದು ವಿವಾದ ಸೃಷ್ಟಿಸಲಾಗಿತ್ತು. ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದ್ದರು. ಅಷ್ಟಕ್ಕೆ ಸುಮ್ಮನಾಗದೆ ಹಂಸಲೇಖ ಅವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಲಾಯಿತು. ಈಗ ಒಂದು ಪ್ರಕರಣಕ್ಕೆ ನ್ಯಾಯಾಲಯ ತಡೆ ನೀಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದ ಸಂವಿಧಾನವೇ ನಮ್ಮೆಲ್ಲರ ರಕ್ಷಕ ಎಂಬುದು ನಿರ್ವೀವಾದ. ಹಂಸಲೇಖ ಅವರು ನ್ಯಾಯಾಲಯದ ಮೊರೆ ಹೋದ ಬಳಿಕ ಒಂದು ಪ್ರಕರಣಕ್ಕೆ ತಡೆ ಸಿಕ್ಕ ಬೆನ್ನಲ್ಲೇ ಹಂಸಲೇಖ ಅವರು ತಮ್ಮ ಹೊಸ ಸಂಯೋಜನೆ “ಸಂವಿಧಾನ ಗೀತೆ”ಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಸಂವಿಧಾನವನ್ನು, “ಓ ಬಡವರ ಗೀತೆ, ಓ ಬಹುಜನ ಮಾತೆ” ಎಂದು ಅವರು ಬಣ್ಣಿಸಿದ್ದಾರೆ.

“ನಾನು, ನೀನು, ನಮಗಾಗಿರೋದೇ ಕಾನೂನು,

ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”

ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು

ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ

ಬಹುತ್‌ ಭಾರತದ ಬೃಹತ್ ಸಂವಿಧಾನ

ಓ ಬಡವರ ಗೀತೆ, ಓ ಬಹುಜನ ಮಾತೆ

ಓ ಬಡವರ ಗೀತೆ, ಓ ಬಹುಜನ ಮಾತೆ

ಅಕ್ಷರ ರೂಪದ ಶಾಂತಿಯ ದನಿಯ

ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌

“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”

-ಹಂಸಲೇಖ, ಸಂಗೀತ ನಿರ್ದೇಶಕರು ಹಾಗೂ ಚಿತ್ರಸಾಹಿತಿ


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...