Homeಕರ್ನಾಟಕಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

ಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

"ಓ ಬಡವರ ಗೀತೆ, ಓ ಬಹುಜನ ಮಾತೆ" ಎಂದು ಭಾರತದ ಸಂವಿಧಾನವನ್ನು ಹಂಸಲೇಖ ಅವರು ಬಣ್ಣಿಸಿದ್ದಾರೆ.

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣ ಪೈಕಿ ಒಂದು ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಹಂಸಲೇಖ ಅವರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್ ಆಗಿದೆ.

ಪೇಜಾವರ ಮಠದ ದಿವಂಗತ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು.

‘ನನ್ನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್, ತನಿಖೆ ಮತ್ತು 37ನೇ ಎಸಿಸಿಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ಹಂಸಲೇಖ ಅವರು ಕೋರಿದ್ದರು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿದ್ದು, ಎರಡು ಪ್ರಕರಣಗಳ ಪೈಕಿ ಒಂದನ್ನು ತಡೆ ಹಿಡಿದಿದೆ.

ಹಂಸಲೇಖರ ಪರ ವಾದ ಮಾಡುತ್ತಿರುವ ವಕೀಲ ಸಿ.ಎಸ್. ದ್ವಾರಕನಾಥ್ ಅವರು, ‘ಹಂಸಲೇಖ ವಿರುದ್ಧದ ಆರೋಪಗಳಲ್ಲಿ ಪರಿಗಣಿಸಬಹುದಾದ ಸಂಜ್ಞೇಯ ಅಪರಾಧ ಕೃತ್ಯಗಳಿಲ್ಲ. ಅರ್ಜಿದಾರರ ವಿರುದ್ಧ ತನಿಖೆ ಮುಂದುವರಿದರೆ ಅವರ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ’ ಎಂದು ವಾದಿಸಿದರು.

‘ಅರ್ಜಿದಾರರು ಉದ್ದೇಶಪೂರ್ವಕವಾಗಿ ಎರಡು ವರ್ಗಗಳ ನಡುವೆ ದ್ವೇಷಭಾವನೆ ಉಂಟು ಮಾಡುವ, ಶಾಂತಿ ಕೆಡಿಸುವ ಅಥವಾ ಅವಹೇಳನಕಾರಿ ಹೇಳಿಕೆ ನೀಡುವ ಕೃತ್ಯ ಮಾಡಿಲ್ಲ. ಆದ್ದರಿಂದ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಎಲ್ಲಾ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಮನವಿ ಮಾಡಿದರು.

ಪ್ರತಿವಾದಿಗಳಾದ ಬಸವನಗುಡಿ ಪೊಲೀಸ್‌ ಠಾಣೆ ಅಧಿಕಾರಿ, ಡಾ.ಮುರಳೀಧರ ಹಾಗೂ ಎಸ್‌.ಎನ್‌.ರವೀಂದ್ರ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.


ಇದನ್ನೂ ಓದಿರಿ: ಹಂಸಲೇಖರವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡ ಬಸವನಗುಡಿ ಪೊಲೀಸರು


2ನೇ ದೂರು ಕ್ರೈಂ ನಂ.201/2021ರ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಮೊದಲನೇ ಎಫ್‌ಐಆರ್‌‌ ಕ್ರೈಂ ನಂ. 200/2021ಗೆ ಪ್ರಕರಣ ಮುಂದುವರಿಯಲಿದೆ. ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಹಂಸಲೇಖ ಅವರು ಮಾತನಾಡಿದ್ದಾರೆ ಎಂದು ವಿವಾದ ಸೃಷ್ಟಿಸಲಾಗಿತ್ತು. ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದ್ದರು. ಅಷ್ಟಕ್ಕೆ ಸುಮ್ಮನಾಗದೆ ಹಂಸಲೇಖ ಅವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಲಾಯಿತು. ಈಗ ಒಂದು ಪ್ರಕರಣಕ್ಕೆ ನ್ಯಾಯಾಲಯ ತಡೆ ನೀಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದ ಸಂವಿಧಾನವೇ ನಮ್ಮೆಲ್ಲರ ರಕ್ಷಕ ಎಂಬುದು ನಿರ್ವೀವಾದ. ಹಂಸಲೇಖ ಅವರು ನ್ಯಾಯಾಲಯದ ಮೊರೆ ಹೋದ ಬಳಿಕ ಒಂದು ಪ್ರಕರಣಕ್ಕೆ ತಡೆ ಸಿಕ್ಕ ಬೆನ್ನಲ್ಲೇ ಹಂಸಲೇಖ ಅವರು ತಮ್ಮ ಹೊಸ ಸಂಯೋಜನೆ “ಸಂವಿಧಾನ ಗೀತೆ”ಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಸಂವಿಧಾನವನ್ನು, “ಓ ಬಡವರ ಗೀತೆ, ಓ ಬಹುಜನ ಮಾತೆ” ಎಂದು ಅವರು ಬಣ್ಣಿಸಿದ್ದಾರೆ.

“ನಾನು, ನೀನು, ನಮಗಾಗಿರೋದೇ ಕಾನೂನು,

ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”

ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು

ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ

ಬಹುತ್‌ ಭಾರತದ ಬೃಹತ್ ಸಂವಿಧಾನ

ಓ ಬಡವರ ಗೀತೆ, ಓ ಬಹುಜನ ಮಾತೆ

ಓ ಬಡವರ ಗೀತೆ, ಓ ಬಹುಜನ ಮಾತೆ

ಅಕ್ಷರ ರೂಪದ ಶಾಂತಿಯ ದನಿಯ

ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌

“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”

-ಹಂಸಲೇಖ, ಸಂಗೀತ ನಿರ್ದೇಶಕರು ಹಾಗೂ ಚಿತ್ರಸಾಹಿತಿ


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...