Homeಕರ್ನಾಟಕಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

ಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

"ಓ ಬಡವರ ಗೀತೆ, ಓ ಬಹುಜನ ಮಾತೆ" ಎಂದು ಭಾರತದ ಸಂವಿಧಾನವನ್ನು ಹಂಸಲೇಖ ಅವರು ಬಣ್ಣಿಸಿದ್ದಾರೆ.

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣ ಪೈಕಿ ಒಂದು ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಹಂಸಲೇಖ ಅವರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್ ಆಗಿದೆ.

ಪೇಜಾವರ ಮಠದ ದಿವಂಗತ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು.

‘ನನ್ನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್, ತನಿಖೆ ಮತ್ತು 37ನೇ ಎಸಿಸಿಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ಹಂಸಲೇಖ ಅವರು ಕೋರಿದ್ದರು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿದ್ದು, ಎರಡು ಪ್ರಕರಣಗಳ ಪೈಕಿ ಒಂದನ್ನು ತಡೆ ಹಿಡಿದಿದೆ.

ಹಂಸಲೇಖರ ಪರ ವಾದ ಮಾಡುತ್ತಿರುವ ವಕೀಲ ಸಿ.ಎಸ್. ದ್ವಾರಕನಾಥ್ ಅವರು, ‘ಹಂಸಲೇಖ ವಿರುದ್ಧದ ಆರೋಪಗಳಲ್ಲಿ ಪರಿಗಣಿಸಬಹುದಾದ ಸಂಜ್ಞೇಯ ಅಪರಾಧ ಕೃತ್ಯಗಳಿಲ್ಲ. ಅರ್ಜಿದಾರರ ವಿರುದ್ಧ ತನಿಖೆ ಮುಂದುವರಿದರೆ ಅವರ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ’ ಎಂದು ವಾದಿಸಿದರು.

‘ಅರ್ಜಿದಾರರು ಉದ್ದೇಶಪೂರ್ವಕವಾಗಿ ಎರಡು ವರ್ಗಗಳ ನಡುವೆ ದ್ವೇಷಭಾವನೆ ಉಂಟು ಮಾಡುವ, ಶಾಂತಿ ಕೆಡಿಸುವ ಅಥವಾ ಅವಹೇಳನಕಾರಿ ಹೇಳಿಕೆ ನೀಡುವ ಕೃತ್ಯ ಮಾಡಿಲ್ಲ. ಆದ್ದರಿಂದ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಎಲ್ಲಾ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಮನವಿ ಮಾಡಿದರು.

ಪ್ರತಿವಾದಿಗಳಾದ ಬಸವನಗುಡಿ ಪೊಲೀಸ್‌ ಠಾಣೆ ಅಧಿಕಾರಿ, ಡಾ.ಮುರಳೀಧರ ಹಾಗೂ ಎಸ್‌.ಎನ್‌.ರವೀಂದ್ರ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.


ಇದನ್ನೂ ಓದಿರಿ: ಹಂಸಲೇಖರವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡ ಬಸವನಗುಡಿ ಪೊಲೀಸರು


2ನೇ ದೂರು ಕ್ರೈಂ ನಂ.201/2021ರ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಮೊದಲನೇ ಎಫ್‌ಐಆರ್‌‌ ಕ್ರೈಂ ನಂ. 200/2021ಗೆ ಪ್ರಕರಣ ಮುಂದುವರಿಯಲಿದೆ. ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಹಂಸಲೇಖ ಅವರು ಮಾತನಾಡಿದ್ದಾರೆ ಎಂದು ವಿವಾದ ಸೃಷ್ಟಿಸಲಾಗಿತ್ತು. ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದ್ದರು. ಅಷ್ಟಕ್ಕೆ ಸುಮ್ಮನಾಗದೆ ಹಂಸಲೇಖ ಅವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಲಾಯಿತು. ಈಗ ಒಂದು ಪ್ರಕರಣಕ್ಕೆ ನ್ಯಾಯಾಲಯ ತಡೆ ನೀಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದ ಸಂವಿಧಾನವೇ ನಮ್ಮೆಲ್ಲರ ರಕ್ಷಕ ಎಂಬುದು ನಿರ್ವೀವಾದ. ಹಂಸಲೇಖ ಅವರು ನ್ಯಾಯಾಲಯದ ಮೊರೆ ಹೋದ ಬಳಿಕ ಒಂದು ಪ್ರಕರಣಕ್ಕೆ ತಡೆ ಸಿಕ್ಕ ಬೆನ್ನಲ್ಲೇ ಹಂಸಲೇಖ ಅವರು ತಮ್ಮ ಹೊಸ ಸಂಯೋಜನೆ “ಸಂವಿಧಾನ ಗೀತೆ”ಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಸಂವಿಧಾನವನ್ನು, “ಓ ಬಡವರ ಗೀತೆ, ಓ ಬಹುಜನ ಮಾತೆ” ಎಂದು ಅವರು ಬಣ್ಣಿಸಿದ್ದಾರೆ.

“ನಾನು, ನೀನು, ನಮಗಾಗಿರೋದೇ ಕಾನೂನು,

ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”

ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು

ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ

ಬಹುತ್‌ ಭಾರತದ ಬೃಹತ್ ಸಂವಿಧಾನ

ಓ ಬಡವರ ಗೀತೆ, ಓ ಬಹುಜನ ಮಾತೆ

ಓ ಬಡವರ ಗೀತೆ, ಓ ಬಹುಜನ ಮಾತೆ

ಅಕ್ಷರ ರೂಪದ ಶಾಂತಿಯ ದನಿಯ

ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌

“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”

-ಹಂಸಲೇಖ, ಸಂಗೀತ ನಿರ್ದೇಶಕರು ಹಾಗೂ ಚಿತ್ರಸಾಹಿತಿ


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....