Homeಕರ್ನಾಟಕಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

ಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

"ಓ ಬಡವರ ಗೀತೆ, ಓ ಬಹುಜನ ಮಾತೆ" ಎಂದು ಭಾರತದ ಸಂವಿಧಾನವನ್ನು ಹಂಸಲೇಖ ಅವರು ಬಣ್ಣಿಸಿದ್ದಾರೆ.

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣ ಪೈಕಿ ಒಂದು ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಹಂಸಲೇಖ ಅವರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್ ಆಗಿದೆ.

ಪೇಜಾವರ ಮಠದ ದಿವಂಗತ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು.

‘ನನ್ನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್, ತನಿಖೆ ಮತ್ತು 37ನೇ ಎಸಿಸಿಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ಹಂಸಲೇಖ ಅವರು ಕೋರಿದ್ದರು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿದ್ದು, ಎರಡು ಪ್ರಕರಣಗಳ ಪೈಕಿ ಒಂದನ್ನು ತಡೆ ಹಿಡಿದಿದೆ.

ಹಂಸಲೇಖರ ಪರ ವಾದ ಮಾಡುತ್ತಿರುವ ವಕೀಲ ಸಿ.ಎಸ್. ದ್ವಾರಕನಾಥ್ ಅವರು, ‘ಹಂಸಲೇಖ ವಿರುದ್ಧದ ಆರೋಪಗಳಲ್ಲಿ ಪರಿಗಣಿಸಬಹುದಾದ ಸಂಜ್ಞೇಯ ಅಪರಾಧ ಕೃತ್ಯಗಳಿಲ್ಲ. ಅರ್ಜಿದಾರರ ವಿರುದ್ಧ ತನಿಖೆ ಮುಂದುವರಿದರೆ ಅವರ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ’ ಎಂದು ವಾದಿಸಿದರು.

‘ಅರ್ಜಿದಾರರು ಉದ್ದೇಶಪೂರ್ವಕವಾಗಿ ಎರಡು ವರ್ಗಗಳ ನಡುವೆ ದ್ವೇಷಭಾವನೆ ಉಂಟು ಮಾಡುವ, ಶಾಂತಿ ಕೆಡಿಸುವ ಅಥವಾ ಅವಹೇಳನಕಾರಿ ಹೇಳಿಕೆ ನೀಡುವ ಕೃತ್ಯ ಮಾಡಿಲ್ಲ. ಆದ್ದರಿಂದ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಎಲ್ಲಾ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಮನವಿ ಮಾಡಿದರು.

ಪ್ರತಿವಾದಿಗಳಾದ ಬಸವನಗುಡಿ ಪೊಲೀಸ್‌ ಠಾಣೆ ಅಧಿಕಾರಿ, ಡಾ.ಮುರಳೀಧರ ಹಾಗೂ ಎಸ್‌.ಎನ್‌.ರವೀಂದ್ರ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.


ಇದನ್ನೂ ಓದಿರಿ: ಹಂಸಲೇಖರವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡ ಬಸವನಗುಡಿ ಪೊಲೀಸರು


2ನೇ ದೂರು ಕ್ರೈಂ ನಂ.201/2021ರ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಮೊದಲನೇ ಎಫ್‌ಐಆರ್‌‌ ಕ್ರೈಂ ನಂ. 200/2021ಗೆ ಪ್ರಕರಣ ಮುಂದುವರಿಯಲಿದೆ. ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಹಂಸಲೇಖ ಅವರು ಮಾತನಾಡಿದ್ದಾರೆ ಎಂದು ವಿವಾದ ಸೃಷ್ಟಿಸಲಾಗಿತ್ತು. ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದ್ದರು. ಅಷ್ಟಕ್ಕೆ ಸುಮ್ಮನಾಗದೆ ಹಂಸಲೇಖ ಅವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಲಾಯಿತು. ಈಗ ಒಂದು ಪ್ರಕರಣಕ್ಕೆ ನ್ಯಾಯಾಲಯ ತಡೆ ನೀಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದ ಸಂವಿಧಾನವೇ ನಮ್ಮೆಲ್ಲರ ರಕ್ಷಕ ಎಂಬುದು ನಿರ್ವೀವಾದ. ಹಂಸಲೇಖ ಅವರು ನ್ಯಾಯಾಲಯದ ಮೊರೆ ಹೋದ ಬಳಿಕ ಒಂದು ಪ್ರಕರಣಕ್ಕೆ ತಡೆ ಸಿಕ್ಕ ಬೆನ್ನಲ್ಲೇ ಹಂಸಲೇಖ ಅವರು ತಮ್ಮ ಹೊಸ ಸಂಯೋಜನೆ “ಸಂವಿಧಾನ ಗೀತೆ”ಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಸಂವಿಧಾನವನ್ನು, “ಓ ಬಡವರ ಗೀತೆ, ಓ ಬಹುಜನ ಮಾತೆ” ಎಂದು ಅವರು ಬಣ್ಣಿಸಿದ್ದಾರೆ.

“ನಾನು, ನೀನು, ನಮಗಾಗಿರೋದೇ ಕಾನೂನು,

ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”

ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು

ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ

ಬಹುತ್‌ ಭಾರತದ ಬೃಹತ್ ಸಂವಿಧಾನ

ಓ ಬಡವರ ಗೀತೆ, ಓ ಬಹುಜನ ಮಾತೆ

ಓ ಬಡವರ ಗೀತೆ, ಓ ಬಹುಜನ ಮಾತೆ

ಅಕ್ಷರ ರೂಪದ ಶಾಂತಿಯ ದನಿಯ

ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌

“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”

-ಹಂಸಲೇಖ, ಸಂಗೀತ ನಿರ್ದೇಶಕರು ಹಾಗೂ ಚಿತ್ರಸಾಹಿತಿ


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...