Homeಕರ್ನಾಟಕಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

ಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

"ಓ ಬಡವರ ಗೀತೆ, ಓ ಬಹುಜನ ಮಾತೆ" ಎಂದು ಭಾರತದ ಸಂವಿಧಾನವನ್ನು ಹಂಸಲೇಖ ಅವರು ಬಣ್ಣಿಸಿದ್ದಾರೆ.

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣ ಪೈಕಿ ಒಂದು ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಹಂಸಲೇಖ ಅವರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್ ಆಗಿದೆ.

ಪೇಜಾವರ ಮಠದ ದಿವಂಗತ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು.

‘ನನ್ನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್, ತನಿಖೆ ಮತ್ತು 37ನೇ ಎಸಿಸಿಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ಹಂಸಲೇಖ ಅವರು ಕೋರಿದ್ದರು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿದ್ದು, ಎರಡು ಪ್ರಕರಣಗಳ ಪೈಕಿ ಒಂದನ್ನು ತಡೆ ಹಿಡಿದಿದೆ.

ಹಂಸಲೇಖರ ಪರ ವಾದ ಮಾಡುತ್ತಿರುವ ವಕೀಲ ಸಿ.ಎಸ್. ದ್ವಾರಕನಾಥ್ ಅವರು, ‘ಹಂಸಲೇಖ ವಿರುದ್ಧದ ಆರೋಪಗಳಲ್ಲಿ ಪರಿಗಣಿಸಬಹುದಾದ ಸಂಜ್ಞೇಯ ಅಪರಾಧ ಕೃತ್ಯಗಳಿಲ್ಲ. ಅರ್ಜಿದಾರರ ವಿರುದ್ಧ ತನಿಖೆ ಮುಂದುವರಿದರೆ ಅವರ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ’ ಎಂದು ವಾದಿಸಿದರು.

‘ಅರ್ಜಿದಾರರು ಉದ್ದೇಶಪೂರ್ವಕವಾಗಿ ಎರಡು ವರ್ಗಗಳ ನಡುವೆ ದ್ವೇಷಭಾವನೆ ಉಂಟು ಮಾಡುವ, ಶಾಂತಿ ಕೆಡಿಸುವ ಅಥವಾ ಅವಹೇಳನಕಾರಿ ಹೇಳಿಕೆ ನೀಡುವ ಕೃತ್ಯ ಮಾಡಿಲ್ಲ. ಆದ್ದರಿಂದ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಎಲ್ಲಾ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಮನವಿ ಮಾಡಿದರು.

ಪ್ರತಿವಾದಿಗಳಾದ ಬಸವನಗುಡಿ ಪೊಲೀಸ್‌ ಠಾಣೆ ಅಧಿಕಾರಿ, ಡಾ.ಮುರಳೀಧರ ಹಾಗೂ ಎಸ್‌.ಎನ್‌.ರವೀಂದ್ರ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.


ಇದನ್ನೂ ಓದಿರಿ: ಹಂಸಲೇಖರವರೊಂದಿಗೆ ಫೋಟೊ, ಸೆಲ್ಫಿ ತೆಗೆದುಕೊಂಡ ಬಸವನಗುಡಿ ಪೊಲೀಸರು


2ನೇ ದೂರು ಕ್ರೈಂ ನಂ.201/2021ರ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಮೊದಲನೇ ಎಫ್‌ಐಆರ್‌‌ ಕ್ರೈಂ ನಂ. 200/2021ಗೆ ಪ್ರಕರಣ ಮುಂದುವರಿಯಲಿದೆ. ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಹಂಸಲೇಖ ಅವರು ಮಾತನಾಡಿದ್ದಾರೆ ಎಂದು ವಿವಾದ ಸೃಷ್ಟಿಸಲಾಗಿತ್ತು. ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದ್ದರು. ಅಷ್ಟಕ್ಕೆ ಸುಮ್ಮನಾಗದೆ ಹಂಸಲೇಖ ಅವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಲಾಯಿತು. ಈಗ ಒಂದು ಪ್ರಕರಣಕ್ಕೆ ನ್ಯಾಯಾಲಯ ತಡೆ ನೀಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದ ಸಂವಿಧಾನವೇ ನಮ್ಮೆಲ್ಲರ ರಕ್ಷಕ ಎಂಬುದು ನಿರ್ವೀವಾದ. ಹಂಸಲೇಖ ಅವರು ನ್ಯಾಯಾಲಯದ ಮೊರೆ ಹೋದ ಬಳಿಕ ಒಂದು ಪ್ರಕರಣಕ್ಕೆ ತಡೆ ಸಿಕ್ಕ ಬೆನ್ನಲ್ಲೇ ಹಂಸಲೇಖ ಅವರು ತಮ್ಮ ಹೊಸ ಸಂಯೋಜನೆ “ಸಂವಿಧಾನ ಗೀತೆ”ಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಸಂವಿಧಾನವನ್ನು, “ಓ ಬಡವರ ಗೀತೆ, ಓ ಬಹುಜನ ಮಾತೆ” ಎಂದು ಅವರು ಬಣ್ಣಿಸಿದ್ದಾರೆ.

“ನಾನು, ನೀನು, ನಮಗಾಗಿರೋದೇ ಕಾನೂನು,

ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”

ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು

ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ

ಬಹುತ್‌ ಭಾರತದ ಬೃಹತ್ ಸಂವಿಧಾನ

ಓ ಬಡವರ ಗೀತೆ, ಓ ಬಹುಜನ ಮಾತೆ

ಓ ಬಡವರ ಗೀತೆ, ಓ ಬಹುಜನ ಮಾತೆ

ಅಕ್ಷರ ರೂಪದ ಶಾಂತಿಯ ದನಿಯ

ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌

“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”

“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”

-ಹಂಸಲೇಖ, ಸಂಗೀತ ನಿರ್ದೇಶಕರು ಹಾಗೂ ಚಿತ್ರಸಾಹಿತಿ


ಇದನ್ನೂ ಓದಿರಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...