Homeಕರ್ನಾಟಕನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಹೌದು, ನಾನು ಜಾತಿವಾದಿ ಏನಿವಾಗ ಎಂದು ಟಾಂಗ್ ಕೊಟ್ಟಿದ್ದಾರೆ.

“ಶೋಷಿತ ಜಾತಿಗಳು ತಮಗಾಗಿರುವ ಅನ್ಯಾಯವನ್ನು ಹೇಳಿಕೊಳ್ಳಲು ಸಂಘಟಿತರಾಗಿವುದು‌ ತಪ್ಪಲ್ಲ, ಅದು ಜಾತಿವಾದವೂ ಅಲ್ಲ. ಅಂತಹ ಜಾತಿ ಸಮಾವೇಶಗಳಲ್ಲಿ ಭಾಗವಹಿಸುವುದು ಜಾತಿವಾದವಾದರೆ.. ಹೌದು, ನಾನು ಜಾತಿವಾದಿ.. ಏನೀಗ ಬಿಜೆಪಿ…? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಮಾಜದ ಎಲ್ಲಾ ಜಾತಿ, ಸಮುದಾಯದ ಜನರನ್ನು ಒಟ್ಟಾಗಿ ಕರೆದೊಯ್ಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದ ಬಿಜೆಪಿ, ’ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ?’ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಇಂದು ಸಿಂಧಗಿಯಲ್ಲಿ ನಡೆದ ಬಂಜಾರ ಸಮುದಾಯದ ಸಮಾವೇಶದಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರ ಪರ ಪ್ರಚಾರ ನಡೆಸಿದ್ದಾರೆ.

ಬಿಜೆಪಿಯ ಜಾತಿವಾದಿ ಆರೋಪಕ್ಕೆ ಪ್ರತಿಕ್ರಿಯೆ ನಿಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. “ನಾನು ಮುಖ್ಯಮಂತ್ರಿಯಾಗಿದ್ದಾಗ ಬಂಜಾರ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಲ್ಲಿದ್ದ ಬಡವರ ಸಾಲವನ್ನು ಮನ್ನಾ ಮಾಡಿದ್ದೆ. ಇದು ಜಾತಿವಾದವೇ ಬಿಜೆಪಿ…? ಎಂದಿದ್ದಾರೆ.

“ನಮ್ಮ ಸರ್ಕಾರ ಬಂಜಾರ ಸಮಾಜದ ಅಭಿವೃದ್ಧಿಗೆ ವಾರ್ಷಿಕ 200 ಕೋಟಿ ರೂಪಾಯಿಗಳನ್ನು ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅನುದಾನವನ್ನು ಬರೀ 10 ಕೋಟಿಗೆ ಇಳಿಸಿದೆ. ಸರ್ಕಾರವೇ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸಬೇಕೆಂದು ಆದೇಶ ಹೊರಡಿಸಿದವನು ನಾನೆ. ಇದು ಜಾತಿವಾದವೇ ಬಿಜೆಪಿ…? ಎಂದು ಮತ್ತೊಂದು ಪ್ರಶ್ನಿ ಹಾಕಿದ್ದಾರೆ.

“ತಾಂಡಾಗಳು, ಹಟ್ಟಿಗಳು, ಮಜರೆಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕ್ರಾಂತಿಕಾರಕ “ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯಿದೆ” ಯನ್ನು ಜಾರಿಗೊಳಿಸಿ, ಲಕ್ಷಾಂತರ ಬಡ ಜನರಿಗೆ ಭೂಮಿಯ ಒಡೆತನದ ಹಕ್ಕು ನೀಡಿದ್ದು ನಮ್ಮ ಸರ್ಕಾರ. ಇದು ಜಾತಿವಾದವೇ ಬಿಜೆಪಿ…?’ಎಂದು ಮಗದೊಂದು ಪ್ರಶ್ನೆ ಎಸೆದಿದ್ದಾರೆ.

“ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಬಂಜಾರ ಸಮುದಾಯದ ಕುಲಕಸುಬಾದ ಕಸೂತಿ ವೃತ್ತಿಯನ್ನು ಅಭಿವೃದ್ಧಿ ಪಡಿಸಲು ರೂ.100 ಕೋಟಿ ಅನುದಾನ ನೀಡುತ್ತೇವೆ ಮತ್ತು ಕಸೂತಿ ಉತ್ಪನ್ನಗಳಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುತ್ತೇವೆ. ತಾಕತ್ತಿದ್ದರೆ ಬಿಜೆಪಿ ಇವುಗಳಿಗೆ ವಿರೋಧಿಸಲಿ” ಎಂದು ಜಾತಿವಾದಿ ಆರೋಪಕ್ಕೆ ಪ್ರತಿಯಾಗಿ ಸವಾಲು ಹಾಕಿದ್ದಾರೆ.

 ಇತ್ತ ಬಿಜೆಪಿ ಜಾತಿವಿಭಜಕಸಿದ್ದರಾಮಯ್ಯ ಎಂದು ಹ್ಯಾಶ್‌ಟ್ಯಾಗ್ ಬಳಸಿದರೆ, ಸಿದ್ದರಾಮಯ್ಯ #SocialJustice ಎಂಬ ಹ್ಯಾಶ್‌ಟ್ಯಾಗ್ ಬಳಸುತ್ತಿದ್ದಾರೆ. ಒಟ್ಟಾರೆ ಹಾನಗಲ್, ಸಿಂದಗಿ ಉಪಚುನಾವಣೆಯಿಂದ ಎರಡು ಪಕ್ಷಗಳ ಟ್ವೀಟ್ ಸಮರ ದಿನ ದಿನಕ್ಕೆ ರಂಗೇರುತ್ತಿದೆ.

ಇದನ್ನೂ ಓದಿ: ಸಿಎಂ ‘ಬುರುಡೆ ಬೊಮ್ಮಾಯಿ’ ಬಿಜೆಪಿ ‘ಬಂಡಲ್’: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...