Homeಕರ್ನಾಟಕನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಹೌದು, ನಾನು ಜಾತಿವಾದಿ ಏನಿವಾಗ ಎಂದು ಟಾಂಗ್ ಕೊಟ್ಟಿದ್ದಾರೆ.

“ಶೋಷಿತ ಜಾತಿಗಳು ತಮಗಾಗಿರುವ ಅನ್ಯಾಯವನ್ನು ಹೇಳಿಕೊಳ್ಳಲು ಸಂಘಟಿತರಾಗಿವುದು‌ ತಪ್ಪಲ್ಲ, ಅದು ಜಾತಿವಾದವೂ ಅಲ್ಲ. ಅಂತಹ ಜಾತಿ ಸಮಾವೇಶಗಳಲ್ಲಿ ಭಾಗವಹಿಸುವುದು ಜಾತಿವಾದವಾದರೆ.. ಹೌದು, ನಾನು ಜಾತಿವಾದಿ.. ಏನೀಗ ಬಿಜೆಪಿ…? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಮಾಜದ ಎಲ್ಲಾ ಜಾತಿ, ಸಮುದಾಯದ ಜನರನ್ನು ಒಟ್ಟಾಗಿ ಕರೆದೊಯ್ಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದ ಬಿಜೆಪಿ, ’ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ?’ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಇಂದು ಸಿಂಧಗಿಯಲ್ಲಿ ನಡೆದ ಬಂಜಾರ ಸಮುದಾಯದ ಸಮಾವೇಶದಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರ ಪರ ಪ್ರಚಾರ ನಡೆಸಿದ್ದಾರೆ.

ಬಿಜೆಪಿಯ ಜಾತಿವಾದಿ ಆರೋಪಕ್ಕೆ ಪ್ರತಿಕ್ರಿಯೆ ನಿಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. “ನಾನು ಮುಖ್ಯಮಂತ್ರಿಯಾಗಿದ್ದಾಗ ಬಂಜಾರ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಲ್ಲಿದ್ದ ಬಡವರ ಸಾಲವನ್ನು ಮನ್ನಾ ಮಾಡಿದ್ದೆ. ಇದು ಜಾತಿವಾದವೇ ಬಿಜೆಪಿ…? ಎಂದಿದ್ದಾರೆ.

“ನಮ್ಮ ಸರ್ಕಾರ ಬಂಜಾರ ಸಮಾಜದ ಅಭಿವೃದ್ಧಿಗೆ ವಾರ್ಷಿಕ 200 ಕೋಟಿ ರೂಪಾಯಿಗಳನ್ನು ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅನುದಾನವನ್ನು ಬರೀ 10 ಕೋಟಿಗೆ ಇಳಿಸಿದೆ. ಸರ್ಕಾರವೇ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸಬೇಕೆಂದು ಆದೇಶ ಹೊರಡಿಸಿದವನು ನಾನೆ. ಇದು ಜಾತಿವಾದವೇ ಬಿಜೆಪಿ…? ಎಂದು ಮತ್ತೊಂದು ಪ್ರಶ್ನಿ ಹಾಕಿದ್ದಾರೆ.

“ತಾಂಡಾಗಳು, ಹಟ್ಟಿಗಳು, ಮಜರೆಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕ್ರಾಂತಿಕಾರಕ “ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯಿದೆ” ಯನ್ನು ಜಾರಿಗೊಳಿಸಿ, ಲಕ್ಷಾಂತರ ಬಡ ಜನರಿಗೆ ಭೂಮಿಯ ಒಡೆತನದ ಹಕ್ಕು ನೀಡಿದ್ದು ನಮ್ಮ ಸರ್ಕಾರ. ಇದು ಜಾತಿವಾದವೇ ಬಿಜೆಪಿ…?’ಎಂದು ಮಗದೊಂದು ಪ್ರಶ್ನೆ ಎಸೆದಿದ್ದಾರೆ.

“ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಬಂಜಾರ ಸಮುದಾಯದ ಕುಲಕಸುಬಾದ ಕಸೂತಿ ವೃತ್ತಿಯನ್ನು ಅಭಿವೃದ್ಧಿ ಪಡಿಸಲು ರೂ.100 ಕೋಟಿ ಅನುದಾನ ನೀಡುತ್ತೇವೆ ಮತ್ತು ಕಸೂತಿ ಉತ್ಪನ್ನಗಳಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುತ್ತೇವೆ. ತಾಕತ್ತಿದ್ದರೆ ಬಿಜೆಪಿ ಇವುಗಳಿಗೆ ವಿರೋಧಿಸಲಿ” ಎಂದು ಜಾತಿವಾದಿ ಆರೋಪಕ್ಕೆ ಪ್ರತಿಯಾಗಿ ಸವಾಲು ಹಾಕಿದ್ದಾರೆ.

 ಇತ್ತ ಬಿಜೆಪಿ ಜಾತಿವಿಭಜಕಸಿದ್ದರಾಮಯ್ಯ ಎಂದು ಹ್ಯಾಶ್‌ಟ್ಯಾಗ್ ಬಳಸಿದರೆ, ಸಿದ್ದರಾಮಯ್ಯ #SocialJustice ಎಂಬ ಹ್ಯಾಶ್‌ಟ್ಯಾಗ್ ಬಳಸುತ್ತಿದ್ದಾರೆ. ಒಟ್ಟಾರೆ ಹಾನಗಲ್, ಸಿಂದಗಿ ಉಪಚುನಾವಣೆಯಿಂದ ಎರಡು ಪಕ್ಷಗಳ ಟ್ವೀಟ್ ಸಮರ ದಿನ ದಿನಕ್ಕೆ ರಂಗೇರುತ್ತಿದೆ.

ಇದನ್ನೂ ಓದಿ: ಸಿಎಂ ‘ಬುರುಡೆ ಬೊಮ್ಮಾಯಿ’ ಬಿಜೆಪಿ ‘ಬಂಡಲ್’: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...