Homeಅಂತರಾಷ್ಟ್ರೀಯಹಣ ವಂಚನೆ ಆರೋಪಿ ನೀರವ್‌ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಿ - ಇಂಗ್ಲೇಂಡ್ ಕೋರ್ಟ್‌ ತೀರ್ಪು

ಹಣ ವಂಚನೆ ಆರೋಪಿ ನೀರವ್‌ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಿ – ಇಂಗ್ಲೇಂಡ್ ಕೋರ್ಟ್‌ ತೀರ್ಪು

- Advertisement -
- Advertisement -

14,000 ಕೋಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಹಗರಣದ ಆರೋಪಿ, ಆಭರಣ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಇಂಗ್ಲೇಂಡ್ ನ್ಯಾಯಾಧೀಶರು ಗುರುವಾರ ತೀರ್ಪು ನೀಡಿದ್ದಾರೆ. ಸಾಂಕ್ರಾಮಿಕ ರೋಗ ಮತ್ತು ಭಾರತೀಯ ಜೈಲು ಪರಿಸ್ಥಿತಿಗಳಲ್ಲಿ ಅವರ ಮಾನಸಿಕ ಆರೋಗ್ಯವು ಹದಗೆಡುತ್ತಿದೆ ಎಂಬ ಆರೋಪಿಯ ವಾದಗಳನ್ನು ನ್ಯಾಯಾಲಯವು ತಳ್ಳಿಹಾಕಿದೆ.

“ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಮಾನವ ಹಕ್ಕುಗಳಿಗೆ ಅನುಸಾರವಾಗಿದೆ ಎಂದು ನನಗೆ ತೃಪ್ತಿ ಇದೆ” ಎಂದು ಜಿಲ್ಲಾ ನ್ಯಾಯಾಧೀಶ ಸ್ಯಾಮ್ಯುಯೆಲ್ ಗೂಝೀ ಹೇಳಿದ್ದು, ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 1 ಮಿಲಿಯನ್ ವಂಚನೆ: ನೀರವ್ ಮೋದಿ ಸಹೋದರನ ಮೇಲೆ ಅಮೆರಿಕಾದಲ್ಲಿ ಪ್ರಕರಣ ದಾಖಲು!

ಹಸ್ತಾಂತರಿಸಿದರೆ ನೀರವ್ ಮೋದಿಗೆ ನ್ಯಾಯ ದೊರೆಯುವುದಿಲ್ಲ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಧೀಶರು ಭಾರತ ಸರ್ಕಾರದ ಸಲ್ಲಿಕೆಗಳನ್ನು ಒಪ್ಪಿಕೊಂಡಿದ್ದಾರೆ. ಭಾರತದಲ್ಲಿ ನೀರವ್‌ ಮೋದಿಯು ವಿಚಾರಣೆ ಎದುರಿಸಬೇಕಾದ ಪ್ರಕರಣವು ಪ್ರಬಲವಾಗಿದೆ ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

“ನೀರವ್ ಮೋದಿ ನ್ಯಾಯಸಮ್ಮತ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆಂದು ನಾನು ಒಪ್ಪುವುದಿಲ್ಲ. ಈ ವ್ಯವಹಾರಗಳಲ್ಲಿ ಅಪ್ರಾಮಾಣಿಕತೆಯ ಪ್ರಕ್ರಿಯೆ ಇದೆ” ಎಂದು ನ್ಯಾಧೀಶರು ಹೇಳಿದ್ದಾರೆ.

49 ವರ್ಷದ ನೀರವ್ ಮೋದಿ, ವೆಸ್ಟ್ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ನೈರುತ್ಯ ಲಂಡನ್‌ನ ವಾಂಡ್ಸ್‌ವರ್ತ್ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪನ್ನು ಇಂಗ್ಲೇಡ್‌ನ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರಿಗೆ ಸಹಿ ಹಾಕಲು ಕಳುಹಿಸಲಾಗುವುದು. ತೀರ್ಪಿನ ಫಲಿತಾಂಶವನ್ನು ಅವಲಂಬಿಸಿ ಎರಡೂ ಕಡೆಗಳಲ್ಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

ನೀರವ್ ಮೋದಿಯನ್ನು ಹಸ್ತಾಂತರ ವಾರಂಟ್‌ನಲ್ಲಿ ಮಾರ್ಚ್ 19, 2019 ರಂದು ಬಂಧಿಸಲಾಯಿತು.

ಇದನ್ನೂ ಓದಿ: ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ – ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತಕ್ಕೆ ತರುವುದು ಬೇಡ ಅಲ್ಲೇ ಇರಲಿ.
    ಇಲ್ಲಿಗೆ ತಂದರೆ ಮತ್ತಷ್ಟು ಖರ್ಚು.
    ಅವನ ಇರುವ ಆಸ್ತಿ ಪಾಸ್ತಿ ವಿವರಗಳನ್ನು ಪಡೆದು ಅದನ್ನು ಮುಟ್ಟುಗೋಲು ಹಾಕಲಿ.
    ನಂತರ ಸಾಲ ತೀರಿಸಬಹುದು

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...