Homeಅಂತರಾಷ್ಟ್ರೀಯಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

ಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

- Advertisement -
- Advertisement -

ಅಮೆರಿಕದಿಂದ ಗಡೀಪಾರು ಮಾಡಲಾದ ಹಲವಾರು ವಲಸಿಗರನ್ನು ಹೊತ್ತ ವಿಮಾನವು ಶನಿವಾರ ಬ್ರೆಸಿಲ್‌ನ ಉತ್ತರ ನಗರವಾದ ಮನೌಸ್‌ನಲ್ಲಿ ಇಳಿದಿದೆ. ಈ ವೇಳೆ ಪ್ರಯಾಣಿಕರಿಗೆ ಕೈಕೋಳಗಳನ್ನು ಹಾಕಿ ಕಳುಹಿಸಲಾಗಿದ್ದು, ಈ ಬಗ್ಗೆ ಬ್ರೆಜಿಲ್ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಮೆರಿಕದ ಈ ನಡೆಯು ಮಾನವ ಹಕ್ಕುಗಳ “ಸ್ಪಷ್ಟ ನಿರ್ಲಕ್ಷ್ಯ” ಎಂದು ಕರೆದಿದೆ ಎಂದು ಎಎಫ್‌ಪಿ ವರದಿ ಮಾಡಿದೆ.  

ಬ್ರೆಜಿಲ್ ವಿದೇಶಾಂಗ ಸಚಿವಾಲಯವು ಘಟನೆಯನ್ನು ಖಂಡಿಸಿದ್ದು, ಪ್ರಯಾಣಿಕರನ್ನು “ಅವಮಾನಕರವಾಗಿ ನಡೆಸಿಕೊಂಡಿರುವ” ಬಗ್ಗೆ ಅಮೆರಿಕದಿಂದ ವಿವರಣೆಯನ್ನು ಕೋರುವುದಾಗಿ ಹೇಳಿದೆ. ವಿಮಾನ ಬಂದ ನಂತರ ಬ್ರೆಜಿಲ್‌ನ ನ್ಯಾಯ ಸಚಿವಾಲಯವು ಅಮೆರಿಕದ ಅಧಿಕಾರಿಗಳಿಗೆ “ತಕ್ಷಣವೆ ಕೈಕೋಳವನ್ನು ತೆಗೆದುಹಾಕುವಂತೆ” ಆದೇಶಿಸಿದೆ. ವಲಸಿಗರನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಲ್ಯಾಟಿನ್ ಅಮೇರಿಕನ್ ದೇಶಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ವಲಸೆ ವಿರೋಧಿ ನಿಲುವನ್ನು ಎದುರಿಸುತ್ತಿವೆ. ಅದೇ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ನೂತನ ಅಧ್ಯಕ್ಷ ಟ್ರಂಪ್‌ ಅನಿಯಮಿತ ವಲಸೆ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ದೊಡ್ಡ ಪ್ರಮಾಣದ ಗಡೀಪಾರುಗಳನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಶುಕ್ರವಾರ ರಾತ್ರಿ 88 ಬ್ರೆಜಿಲಿಯನ್ನರನ್ನು ಕರೆದೊಯ್ದ ವಿಮಾನದ ಬಗ್ಗೆ ದೇಶದ ನ್ಯಾಯ ಸಚಿವ ರಿಕಾರ್ಡೊ ಲೆವಾಂಡೋವ್ಸ್ಕಿ ಅವರು ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಮಾತನಾಡಿ, ಬ್ರೆಜಿಲಿಯನ್ ನಾಗರಿಕರ ಮೂಲಭೂತ ಹಕ್ಕುಗಳ ಬಗ್ಗೆ ಸ್ಪಷ್ಟವಾದ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದ್ದಾರೆ. ಬ್ರೆಜಿಲ್ ಅಧಿಕಾರಿಗಳು ಅಮೆರಿಕ ಸರ್ಕಾರದ ಈ ಅವಮಾನಕರ ನಡವಳಿಕೆಯನ್ನು ವಿವರಿಸಲು ತ್ವರಿತವಾಗಿ ಕರೆ ನೀಡಿದ್ದಾರೆ.

ಗಡಿಪಾರಾದ ಬ್ರೆಸಿಲ್ ಪ್ರಜೆ, ಕಳೆದ ಏಳು ತಿಂಗಳುಗಳನ್ನು ಬಂಧನದಲ್ಲಿ ಕಳೆದ 31 ವರ್ಷದ ಕಂಪ್ಯೂಟರ್ ತಂತ್ರಜ್ಞ ಎಡ್ಗರ್ ಡ ಸಿಲ್ವಾ ಮೌರಾ, “ವಿಮಾನದಲ್ಲಿ ಅವರು ನಮಗೆ ನೀರು ನೀಡಲಿಲ್ಲ. ನಮ್ಮ ಕೈಕಾಲುಗಳನ್ನು ಕಟ್ಟಲಾಗಿತ್ತು. ಅವರು ನಮ್ಮನ್ನು ಶೌಚಾಲಯಕ್ಕೂ ಹೋಗಲು ಬಿಡಲಿಲ್ಲ” ಎಂದು ಅನುಭವವನ್ನು ವಿವರಿಸಿದ್ದಾರೆ. ಜೊತೆಗೆ, ವಿಮಾನವು ತುಂಬಾ ಬಿಸಿಯಾಗಿತ್ತು, ಕೆಲವರು ಮೂರ್ಛೆ ಹೋದರು ಎಂದು ಅವರು ಹೇಳಿದ್ದಾರೆ.

21 ವರ್ಷದ ಫ್ರೀಲ್ಯಾನ್ಸರ್ ಲೂಯಿಸ್ ಆಂಟೋನಿಯೊ ರೊಡ್ರಿಗಸ್ ಸ್ಯಾಂಟೋಸ್, ತಾಂತ್ರಿಕ ಸಮಸ್ಯೆಯಿಂದಾಗಿ ಹವಾನಿಯಂತ್ರಣವಿಲ್ಲದೆ ನಾಲ್ಕು ಗಂಟೆಗಳ ಹಾರಾಟದ ಸಮಯದಲ್ಲಿ “ಉಸಿರಾಟದ ಸಮಸ್ಯೆಗಳಿಂದ” ಬಳಲುತ್ತಿರುವ ಸಹ ಪ್ರಯಾಣಿಕರ “ದುಃಸ್ವಪ್ನ”ವನ್ನು ವಿವರಿಸಿದ್ದಾರೆ. “ವಿಷಯಗಳು ಈಗಾಗಲೇ ಬದಲಾಗಿದ್ದು, ವಲಸಿಗರನ್ನು ಅಪರಾಧಿಗಳಂತೆ ಪರಿಗಣಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಮೂಲತಃ ಬೆಲೊಗೆ ಹೋಗುವ ವಿಮಾನ ಹಾರಿಜಾಂಟೆ, ತಾಂತ್ರಿಕ ಸಮಸ್ಯೆಯಿಂದಾಗಿ ಮನೌಸ್‌ನಲ್ಲಿ ಇಳಿಯಬೇಕಾಯಿತು. ಆದಾಗ್ಯೂ, ಗಡೀಪಾರಿಗೆ ಒಳಗಾದ ಜನರಿರುವ ವಿಮಾನವು ಟ್ರಂಪ್‌ ಅವರ ಇತ್ತೀಚಿನ ಯಾವುದೇ ವಲಸೆ ಆದೇಶಗಳಿಗೆ ನೇರವಾಗಿ ಸಂಬಂಧಿಸಿಲ್ಲ ಎಂದು ವರದಿಯಾಗಿದ್ದು, 2017 ರ ದ್ವಿಪಕ್ಷೀಯ ಒಪ್ಪಂದದ ಭಾಗ ಈ ಗಡಿಪಾರು ನಡೆಸಲಾಗಿದೆ ಎಂದು ಸರ್ಕಾರಿ ಮೂಲವೊಂದು ಸ್ಪಷ್ಟಪಡಿಸಿದೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...