Homeಅಂತರಾಷ್ಟ್ರೀಯಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

ಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

- Advertisement -
- Advertisement -

ಅಮೆರಿಕದಿಂದ ಗಡೀಪಾರು ಮಾಡಲಾದ ಹಲವಾರು ವಲಸಿಗರನ್ನು ಹೊತ್ತ ವಿಮಾನವು ಶನಿವಾರ ಬ್ರೆಸಿಲ್‌ನ ಉತ್ತರ ನಗರವಾದ ಮನೌಸ್‌ನಲ್ಲಿ ಇಳಿದಿದೆ. ಈ ವೇಳೆ ಪ್ರಯಾಣಿಕರಿಗೆ ಕೈಕೋಳಗಳನ್ನು ಹಾಕಿ ಕಳುಹಿಸಲಾಗಿದ್ದು, ಈ ಬಗ್ಗೆ ಬ್ರೆಜಿಲ್ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಮೆರಿಕದ ಈ ನಡೆಯು ಮಾನವ ಹಕ್ಕುಗಳ “ಸ್ಪಷ್ಟ ನಿರ್ಲಕ್ಷ್ಯ” ಎಂದು ಕರೆದಿದೆ ಎಂದು ಎಎಫ್‌ಪಿ ವರದಿ ಮಾಡಿದೆ.  

ಬ್ರೆಜಿಲ್ ವಿದೇಶಾಂಗ ಸಚಿವಾಲಯವು ಘಟನೆಯನ್ನು ಖಂಡಿಸಿದ್ದು, ಪ್ರಯಾಣಿಕರನ್ನು “ಅವಮಾನಕರವಾಗಿ ನಡೆಸಿಕೊಂಡಿರುವ” ಬಗ್ಗೆ ಅಮೆರಿಕದಿಂದ ವಿವರಣೆಯನ್ನು ಕೋರುವುದಾಗಿ ಹೇಳಿದೆ. ವಿಮಾನ ಬಂದ ನಂತರ ಬ್ರೆಜಿಲ್‌ನ ನ್ಯಾಯ ಸಚಿವಾಲಯವು ಅಮೆರಿಕದ ಅಧಿಕಾರಿಗಳಿಗೆ “ತಕ್ಷಣವೆ ಕೈಕೋಳವನ್ನು ತೆಗೆದುಹಾಕುವಂತೆ” ಆದೇಶಿಸಿದೆ. ವಲಸಿಗರನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಲ್ಯಾಟಿನ್ ಅಮೇರಿಕನ್ ದೇಶಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ವಲಸೆ ವಿರೋಧಿ ನಿಲುವನ್ನು ಎದುರಿಸುತ್ತಿವೆ. ಅದೇ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ನೂತನ ಅಧ್ಯಕ್ಷ ಟ್ರಂಪ್‌ ಅನಿಯಮಿತ ವಲಸೆ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ದೊಡ್ಡ ಪ್ರಮಾಣದ ಗಡೀಪಾರುಗಳನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಶುಕ್ರವಾರ ರಾತ್ರಿ 88 ಬ್ರೆಜಿಲಿಯನ್ನರನ್ನು ಕರೆದೊಯ್ದ ವಿಮಾನದ ಬಗ್ಗೆ ದೇಶದ ನ್ಯಾಯ ಸಚಿವ ರಿಕಾರ್ಡೊ ಲೆವಾಂಡೋವ್ಸ್ಕಿ ಅವರು ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಮಾತನಾಡಿ, ಬ್ರೆಜಿಲಿಯನ್ ನಾಗರಿಕರ ಮೂಲಭೂತ ಹಕ್ಕುಗಳ ಬಗ್ಗೆ ಸ್ಪಷ್ಟವಾದ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದ್ದಾರೆ. ಬ್ರೆಜಿಲ್ ಅಧಿಕಾರಿಗಳು ಅಮೆರಿಕ ಸರ್ಕಾರದ ಈ ಅವಮಾನಕರ ನಡವಳಿಕೆಯನ್ನು ವಿವರಿಸಲು ತ್ವರಿತವಾಗಿ ಕರೆ ನೀಡಿದ್ದಾರೆ.

ಗಡಿಪಾರಾದ ಬ್ರೆಸಿಲ್ ಪ್ರಜೆ, ಕಳೆದ ಏಳು ತಿಂಗಳುಗಳನ್ನು ಬಂಧನದಲ್ಲಿ ಕಳೆದ 31 ವರ್ಷದ ಕಂಪ್ಯೂಟರ್ ತಂತ್ರಜ್ಞ ಎಡ್ಗರ್ ಡ ಸಿಲ್ವಾ ಮೌರಾ, “ವಿಮಾನದಲ್ಲಿ ಅವರು ನಮಗೆ ನೀರು ನೀಡಲಿಲ್ಲ. ನಮ್ಮ ಕೈಕಾಲುಗಳನ್ನು ಕಟ್ಟಲಾಗಿತ್ತು. ಅವರು ನಮ್ಮನ್ನು ಶೌಚಾಲಯಕ್ಕೂ ಹೋಗಲು ಬಿಡಲಿಲ್ಲ” ಎಂದು ಅನುಭವವನ್ನು ವಿವರಿಸಿದ್ದಾರೆ. ಜೊತೆಗೆ, ವಿಮಾನವು ತುಂಬಾ ಬಿಸಿಯಾಗಿತ್ತು, ಕೆಲವರು ಮೂರ್ಛೆ ಹೋದರು ಎಂದು ಅವರು ಹೇಳಿದ್ದಾರೆ.

21 ವರ್ಷದ ಫ್ರೀಲ್ಯಾನ್ಸರ್ ಲೂಯಿಸ್ ಆಂಟೋನಿಯೊ ರೊಡ್ರಿಗಸ್ ಸ್ಯಾಂಟೋಸ್, ತಾಂತ್ರಿಕ ಸಮಸ್ಯೆಯಿಂದಾಗಿ ಹವಾನಿಯಂತ್ರಣವಿಲ್ಲದೆ ನಾಲ್ಕು ಗಂಟೆಗಳ ಹಾರಾಟದ ಸಮಯದಲ್ಲಿ “ಉಸಿರಾಟದ ಸಮಸ್ಯೆಗಳಿಂದ” ಬಳಲುತ್ತಿರುವ ಸಹ ಪ್ರಯಾಣಿಕರ “ದುಃಸ್ವಪ್ನ”ವನ್ನು ವಿವರಿಸಿದ್ದಾರೆ. “ವಿಷಯಗಳು ಈಗಾಗಲೇ ಬದಲಾಗಿದ್ದು, ವಲಸಿಗರನ್ನು ಅಪರಾಧಿಗಳಂತೆ ಪರಿಗಣಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಮೂಲತಃ ಬೆಲೊಗೆ ಹೋಗುವ ವಿಮಾನ ಹಾರಿಜಾಂಟೆ, ತಾಂತ್ರಿಕ ಸಮಸ್ಯೆಯಿಂದಾಗಿ ಮನೌಸ್‌ನಲ್ಲಿ ಇಳಿಯಬೇಕಾಯಿತು. ಆದಾಗ್ಯೂ, ಗಡೀಪಾರಿಗೆ ಒಳಗಾದ ಜನರಿರುವ ವಿಮಾನವು ಟ್ರಂಪ್‌ ಅವರ ಇತ್ತೀಚಿನ ಯಾವುದೇ ವಲಸೆ ಆದೇಶಗಳಿಗೆ ನೇರವಾಗಿ ಸಂಬಂಧಿಸಿಲ್ಲ ಎಂದು ವರದಿಯಾಗಿದ್ದು, 2017 ರ ದ್ವಿಪಕ್ಷೀಯ ಒಪ್ಪಂದದ ಭಾಗ ಈ ಗಡಿಪಾರು ನಡೆಸಲಾಗಿದೆ ಎಂದು ಸರ್ಕಾರಿ ಮೂಲವೊಂದು ಸ್ಪಷ್ಟಪಡಿಸಿದೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...