Homeಮುಖಪುಟಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಿದ್ದಾರೆ. ಪ್ರಚಾರ ಭಾಷಣದ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದರಿಂದ ಮೋದಿ ಅವರು ಕಕ್ಕಾಬಿಕ್ಕಿಯಾದ ಘಟನೆ ಭಾನುವಾರ ಸಂಭವಿಸಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ಪ್ರಧಾನಿ ಮೋದಿ ಅವರ ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಟೆಲಿಪ್ರಾಂಪ್ಟರ್ ಹಾಕಿಕೊಂಡು, ಭಾಷಣ ಮಾಡುತ್ತಾರೆ ಎಂಬ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಈ ಹಿಂದೆಯೂ ಒಮ್ಮೆ ಭಾಷಣದ ವೇಳೆ ಟೆಲಿಪ್ರಾಮ್ಟರ್‌ ಕೈಕೊಟ್ಟಿದ್ದರಿಂದ ಮೋದಿ ಅವರು ಮಾತನಾಡುವಾಗ ಕಕ್ಕಾಬಿಕ್ಕಿಯಾಗಿದ್ದು ವರದಿಯಾಗಿತ್ತು. ಇದೀಗ, ಮತ್ತೆ ಅಂತದ್ಧೇ ಘಟನೆ ನಡೆದಿದೆ.

ಭಾನುವಾರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶ ಆಯೋಜಿಸಿತ್ತು. ಪ್ರಚಾರದಲ್ಲಿ ಭಾಗಿಯಾಗಿದ್ದ ಮೋದಿ ಅವರು ಅಬ್ಬರದ ಭಾಷಣ ಮಾಡಲು ಮುಂದಾಗಿದ್ದರು. ಈ ವೇಳೆ, ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮೋದಿ ಅವರು ಭಾಷಣದ ಮಧ್ಯೆ ತಡವರಿಸಿದ್ದಾರೆ. ಭಾಷಣವನ್ನು ಸುಮಾರು 30 ಸೆಕೆಂಡ್‌ಗಳ ಕಾಲ ನಿಲ್ಲಿಸಿದ್ದು, ಟೆಲಿಪ್ರಾಂಪ್ಟರ್ ಪುನರಾರಂಭವಾದ ಬಳಿಕ ಮತ್ತೆ ಭಾಷಣ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ಮೋದಿ ಅವರು ತಮ್ಮ ಭಾಷಣಗಳ ಸಮಯದಲ್ಲಿ ಟೆಲಿಪ್ರಾಂಪ್ಟರ್‌ ಅನ್ನು ಬಳಸುತ್ತಾರೆ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ದೆಹಲಿಯಲ್ಲಿ ಬಿಜೆಪಿಯಂತೆ ಮೋದಿಜಿ ಅವರ ಟೆಲಿಪ್ರಾಂಪ್ಟರ್ ಕೂಡ ವಿಫಲವಾಗಿದೆ…” ಎಎಪಿ ಲೇವಡಿ ಮಾಡಿದೆ.

ಈ ಹಿಂದೆ, 2022ರ ಜನವರಿ 18ರಂದು world economy forum ಆಯೋಜಿಸಿದ್ದ ದಾವೂಸ್ ಅಜೆಂಡಾ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದರು. ಆ ವೇಳೆಯೂ ಶೃಂಗಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತ್ತು. ಆಗಲೂ ಭಾಷಣ ಮಾಡುವಾಗ ಮೋದಿ ತಬ್ಬಿಬ್ಬಾಗಿದ್ದರು.

ಆ ವೇಳೆ, ಮೋದಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದ ಸಾಮಾಜಿಕ ಮಾಧ್ಯಮ ಬಳಕೆದಾರರು, ಪ್ರಧಾನ ಮಂತ್ರಿ ಮೋದಿಯವರು ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗ ಅವರ ಸುತ್ತಲೂ ಕಾಣುವ ಗಾಜಿನ ಫಲಕವು ಬುಲೆಟ್ ಪ್ರೂಫ್ ಗ್ಲಾಸ್ ಎಂದು ಹಲವರು ಭಾವಿಸುತ್ತಾರೆ. ಆದರೆ, ಅದು ವಾಸ್ತವವಾಗಿ ಟೆಲಿಪ್ರಾಂಪ್ಟರ್ ಆಗಿದೆ ಎಂದು ಹೇಳಿದ್ದಾರೆ.

“ಟೆಲಿಪ್ರಾಂಪ್ಟರ್ ಸಹಾಯದಿಂದ ಯಾವುದೇ ಸಮಸ್ಯೆಯಿಲ್ಲದೆ ಪ್ರಧಾನಿ ಭಾಷಣ ಮಾಡುತ್ತಾರೆ. ಅವರ ಭಾಷಣದ ವೇಗವನ್ನು ನಿರ್ವಾಹಕರು ನಿಯಂತ್ರಿಸುತ್ತಾರೆ. ಆದರೆ, ಆ ಟೆಲಿಪ್ರಾಂಪ್ಟರ್ ಕಾಣದಂತೆ ವಿಡಿಯೋಗ್ರಫರ್‌ಗಳು ಚಿತ್ರೀಕರಿಸುತ್ತಾರೆ” ಎಂದು ಆರೋಪಿಸಿದ್ದಾರೆ.

ಅದಾದ ಬಳಿಕ, 2022ರ ಆಗಸ್ಟ್‌ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಮೋದಿ ಅವರು ಟೆಲಿಪ್ರಾಂಪ್ಟರ್‌ಅನ್ನು ಬಳಸದೆ, ಭಾಷಣದ ಪ್ರಿಂಟ್‌ಔಟ್‌ ತೆಗೆದ ಪೇಪರ್‌ ಬಳಸಿಕೊಂಡು ಭಾಷಣ ಮಾಡಿದ್ದರು. ಇದೀಗ, ಮತ್ತೆ ಟೆಲಿಪ್ರಾಂಪ್ಟರ್ ಬಳಸಿದ್ದು, ಯಡವಟ್ಟು ಮಾಡಿಕೊಂಡಿದ್ದಾರೆ. ಹಾಗಾಗಿ ಮತ್ತೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...