Homeಮುಖಪುಟಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಿದ್ದಾರೆ. ಪ್ರಚಾರ ಭಾಷಣದ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದರಿಂದ ಮೋದಿ ಅವರು ಕಕ್ಕಾಬಿಕ್ಕಿಯಾದ ಘಟನೆ ಭಾನುವಾರ ಸಂಭವಿಸಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ಪ್ರಧಾನಿ ಮೋದಿ ಅವರ ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಟೆಲಿಪ್ರಾಂಪ್ಟರ್ ಹಾಕಿಕೊಂಡು, ಭಾಷಣ ಮಾಡುತ್ತಾರೆ ಎಂಬ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಈ ಹಿಂದೆಯೂ ಒಮ್ಮೆ ಭಾಷಣದ ವೇಳೆ ಟೆಲಿಪ್ರಾಮ್ಟರ್‌ ಕೈಕೊಟ್ಟಿದ್ದರಿಂದ ಮೋದಿ ಅವರು ಮಾತನಾಡುವಾಗ ಕಕ್ಕಾಬಿಕ್ಕಿಯಾಗಿದ್ದು ವರದಿಯಾಗಿತ್ತು. ಇದೀಗ, ಮತ್ತೆ ಅಂತದ್ಧೇ ಘಟನೆ ನಡೆದಿದೆ.

ಭಾನುವಾರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶ ಆಯೋಜಿಸಿತ್ತು. ಪ್ರಚಾರದಲ್ಲಿ ಭಾಗಿಯಾಗಿದ್ದ ಮೋದಿ ಅವರು ಅಬ್ಬರದ ಭಾಷಣ ಮಾಡಲು ಮುಂದಾಗಿದ್ದರು. ಈ ವೇಳೆ, ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮೋದಿ ಅವರು ಭಾಷಣದ ಮಧ್ಯೆ ತಡವರಿಸಿದ್ದಾರೆ. ಭಾಷಣವನ್ನು ಸುಮಾರು 30 ಸೆಕೆಂಡ್‌ಗಳ ಕಾಲ ನಿಲ್ಲಿಸಿದ್ದು, ಟೆಲಿಪ್ರಾಂಪ್ಟರ್ ಪುನರಾರಂಭವಾದ ಬಳಿಕ ಮತ್ತೆ ಭಾಷಣ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ಮೋದಿ ಅವರು ತಮ್ಮ ಭಾಷಣಗಳ ಸಮಯದಲ್ಲಿ ಟೆಲಿಪ್ರಾಂಪ್ಟರ್‌ ಅನ್ನು ಬಳಸುತ್ತಾರೆ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ದೆಹಲಿಯಲ್ಲಿ ಬಿಜೆಪಿಯಂತೆ ಮೋದಿಜಿ ಅವರ ಟೆಲಿಪ್ರಾಂಪ್ಟರ್ ಕೂಡ ವಿಫಲವಾಗಿದೆ…” ಎಎಪಿ ಲೇವಡಿ ಮಾಡಿದೆ.

ಈ ಹಿಂದೆ, 2022ರ ಜನವರಿ 18ರಂದು world economy forum ಆಯೋಜಿಸಿದ್ದ ದಾವೂಸ್ ಅಜೆಂಡಾ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದರು. ಆ ವೇಳೆಯೂ ಶೃಂಗಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತ್ತು. ಆಗಲೂ ಭಾಷಣ ಮಾಡುವಾಗ ಮೋದಿ ತಬ್ಬಿಬ್ಬಾಗಿದ್ದರು.

ಆ ವೇಳೆ, ಮೋದಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದ ಸಾಮಾಜಿಕ ಮಾಧ್ಯಮ ಬಳಕೆದಾರರು, ಪ್ರಧಾನ ಮಂತ್ರಿ ಮೋದಿಯವರು ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗ ಅವರ ಸುತ್ತಲೂ ಕಾಣುವ ಗಾಜಿನ ಫಲಕವು ಬುಲೆಟ್ ಪ್ರೂಫ್ ಗ್ಲಾಸ್ ಎಂದು ಹಲವರು ಭಾವಿಸುತ್ತಾರೆ. ಆದರೆ, ಅದು ವಾಸ್ತವವಾಗಿ ಟೆಲಿಪ್ರಾಂಪ್ಟರ್ ಆಗಿದೆ ಎಂದು ಹೇಳಿದ್ದಾರೆ.

“ಟೆಲಿಪ್ರಾಂಪ್ಟರ್ ಸಹಾಯದಿಂದ ಯಾವುದೇ ಸಮಸ್ಯೆಯಿಲ್ಲದೆ ಪ್ರಧಾನಿ ಭಾಷಣ ಮಾಡುತ್ತಾರೆ. ಅವರ ಭಾಷಣದ ವೇಗವನ್ನು ನಿರ್ವಾಹಕರು ನಿಯಂತ್ರಿಸುತ್ತಾರೆ. ಆದರೆ, ಆ ಟೆಲಿಪ್ರಾಂಪ್ಟರ್ ಕಾಣದಂತೆ ವಿಡಿಯೋಗ್ರಫರ್‌ಗಳು ಚಿತ್ರೀಕರಿಸುತ್ತಾರೆ” ಎಂದು ಆರೋಪಿಸಿದ್ದಾರೆ.

ಅದಾದ ಬಳಿಕ, 2022ರ ಆಗಸ್ಟ್‌ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಮೋದಿ ಅವರು ಟೆಲಿಪ್ರಾಂಪ್ಟರ್‌ಅನ್ನು ಬಳಸದೆ, ಭಾಷಣದ ಪ್ರಿಂಟ್‌ಔಟ್‌ ತೆಗೆದ ಪೇಪರ್‌ ಬಳಸಿಕೊಂಡು ಭಾಷಣ ಮಾಡಿದ್ದರು. ಇದೀಗ, ಮತ್ತೆ ಟೆಲಿಪ್ರಾಂಪ್ಟರ್ ಬಳಸಿದ್ದು, ಯಡವಟ್ಟು ಮಾಡಿಕೊಂಡಿದ್ದಾರೆ. ಹಾಗಾಗಿ ಮತ್ತೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...