Homeಮುಖಪುಟಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಿದ್ದಾರೆ. ಪ್ರಚಾರ ಭಾಷಣದ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದರಿಂದ ಮೋದಿ ಅವರು ಕಕ್ಕಾಬಿಕ್ಕಿಯಾದ ಘಟನೆ ಭಾನುವಾರ ಸಂಭವಿಸಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ಪ್ರಧಾನಿ ಮೋದಿ ಅವರ ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಟೆಲಿಪ್ರಾಂಪ್ಟರ್ ಹಾಕಿಕೊಂಡು, ಭಾಷಣ ಮಾಡುತ್ತಾರೆ ಎಂಬ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಈ ಹಿಂದೆಯೂ ಒಮ್ಮೆ ಭಾಷಣದ ವೇಳೆ ಟೆಲಿಪ್ರಾಮ್ಟರ್‌ ಕೈಕೊಟ್ಟಿದ್ದರಿಂದ ಮೋದಿ ಅವರು ಮಾತನಾಡುವಾಗ ಕಕ್ಕಾಬಿಕ್ಕಿಯಾಗಿದ್ದು ವರದಿಯಾಗಿತ್ತು. ಇದೀಗ, ಮತ್ತೆ ಅಂತದ್ಧೇ ಘಟನೆ ನಡೆದಿದೆ.

ಭಾನುವಾರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶ ಆಯೋಜಿಸಿತ್ತು. ಪ್ರಚಾರದಲ್ಲಿ ಭಾಗಿಯಾಗಿದ್ದ ಮೋದಿ ಅವರು ಅಬ್ಬರದ ಭಾಷಣ ಮಾಡಲು ಮುಂದಾಗಿದ್ದರು. ಈ ವೇಳೆ, ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮೋದಿ ಅವರು ಭಾಷಣದ ಮಧ್ಯೆ ತಡವರಿಸಿದ್ದಾರೆ. ಭಾಷಣವನ್ನು ಸುಮಾರು 30 ಸೆಕೆಂಡ್‌ಗಳ ಕಾಲ ನಿಲ್ಲಿಸಿದ್ದು, ಟೆಲಿಪ್ರಾಂಪ್ಟರ್ ಪುನರಾರಂಭವಾದ ಬಳಿಕ ಮತ್ತೆ ಭಾಷಣ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ಮೋದಿ ಅವರು ತಮ್ಮ ಭಾಷಣಗಳ ಸಮಯದಲ್ಲಿ ಟೆಲಿಪ್ರಾಂಪ್ಟರ್‌ ಅನ್ನು ಬಳಸುತ್ತಾರೆ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ದೆಹಲಿಯಲ್ಲಿ ಬಿಜೆಪಿಯಂತೆ ಮೋದಿಜಿ ಅವರ ಟೆಲಿಪ್ರಾಂಪ್ಟರ್ ಕೂಡ ವಿಫಲವಾಗಿದೆ…” ಎಎಪಿ ಲೇವಡಿ ಮಾಡಿದೆ.

ಈ ಹಿಂದೆ, 2022ರ ಜನವರಿ 18ರಂದು world economy forum ಆಯೋಜಿಸಿದ್ದ ದಾವೂಸ್ ಅಜೆಂಡಾ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದರು. ಆ ವೇಳೆಯೂ ಶೃಂಗಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತ್ತು. ಆಗಲೂ ಭಾಷಣ ಮಾಡುವಾಗ ಮೋದಿ ತಬ್ಬಿಬ್ಬಾಗಿದ್ದರು.

ಆ ವೇಳೆ, ಮೋದಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದ ಸಾಮಾಜಿಕ ಮಾಧ್ಯಮ ಬಳಕೆದಾರರು, ಪ್ರಧಾನ ಮಂತ್ರಿ ಮೋದಿಯವರು ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗ ಅವರ ಸುತ್ತಲೂ ಕಾಣುವ ಗಾಜಿನ ಫಲಕವು ಬುಲೆಟ್ ಪ್ರೂಫ್ ಗ್ಲಾಸ್ ಎಂದು ಹಲವರು ಭಾವಿಸುತ್ತಾರೆ. ಆದರೆ, ಅದು ವಾಸ್ತವವಾಗಿ ಟೆಲಿಪ್ರಾಂಪ್ಟರ್ ಆಗಿದೆ ಎಂದು ಹೇಳಿದ್ದಾರೆ.

“ಟೆಲಿಪ್ರಾಂಪ್ಟರ್ ಸಹಾಯದಿಂದ ಯಾವುದೇ ಸಮಸ್ಯೆಯಿಲ್ಲದೆ ಪ್ರಧಾನಿ ಭಾಷಣ ಮಾಡುತ್ತಾರೆ. ಅವರ ಭಾಷಣದ ವೇಗವನ್ನು ನಿರ್ವಾಹಕರು ನಿಯಂತ್ರಿಸುತ್ತಾರೆ. ಆದರೆ, ಆ ಟೆಲಿಪ್ರಾಂಪ್ಟರ್ ಕಾಣದಂತೆ ವಿಡಿಯೋಗ್ರಫರ್‌ಗಳು ಚಿತ್ರೀಕರಿಸುತ್ತಾರೆ” ಎಂದು ಆರೋಪಿಸಿದ್ದಾರೆ.

ಅದಾದ ಬಳಿಕ, 2022ರ ಆಗಸ್ಟ್‌ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಮೋದಿ ಅವರು ಟೆಲಿಪ್ರಾಂಪ್ಟರ್‌ಅನ್ನು ಬಳಸದೆ, ಭಾಷಣದ ಪ್ರಿಂಟ್‌ಔಟ್‌ ತೆಗೆದ ಪೇಪರ್‌ ಬಳಸಿಕೊಂಡು ಭಾಷಣ ಮಾಡಿದ್ದರು. ಇದೀಗ, ಮತ್ತೆ ಟೆಲಿಪ್ರಾಂಪ್ಟರ್ ಬಳಸಿದ್ದು, ಯಡವಟ್ಟು ಮಾಡಿಕೊಂಡಿದ್ದಾರೆ. ಹಾಗಾಗಿ ಮತ್ತೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...