Homeಮುಖಪುಟಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಿದ್ದಾರೆ. ಪ್ರಚಾರ ಭಾಷಣದ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದರಿಂದ ಮೋದಿ ಅವರು ಕಕ್ಕಾಬಿಕ್ಕಿಯಾದ ಘಟನೆ ಭಾನುವಾರ ಸಂಭವಿಸಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ಪ್ರಧಾನಿ ಮೋದಿ ಅವರ ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಟೆಲಿಪ್ರಾಂಪ್ಟರ್ ಹಾಕಿಕೊಂಡು, ಭಾಷಣ ಮಾಡುತ್ತಾರೆ ಎಂಬ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಈ ಹಿಂದೆಯೂ ಒಮ್ಮೆ ಭಾಷಣದ ವೇಳೆ ಟೆಲಿಪ್ರಾಮ್ಟರ್‌ ಕೈಕೊಟ್ಟಿದ್ದರಿಂದ ಮೋದಿ ಅವರು ಮಾತನಾಡುವಾಗ ಕಕ್ಕಾಬಿಕ್ಕಿಯಾಗಿದ್ದು ವರದಿಯಾಗಿತ್ತು. ಇದೀಗ, ಮತ್ತೆ ಅಂತದ್ಧೇ ಘಟನೆ ನಡೆದಿದೆ.

ಭಾನುವಾರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶ ಆಯೋಜಿಸಿತ್ತು. ಪ್ರಚಾರದಲ್ಲಿ ಭಾಗಿಯಾಗಿದ್ದ ಮೋದಿ ಅವರು ಅಬ್ಬರದ ಭಾಷಣ ಮಾಡಲು ಮುಂದಾಗಿದ್ದರು. ಈ ವೇಳೆ, ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮೋದಿ ಅವರು ಭಾಷಣದ ಮಧ್ಯೆ ತಡವರಿಸಿದ್ದಾರೆ. ಭಾಷಣವನ್ನು ಸುಮಾರು 30 ಸೆಕೆಂಡ್‌ಗಳ ಕಾಲ ನಿಲ್ಲಿಸಿದ್ದು, ಟೆಲಿಪ್ರಾಂಪ್ಟರ್ ಪುನರಾರಂಭವಾದ ಬಳಿಕ ಮತ್ತೆ ಭಾಷಣ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ಮೋದಿ ಅವರು ತಮ್ಮ ಭಾಷಣಗಳ ಸಮಯದಲ್ಲಿ ಟೆಲಿಪ್ರಾಂಪ್ಟರ್‌ ಅನ್ನು ಬಳಸುತ್ತಾರೆ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ದೆಹಲಿಯಲ್ಲಿ ಬಿಜೆಪಿಯಂತೆ ಮೋದಿಜಿ ಅವರ ಟೆಲಿಪ್ರಾಂಪ್ಟರ್ ಕೂಡ ವಿಫಲವಾಗಿದೆ…” ಎಎಪಿ ಲೇವಡಿ ಮಾಡಿದೆ.

ಈ ಹಿಂದೆ, 2022ರ ಜನವರಿ 18ರಂದು world economy forum ಆಯೋಜಿಸಿದ್ದ ದಾವೂಸ್ ಅಜೆಂಡಾ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದರು. ಆ ವೇಳೆಯೂ ಶೃಂಗಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತ್ತು. ಆಗಲೂ ಭಾಷಣ ಮಾಡುವಾಗ ಮೋದಿ ತಬ್ಬಿಬ್ಬಾಗಿದ್ದರು.

ಆ ವೇಳೆ, ಮೋದಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದ ಸಾಮಾಜಿಕ ಮಾಧ್ಯಮ ಬಳಕೆದಾರರು, ಪ್ರಧಾನ ಮಂತ್ರಿ ಮೋದಿಯವರು ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗ ಅವರ ಸುತ್ತಲೂ ಕಾಣುವ ಗಾಜಿನ ಫಲಕವು ಬುಲೆಟ್ ಪ್ರೂಫ್ ಗ್ಲಾಸ್ ಎಂದು ಹಲವರು ಭಾವಿಸುತ್ತಾರೆ. ಆದರೆ, ಅದು ವಾಸ್ತವವಾಗಿ ಟೆಲಿಪ್ರಾಂಪ್ಟರ್ ಆಗಿದೆ ಎಂದು ಹೇಳಿದ್ದಾರೆ.

“ಟೆಲಿಪ್ರಾಂಪ್ಟರ್ ಸಹಾಯದಿಂದ ಯಾವುದೇ ಸಮಸ್ಯೆಯಿಲ್ಲದೆ ಪ್ರಧಾನಿ ಭಾಷಣ ಮಾಡುತ್ತಾರೆ. ಅವರ ಭಾಷಣದ ವೇಗವನ್ನು ನಿರ್ವಾಹಕರು ನಿಯಂತ್ರಿಸುತ್ತಾರೆ. ಆದರೆ, ಆ ಟೆಲಿಪ್ರಾಂಪ್ಟರ್ ಕಾಣದಂತೆ ವಿಡಿಯೋಗ್ರಫರ್‌ಗಳು ಚಿತ್ರೀಕರಿಸುತ್ತಾರೆ” ಎಂದು ಆರೋಪಿಸಿದ್ದಾರೆ.

ಅದಾದ ಬಳಿಕ, 2022ರ ಆಗಸ್ಟ್‌ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಮೋದಿ ಅವರು ಟೆಲಿಪ್ರಾಂಪ್ಟರ್‌ಅನ್ನು ಬಳಸದೆ, ಭಾಷಣದ ಪ್ರಿಂಟ್‌ಔಟ್‌ ತೆಗೆದ ಪೇಪರ್‌ ಬಳಸಿಕೊಂಡು ಭಾಷಣ ಮಾಡಿದ್ದರು. ಇದೀಗ, ಮತ್ತೆ ಟೆಲಿಪ್ರಾಂಪ್ಟರ್ ಬಳಸಿದ್ದು, ಯಡವಟ್ಟು ಮಾಡಿಕೊಂಡಿದ್ದಾರೆ. ಹಾಗಾಗಿ ಮತ್ತೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...