Homeಮುಖಪುಟ‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ...

‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ವಾಗ್ದಾಳಿ

ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿಯು ಆಗಿರುವ ಅವರು ಹೇಳಿದ್ದಾರೆ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಬಿಜೆಪಿ ಮೌನ ವಹಿಸಿದ್ದರೂ, ಪಕ್ಷದ ಹಿರಿಯ ನಾಯಕ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತ ಕುಮಾರ್ ಅವರು ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಬಿಡುಗಡೆಗೆ ಅವಕಾಶ ನೀಡಿದ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಅವರು ಹೇಳಿದ್ದು, ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದಿ ಪ್ರಿಂಟ್ ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ ಅವರು,“ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ. ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ. ಯಾವುದೇ ಸರ್ಕಾರವಿರಲಿ ಅಪರಾಧಿಗಳಿಗೆ ಈ ರೀತಿಯ ಕ್ಷಮಾದಾನ ನೀಡುವುದನ್ನು ಹೇಗೆ ಅನುಮತಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗುಜರಾತ್ ಸರ್ಕಾರವು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಪ್ರಕರಣದಲ್ಲಿ ಅಪರಾಧಿಗಳಾಗಿರುವ ಜನರನ್ನು ಗಲ್ಲಿಗೇರಿಸಬೇಕು” ಎಂದು ಶಾಂತ ಕುಮಾರ್ ಅವರು ಆಗ್ರಹಿಸಿದ್ದಾರೆ. ಅಪರಾಧಿಗಳಿಗೆ ನೀಡಲಾದ ಕ್ಷಮಾದಾನವನ್ನು ‘‘ರದ್ದುಮಾಡಲು” ತಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

“ಅವರು ಮಾಡಿದ ಅಪರಾಧಕ್ಕಾಗಿ ವಿಶೇಷ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ. ಅತ್ಯಾಚಾರ ಮತ್ತು ಕೊಲೆಗಾಗಿ ಮಾಡಿದ್ದಕ್ಕಾಗಿ ಅವರ ಶಿಕ್ಷೆಯನ್ನು ಉಚ್ಚ ನ್ಯಾಯಾಲಯ ಎತ್ತಿಹಿಡಿದಿದೆ. ಈ ಮೂಲಕ ಅವರು ಘೋರ ಅಪರಾಧಗಳನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಇಂತಹ ಘೋರ ಅಪರಾಧಗಳ ಹೊರತಾಗಿಯೂ, ಅವರನ್ನು ಗಲ್ಲಿಗೇರಿಸಲಾಗಿಲ್ಲ ಎಂದು ನನಗೆ ಆಶ್ಚರ್ಯವಾಗಿದೆ. ಈಗ ಗುಜರಾತ್ ಸರ್ಕಾರ ವಿಶೇಷ ನಿಬಂಧನೆಯನ್ನು ಬಳಸಿಕೊಂಡು ಅವರನ್ನು ಬಿಡುಗಡೆ ಮಾಡಿದೆ ಎಂದು ತಿಳಿದ ನಂತರ ನನಗೆ ಆಶ್ಚರ್ಯವಾಗಿದೆ. ದೇಶ ಸ್ವಾತಂತ್ರ್ಯಗೊಂಡು 75 ವರ್ಷವಾಗಿದ್ದರೂ, ಮಹಿಳೆಯರು ಮತ್ತು ಹುಡುಗಿಯರ ಮೇಲಿನ ಅಪರಾಧಗಳು ಹೆಚ್ಚಾಗುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದ್ದಾರೆ.

ಗುಜರಾತ್‌ನ ಭೂಪೇಂದ್ರ ಪಟೇಲ್ ನೇತೃತ್ವದ ಬಿಜೆಪಿ ಸರ್ಕಾರವು ಸ್ವಾತಂತ್ರ್ಯ ದಿನದಂದು ತನ್ನ ಕ್ಷಮಾದಾನ ನೀತಿಯಡಿಯಲ್ಲಿ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ನಂತರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ 11 ಅಪರಾಧಿಗಳು ಗೋದ್ರಾ ಉಪ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿಲ್ಲ ಎಂದ ಸುಪ್ರೀಂ!

ಈ ಅಪರಾಧಿಗಳಿಗೆ 2002 ರಲ್ಲಿ ಗುಜರಾತ್ ಕೋಮುಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಹಲವು ಸದಸ್ಯರನ್ನು ಹತ್ಯೆಗೈದ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ರಾಜ್ಯದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿಯಿರುವ ವೇಳೆ ಈ ಕ್ಷಮಾದಾನ ನೀಡಲಾಗಿದೆ.

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆ ವಿಎಚ್‌ಪಿ ಆಗಸ್ಟ್ 17 ರಂದು ತನ್ನ ಕಚೇರಿಯಲ್ಲಿ ಅಪರಾಧಿಗಳನ್ನು ಹೂಮಾಲೆಯೊಂದಿಗೆ ಸ್ವಾಗತಿಸಿದ ನಂತರ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತು. ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ “ಪೊಳ್ಳು ಪ್ರತಿಪಾದನೆ” ಮಾಡಿದಕ್ಕಾಗಿ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದೆ. ಇಷ್ಟಾದರೂ ಈ ಬಗ್ಗೆ ಬಿಜೆಪಿ ಮೌನ ವಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...